ಭಯೋತ್ಪಾದನೆ ಬಗ್ಗೆ ಕಾಂಗ್ರೆಸ್ ಯಾವತ್ತೂ ಮೃದು ಧೋರಣೆ: ಶಾ ಟೀಕೆ
Team Udayavani, Mar 16, 2019, 6:18 AM IST
ಹೊಸದಿಲ್ಲಿ : ಕಾಂಗ್ರೆಸ್ ಪಕ್ಷ ಯಾವತ್ತೂ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿತ್ತು ಎಂದು ಆರೋಪಿಸುವ ಮೂಲಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ದೇಶದ ಭದ್ರತೆಯ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ಕಟುವಾದ ಟೀಕೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಯಾವತ್ತೂ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲ್ವಾದದ ಬಗ್ಗೆ ತುಂಬ ಸಂಕೋಚದ ಪ್ರವೃತ್ತಿ ಹೊಂದಿತ್ತು; ದೇಶದ ಭದ್ರತೆಗೆ ಬೆದರಿಕೆ ಒಡ್ಡುವ ಈ ಪಿಡುಗುಗಳ ಬಗ್ಗೆ ಅದೆಂದೂ ನಿರ್ಣಾಯಕ ದಿಟ್ಟ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಕ್ಸಮರ ನಡೆಸಿದರು.
ಕಾಂಗ್ರೆಸ್ಪಕ್ಷಕ್ಕೆ ವ್ಯತಿರಿಕ್ತವಾಗಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ರಾಷ್ಟ್ರೀಯ ಏಕತೆ, ಭದ್ರತೆ ಮತ್ತು ಭಾವೈಕ್ಯದ ಹಿತಾಸಕ್ತಿಯಲ್ಲಿ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲ್ವಾದದ ವಿರುದ್ಧ ದೃಢವಾದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಅಮಿತ್ ಶಾ ಅವರು ತಮ್ಮ ಸುದೀರ್ಘ ಬ್ಲಾಗ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಂದಹಾರ ಹೈಜಾಕಿಂಗ್ ಕೇಸನ್ನು ರಾಜಕೀಯಗೊಳಿಸುತ್ತಿರುವುದನ್ನು ಕಟುವಾಗಿ ಖಂಡಿಸಿದ್ದಾರೆ.
ಜೈಶ್ ಎ ಮೊಹಮ್ಮದ್ ಸ್ಥಾಪಕ ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಾಕಿಸ್ಥಾನದ ಮೇಲೆ ಅಂತಾರಾಷ್ಟ್ರೀಯ ಸಮುದಾಯ ತೀವ್ರವಾದ ಒತ್ತಡ ಹೇರುತ್ತಿರುವ ನಡುವೆ ರಾಹುಲ್ ಕಂದಹಾರ್ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ ಎಂದು ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್