ಸಂಜೋತಾ ರೈಲು ಸ್ಫೋಟ ಕೇಸ್; ಸ್ವಾಮಿ ಅಸೀಮಾನಂದ ಸೇರಿ ನಾಲ್ವರು ಖುಲಾಸೆ
Team Udayavani, Mar 20, 2019, 1:06 PM IST
ನವದೆಹಲಿ: 2007ರಲ್ಲಿ ನಡೆದಿದ್ದ ಸಂಜೋತಾ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚ್ ಕುಲದ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆಯ ಕೋರ್ಟ್ ಸ್ವಾಮಿ ಅಸೀಮಾನಂದ ಸೇರಿದಂತೆ ಎಲ್ಲಾ ನಾಲ್ಕು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಸಂಜೋತಾ ರೈಲು ಸ್ಫೋಟ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲುಶಿಕ್ಷೆ ಅನುಭವಿಸುತ್ತಿದ್ದ ಸ್ವಾಮಿ ಅಸೀಮಾನಂದ, ಲೋಕೇಶ್ ಶರ್ಮಾ, ಕಮಲ್ ಚೌಹಾಣ್ ಹಾಗೂ ರಾಜೀಂದರ್ ಚೌಧರಿಯನ್ನು ವಿಶೇಷ ಎನ್ ಐಎ ಕೋರ್ಟ್ ದೋಷಮುಕ್ತಗೊಳಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಮಾರ್ಚ್ 11 2007ರಂದು ನಡೆದಿದ್ದ ಸಂಜೋತಾ ಸ್ಫೋಟ ಪ್ರಕರಣದ ಕುರಿತಂತೆ ಪಾಕಿಸ್ತಾನದ ಪ್ರತ್ಯಕ್ಷದರ್ಶಿಯ ವಿಚಾರಣೆ ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿ ಪಾಕಿಸ್ತಾನಿ ಪ್ರಜೆಯೊಬ್ಬ ಸಲ್ಲಿಸಿದ್ದ ಅರ್ಜಿಯಿಂದಾಗಿ ಪ್ರಕರಣದ ಬಗ್ಗೆ ನೀಡಬೇಕಾಗಿದ್ದ ಅಂತಿಮ ತೀರ್ಪನ್ನು ಎನ್ ಐಎ ಕೋರ್ಟ್ ಮುಂದೂಡಿತ್ತು.
ಆ ನಿಟ್ಟಿನಲ್ಲಿ ಪಾಕಿಸ್ತಾನದ ಮಹಿಳೆ ರಾಹೀಲಾ ವಾಕೀಲಾ ಎಂಬಾಕೆಯ ವಿಚಾರಣೆಯನ್ನು ಮಾರ್ಚ್ 14ಕ್ಕೆ ನಡೆಸಬೇಕೆಂದು ಎಂದು ಕೋರ್ಟ್ ಸೂಚಿಸಿತ್ತು. ಆದರೆ ತಮ್ಮ ಕಕ್ಷಿದಾರರಿಗೆ ಸಮನ್ಸ್ ದೊರಕಿಲ್ಲ. ಅಲ್ಲದೇ ವೀಸಾ ನೀಡಲು ಅಧಿಕಾರಿಗಳು ನಿರಾಕರಿಸಿದ್ದರಿಂದ ಅವರು ಖುದ್ದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಾಕೀಲಾ ಪರ ವಕೀಲರು ಕೋರ್ಟ್ ಗೆ ತಿಳಿಸಿದರು.
ಈ ಪ್ರಕರಣದ ವಿಚಾರಣೆ ನಡೆದು ಅಂತಿಮ ಹಂತದಲ್ಲಿ ಯಾಕೆ ಈ ಅರ್ಜಿ ಸಲ್ಲಿಸಬೇಕಿತ್ತು? ಈ ಹಿಂದೆಯೇ ಅವಕಾಶ ನೀಡಲಾಗಿತ್ತು ಎಂದು ನ್ಯಾಯಾಧೀಶರು ಪ್ರಶ್ನಿಸಿ, ಪಾಕಿಸ್ತಾನಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನಾಲ್ವರು ಆರೋಪಿಗಳು ಖುಲಾಸೆಗೊಂಡಿರುವುದಾಗಿ ತೀರ್ಪನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ