ಸಂಜೋತಾ ರೈಲು ಸ್ಫೋಟ ಕೇಸ್; ಸ್ವಾಮಿ ಅಸೀಮಾನಂದ ಸೇರಿ ನಾಲ್ವರು ಖುಲಾಸೆ
Team Udayavani, Mar 20, 2019, 1:06 PM IST
ನವದೆಹಲಿ: 2007ರಲ್ಲಿ ನಡೆದಿದ್ದ ಸಂಜೋತಾ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚ್ ಕುಲದ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆಯ ಕೋರ್ಟ್ ಸ್ವಾಮಿ ಅಸೀಮಾನಂದ ಸೇರಿದಂತೆ ಎಲ್ಲಾ ನಾಲ್ಕು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಸಂಜೋತಾ ರೈಲು ಸ್ಫೋಟ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲುಶಿಕ್ಷೆ ಅನುಭವಿಸುತ್ತಿದ್ದ ಸ್ವಾಮಿ ಅಸೀಮಾನಂದ, ಲೋಕೇಶ್ ಶರ್ಮಾ, ಕಮಲ್ ಚೌಹಾಣ್ ಹಾಗೂ ರಾಜೀಂದರ್ ಚೌಧರಿಯನ್ನು ವಿಶೇಷ ಎನ್ ಐಎ ಕೋರ್ಟ್ ದೋಷಮುಕ್ತಗೊಳಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಮಾರ್ಚ್ 11 2007ರಂದು ನಡೆದಿದ್ದ ಸಂಜೋತಾ ಸ್ಫೋಟ ಪ್ರಕರಣದ ಕುರಿತಂತೆ ಪಾಕಿಸ್ತಾನದ ಪ್ರತ್ಯಕ್ಷದರ್ಶಿಯ ವಿಚಾರಣೆ ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿ ಪಾಕಿಸ್ತಾನಿ ಪ್ರಜೆಯೊಬ್ಬ ಸಲ್ಲಿಸಿದ್ದ ಅರ್ಜಿಯಿಂದಾಗಿ ಪ್ರಕರಣದ ಬಗ್ಗೆ ನೀಡಬೇಕಾಗಿದ್ದ ಅಂತಿಮ ತೀರ್ಪನ್ನು ಎನ್ ಐಎ ಕೋರ್ಟ್ ಮುಂದೂಡಿತ್ತು.
ಆ ನಿಟ್ಟಿನಲ್ಲಿ ಪಾಕಿಸ್ತಾನದ ಮಹಿಳೆ ರಾಹೀಲಾ ವಾಕೀಲಾ ಎಂಬಾಕೆಯ ವಿಚಾರಣೆಯನ್ನು ಮಾರ್ಚ್ 14ಕ್ಕೆ ನಡೆಸಬೇಕೆಂದು ಎಂದು ಕೋರ್ಟ್ ಸೂಚಿಸಿತ್ತು. ಆದರೆ ತಮ್ಮ ಕಕ್ಷಿದಾರರಿಗೆ ಸಮನ್ಸ್ ದೊರಕಿಲ್ಲ. ಅಲ್ಲದೇ ವೀಸಾ ನೀಡಲು ಅಧಿಕಾರಿಗಳು ನಿರಾಕರಿಸಿದ್ದರಿಂದ ಅವರು ಖುದ್ದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಾಕೀಲಾ ಪರ ವಕೀಲರು ಕೋರ್ಟ್ ಗೆ ತಿಳಿಸಿದರು.
ಈ ಪ್ರಕರಣದ ವಿಚಾರಣೆ ನಡೆದು ಅಂತಿಮ ಹಂತದಲ್ಲಿ ಯಾಕೆ ಈ ಅರ್ಜಿ ಸಲ್ಲಿಸಬೇಕಿತ್ತು? ಈ ಹಿಂದೆಯೇ ಅವಕಾಶ ನೀಡಲಾಗಿತ್ತು ಎಂದು ನ್ಯಾಯಾಧೀಶರು ಪ್ರಶ್ನಿಸಿ, ಪಾಕಿಸ್ತಾನಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನಾಲ್ವರು ಆರೋಪಿಗಳು ಖುಲಾಸೆಗೊಂಡಿರುವುದಾಗಿ ತೀರ್ಪನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…