ಕಾಶ್ಮೀರದಲ್ಲಿ ಹಿಮಪಾತ: ಐವರು ಯೋಧರು ಕಣ್ಮರೆ
Team Udayavani, Dec 13, 2017, 10:18 AM IST
ಶ್ರೀನಗರ: ಕಾಶ್ಮೀರದ ಗಡಿ ನಿಯಂತ್ರಣ ರೇಖೆಗಂಟಿ ಕೊಂಡಿರುವ ಗುರೆಜ್ ಮತ್ತು ನೌಗಮ್ ಸೆಕ್ಟರ್ಗಳಲ್ಲಿ ಮಂಗಳವಾರ ಸಂಭವಿಸಿದ ಹಿಮಪಾತದಿಂದ ಐವರು ಯೋಧರು ಕಾಣೆಯಾಗಿದ್ದಾರೆ.
ಕುಪ್ವಾರ ಜಿಲ್ಲೆಯ ನೌಗಮ್ ವಲಯದಲ್ಲಿ ಇಬ್ಬರು ಯೋಧರು ಕಾಲುಜಾರಿ ಬಿದ್ದು ಕಾಣೆಯಾಗಿದ್ದಾರೆ. ಬಂಡಿಪೋರ ಜಿಲ್ಲೆಯ ಉಪವಲಯದಲ್ಲಿ ತೀವ್ರ ಸ್ವರೂಪದ ಹಿಮಪಾತವಾಗುತ್ತಿದ್ದ ವೇಳೆ ಮೂವರು ಯೋಧರು ಕಣ್ಮರೆ ಯಾದ್ದಾರೆ. ಭಾರೀ ಪ್ರಮಾಣದಲ್ಲಿ ಹಿಮ ಬೀಳುತ್ತಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಇದಕ್ಕೂ ಮೊದಲು ಈ ಕುರಿತು ಮಾಹಿತಿ ನೀಡಿದ್ದ ಪೊಲೀಸ್ ಅಧಿಕಾರಿ, ಗುರೆಜ್ನ ತಮ್ಮ ಸೇನಾ ನೆಲೆ ಮೇಲೆ ಹಠಾತ್ ಹಿಮಪಾತವಾದ ಬಳಿಕ ಮೂವರು ಯೋಧರು ಕಾಣೆಯಾಗಿ ದ್ದಾರೆ ಎಂದಿದ್ದರು.
ಜಮ್ಮು-ಕಾಶ್ಮೀರಾದ್ಯಂತ ಹಿಮಪಾತವಾಗುತ್ತಿದ್ದು, ಇದೇ ಸ್ಥಿತಿ ಗುರುವಾರದವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ