ನ್ಯಾ| ಜೋಸೆಫ್ ನೇಮಕ ತಡೆಗೆ ಆಕ್ಷೇಪ
Team Udayavani, Apr 27, 2018, 6:00 AM IST
ಹೊಸದಿಲ್ಲಿ: ನ್ಯಾಯಾಂಗ ನೇಮಕ ವಿಚಾರ ಮತ್ತೂಮ್ಮೆ ಬಹಿರಂಗ ರಂಪಾಟಕ್ಕೆ ಕಾರಣವಾಗಿದೆ. ಸುಪ್ರೀಂ ನ್ಯಾಯಮೂರ್ತಿ ಹುದ್ದೆಗೆ ಉತ್ತರಾಖಂಡ ಹೈಕೋರ್ಟ್ ಮುಖ್ಯ ನ್ಯಾ| ಕೆ.ಎಂ. ಜೋಸೆಫ್ ಹೆಸರನ್ನು ತಿರಸ್ಕರಿಸಿರುವ ಕೇಂದ್ರ ಸರಕಾರವು ಪುನರ್ಪರಿಶೀಲನೆ ಮಾಡುವಂತೆ ಕೊಲೀಜಿಯಂಗೆ ಮನವಿ ಮಾಡಿದೆ.
ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ದೀಪಕ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ಸರಕಾರವು ನಿಯಮಕ್ಕೆ ಅನುಗುಣವಾಗಿಯೇ ನ್ಯಾ|ಜೋಸೆಫ್ ಹೆಸರನ್ನು ಮರು ಪರಿಶೀಲಿಸುವಂತೆ ಕೋರಿದೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ, ವಿವಾದ ಇತ್ಯರ್ಥ ಆಗುವವರೆಗೆ ನ್ಯಾ| ಇಂದು ಮಲ್ಹೋತ್ರಾ ನೇಮಕಕ್ಕೆ ತಡೆ ತರಬೇಕು ಎಂಬ ಕೆಲವರ ಕೋರಿಕೆಯನ್ನು ಒಪ್ಪಲಾಗದು ಎಂದೂ ಸಿಜೆಐ ಹೇಳಿದ್ದಾರೆ.
ಈ ಬೆಳವಣಿಗೆ ಕೇಂದ್ರ ಹಾಗೂ ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಸುಪ್ರೀಂ ನ್ಯಾಯಮೂರ್ತಿಯಾಗಿ ನ್ಯಾ| ಇಂದು ಮಲ್ಹೋತ್ರಾ ಹೆಸರನ್ನು ಅಂತಿಮಗೊಳಿಸಿದ್ದ ಕೇಂದ್ರ ಸರಕಾರ, ನ್ಯಾ| ಕೆ.ಎಂ. ಜೋಸೆಫ್ ಹೆಸರನ್ನು ಅಂತಿಮಗೊಳಿಸದೆ ವಾಪಸ್ ಕಳುಹಿಸಿದೆ. ಈ ಕುರಿತಂತೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು ಸಿಜೆಐಗೆ ಗುರುವಾರ 6
ಪುಟಗಳ ಪತ್ರ ಬರೆದಿದ್ದಾರೆ. ಅವರಿಗಿಂತ ಹಿರಿಯ ನ್ಯಾಯಮೂರ್ತಿಗಳು ಇರುವಾಗ ಕೊಲೀಜಿಯಂ ಶಿಫಾರಸು ಸಮಂಜಸ ವಲ್ಲ. ಈ ಬಗ್ಗೆ ಕಾರಣ ಕೊಡಬೇಕು ಎಂದಿದೆ.
ಕಾಂಗ್ರೆಸ್ ಆಕ್ಷೇಪ
ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಕಪಿಲ್ ಸಿಬಲ್ ಮಾತನಾಡಿ, ನ್ಯಾಯಾಂಗದ ಸ್ವಾತಂತ್ರ್ಯವೇ ಅಪಾಯದಲ್ಲಿದೆ ಎಂದು ಟೀಕಿಸಿದ್ದಾರೆ. ನಮ್ಮ ನ್ಯಾಯಾಂಗ ಒಟ್ಟಾಗಿ ನಿಲ್ಲದೇ ಇದ್ದರೆ ಪ್ರಜಾ ಪ್ರಭುತ್ವಕ್ಕೇ ಅಪಾಯ ಬಂದೀತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ