ಕಾಮ್ಧಾರಿಯನ್ನು ನಾಮ್ಧಾರಿ ಸಹಿಸಲ್ಲ
Team Udayavani, Mar 21, 2019, 12:30 AM IST
ನವದೆಹಲಿ: ದುಡಿಮೆಯೇ ದೇವರೆನ್ನುವ ಜನರಲ್ಲಿ (ಕಾಮ್ದಾರ್) ದ್ವೇಷ ಬಿತ್ತುವ ಕೆಲಸವನ್ನು ನಾಮಧಾರ್ (ವಂಶಪಾರಂಪರ್ಯ ರಾಜಕಾರಣಿಗಳು) ಮಾಡುತ್ತಿದ್ದಾರೆ.
ಕಾಮ್ಧಾರಿಗಳಲ್ಲಿ ಯಾರೋ ಒಬ್ಬರು ಪ್ರಧಾನಿಯಾದರೆ ಅದನ್ನು ನಾಮ್ಧಾರಿಗೆ ಸಹಿಸಿಕೊಳ್ಳಲು ಆಗುವುದಿಲ್ಲ …
ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ಟೀಕಾ ಪ್ರಹಾರ ನಡೆಸಿದ್ದಾರೆ. ಚೌಕಿದಾರ್ ಚೋರ್ ಹೈ ಎಂಬ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಬುಧವಾರ 25 ಲಕ್ಷ ಮಂದಿ ಚೌಕಿದಾರರ ಜತೆಗೆ ಪ್ರಧಾನಿ ಮೋದಿ ನಡೆಸಿದ ಸಂವಾದದಲ್ಲಿ ಈ ಮಾತುಗಳನ್ನಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಟಿವಿಗಳಲ್ಲಿ ಮೈ ಭೀ ಚೌಕಿದಾರ್ ಎಂಬ ದೊಡ್ಡ ಆಂದೋಲನವೇ ನಡೆಯುತ್ತಿದೆ. ದೇಶಭಕ್ತಿಯುಳ್ಳ ಅನೇಕರು ತಮ್ಮ ಸಾಮಾಜಿಕ ಜಾಲತಾಣದ ಹೆಸರಿನ ಜತೆಗೆ ಮೈ ಭೀ ಚೌಕಿದಾರ್ ಎಂದು ಬರೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ ಪ್ರಧಾನಿ. ವಿದೇಶಗಳಲ್ಲಿರುವ ಭಾರತೀಯರಲ್ಲೂ ಇದೊಂದು ಟ್ರೆಂಡ್ ಆಗಿದೆ. ಚೌಕೀದಾರರನ್ನು ಅವಮಾನಿಸಲು ಬಳಸಿದ ಪದವೊಂದು ಇಂದು ದೇಶಭಕ್ತಿಯ ಪ್ರತೀಕವಾಗಿದೆ ಎಂದಿದ್ದಾರೆ.
ನನ್ನ ವಿರುದ್ಧ ನೇರವಾಗಿ ಆರೋಪ ಮಾಡಲು ಧೈರ್ಯವಿಲ್ಲದ ಜನ, ನನ್ನ ವಿರುದ್ಧ ಟೀಕೆಗಳನ್ನು ಮಾಡುವಾಗ ಇಡೀ ದೇಶದಲ್ಲಿ ಸ್ವಾಭಿಮಾನದಿಂದ ದುಡಿಯುತ್ತಿರುವ ಕಾವಲುಗಾರರ ಹೆಸರನ್ನು (ಚೌಕಿದಾರ್) ಬಳಕೆಗೆ ತಂದರು ಎಂದು ಅವರು ಹೇಳಿದ್ದಾರೆ. ಚೌಕಿದಾರ್ ಚೋರ್ (ಕಾವಲುಗಾರ ಕಳ್ಳ) ಎನ್ನುವವರ ಪರವಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೃದಯಸ್ಪರ್ಶಿಯಾಗಿ ಮಾತನಾಡಿದ್ದಾರೆ. ನಮ್ಮ ವಿರುದ್ಧ ಯಾರು ಎಷ್ಟೇ ಟೀಕೆ ಮಾಡಲಿ, ನಾವು ಎದೆಗುಂದುವುದು ಬೇಡ. ಧೈರ್ಯಗೆಡುವುದು ಬೇಡಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ. ಐಎಎಫ್ ಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಯನ್ನು ಧ್ವಂಸ ಮಾಡಿದಾಗ ಪ್ರತಿಪಕ್ಷಗಳು ವ್ಯಕ್ತಪಡಿಸಿದ ಅಭಿಪ್ರಾಯ ಆಘಾತಕಾರಿಯಾದದ್ದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’