ಗೋವಾ ಸಿಎಂಗೆ ಇಂದು ಅಗ್ನಿ ಪರೀಕ್ಷೆ


Team Udayavani, Mar 20, 2019, 12:30 AM IST

e-26.jpg

ಪಣಜಿ: ಗೋವಾದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಮಧ್ಯರಾತ್ರಿ ಅಧಿಕಾರ ಸ್ವೀಕರಿಸಿದ ಬಿಜೆಪಿ ನಾಯಕ ಪ್ರಮೋದ್‌ ಸಾವಂತ್‌ ನೇತೃತ್ವದ ಸರಕಾರ ಬುಧವಾರ ವಿಶ್ವಾಸಮತ ಕೋರಲಿದೆ. ಅದಕ್ಕಾಗಿ ಬುಧವಾರ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯ ಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಬುಧವಾರವೇ ವಿಶ್ವಾಸ ಮತ ಎದುರಿಸುತ್ತೇನೆ. ಈ ಅಗ್ನಿ ಪರೀಕ್ಷೆಯಲ್ಲಿ ಉತ್ತೀರ್ಣನಾಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 

ಬಲಾಬಲ ಹೇಗೆ?: 40 ಸ್ಥಾನಗಳಿರುವ ಗೋವಾ ವಿಧಾಸಭೆಯಲ್ಲಿ ಸರಕಾರ ರಚಿಸಲು ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ 21 ಶಾಸಕರ ಅಗತ್ಯತೆ ಇದೆ. ಸದ್ಯಕ್ಕೆ ಬಿಜೆಪಿ 12 ಸ್ಥಾನಗಳನ್ನು ಹೊಂದಿದ್ದು, ಮಹಾ ರಾಷ್ಟ್ರವಾದಿ ಗೋಮಂತಕ್‌ ಪಾರ್ಟಿ (ಎಂಜಿಪಿ), ಗೋವಾ ಫಾರ್ವಾರ್ಡ್‌ ಪಾರ್ಟಿ (ಜಿಎಫ್ಪಿ) ಪಕ್ಷಗಳ ತಲಾ ಮೂವರು ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಜತೆಗೆ, ಮೂವರು ಪಕ್ಷೇತರ ಶಾಸಕರ ಬೆಂಬಲವೂ ಇದೆ. ಮೇಲ್ನೋಟಕ್ಕೆ ಬಿಜೆಪಿಗೆ ಬಹುಮತ ಬರುವುದು ನಿರಾತಂಕ.  ಸದ್ಯದ ಪರಿಸ್ಥಿತಿಯಲ್ಲಿ, ಗೋವಾದ ಸದನದ ಒಟ್ಟು ಸದಸ್ಯರ ಸಂಖ್ಯೆ 40ರಿಂದ 36ಕ್ಕೆ ಕುಸಿದಿದೆ. ಪರ್ರಿಕರ್‌ ಹಾಗೂ ಬಿಜೆಪಿ ಶಾಸಕ ಫ್ರಾನ್ಸಿಸ್‌ ಡಿಸೋಜಾ ನಿಧನರಾ ಗಿದ್ದು, ಇಬ್ಬರು ಕಾಂಗ್ರೆಸ್‌ ಶಾಸಕರಾದ ಸುಭಾಷ್‌ ಶಿರೋಡ್ಕರ್‌ ಹಾಗೂ ದಯಾನಂದ್‌ ಸೋಪ್ಟೆ ಅವರು ತಮ್ಮ ಶಾಸಕತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಅಸಮಾಧಾನ: ಪರ್ರಿಕರ್‌ ನಿಧನದ ಬೆನ್ನಲ್ಲೇ ಭುಗಿಲೆದ್ದ ಮಿತ್ರಪಕ್ಷಗಳ ಭಿನ್ನಾಭಿಪ್ರಾಯಗಳು, ಸೋಮವಾರ ಮಧ್ಯರಾತ್ರಿಯವರೆಗೂ ನಡೆದ ಹೈಡ್ರಾಮಾ ಬುಧವಾರದ ಬೆಳವಣಿಗೆಯ ಬಗ್ಗೆ ಕಾಯುವಂತೆ ಮಾಡಿದೆ.  ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದ ಎಂಜಿಪಿ, ಜಿಎಫ್ಸಿ ಪಕ್ಷಗಳನ್ನು ಸಮಾಧಾನಪಡಿಸಲು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹರಸಾಹಸ ಮಾಡಿ ಹಲವಾರು ಸುತ್ತಿನ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಸೋಮವಾರ ಯಶಸ್ವಿಯಾಗಿದ್ದರು. ಎಲ್ಲವೂ ಸುಖಾಂತ್ಯ ಎನ್ನುವಷ್ಟರಲ್ಲಿ ವಿಜಯ್‌ ಸರ್ದೇಸಾಯ್‌ ಬಿಜೆಪಿಗೆ ಬೆಂಬಲ ಪತ್ರ ನೀಡಿರಲಿಲ್ಲ ಎಂಬ ವದಂತಿ ಹರಡಿತ್ತು.  ಆದರೆ, ರಾತ್ರಿ 12: 15ರ ಸುಮಾರಿಗೆ ರಾಜ್ಯಪಾಲರ ನಿವಾಸದ ಕದ ತಟ್ಟಿದ ಬಿಜೆಪಿ, ಎಂಜಿಪಿ ಹಾಗೂ ಜಿಎಫ್ಪಿ ನಾಯಕರು ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಸ್ವಲ್ಪ ಹೊತ್ತಿನಲ್ಲೇ ಪ್ರಮಾಣ ವಚನ ಸ್ವೀಕಾರವೂ ನಡೆಯುವಲ್ಲಿಗೆ ಗೋವಾ ರಾಜಕೀಯ ಆಂತರಿಕ ಅಸ್ಥಿರತೆಗೆ ಒಂದು ತಾರ್ಕಿಕ ತೆರೆಬಿತ್ತು. 

ಆಪದ್ಭಾಧವರಾದ ಗಡ್ಕರಿ 
ಗೋವಾ ಮಿತ್ರ ಪಕ್ಷಗಳಲ್ಲಿ ಭುಗಿಲೆದ್ದಿದ್ದ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಜಾಣತನ ಮೆರೆದಿದ್ದಾರೆ. ಜತೆಗೆ, ಪಕ್ಷಕ್ಕೆ ತಾವು ಆಪದ್ಭಾಧವ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. 2017ರಲ್ಲಿ ಸರಕಾರ ರಚನೆ ವೇಳೆ ಕೂಡ ಅವರು ಪ್ರಧಾನ ಪಾತ್ರವಹಿಸಿದ್ದರು. 

ಬಲಾಬಲ ಹೇಗೆ?
40 ಒಟ್ಟು ಸ್ಥಾನಗಳು
21 ಸರಕಾರ ರಚನೆಗೆ ಬೇಕಿರುವ ಸ್ಥಾನ ಬಿಜೆಪಿ ಮತ್ತು ಮಿತ್ರಪಕ್ಷಗಳು
12 ಬಿಜೆಪಿ
03 ಎಂಜಿಪಿ
03 ಜಿಎಫ್ಪಿ
03 ಪಕ್ಷೇತರರು

ಪ್ರತಿ ಪಕ್ಷಗಳು
14 ಕಾಂಗ್ರೆಸ್‌
01 ಎನ್‌ಸಿಪಿ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.