ಚಟುವಟಿಕೆಯ ಕೇಂದ್ರವಾದ ರಾಜಭವನ
Team Udayavani, May 17, 2018, 6:00 AM IST
ಬೆಂಗಳೂರು: ಅತಂತ್ರ ವಿಧಾನಸಭೆ ಹಿನ್ನೆಲೆಯಲ್ಲಿ ರಾಜಭವನ ಬುಧವಾರ ಇಡೀ ದಿನ ಬಿರುಸಿನ ರಾಜಕೀಯ ಚಟುವಟಿಕೆಯ ಕೇಂದ್ರವಾಗಿತ್ತು. ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯಡಿಯೂರಪ್ಪ ನೇಮಕವಾದ ಬಳಿಕ, ರಾಜಭವನಕ್ಕೆ ಬಂದ ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾಬ್ಡೇಕರ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ವಾಲಾ ಅವರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತು. ಬಳಿಕ ಯಡಿಯೂರಪ್ಪ ಮಾತನಾಡಿ, ರಾಜ್ಯಪಾಲರು ಅವಕಾಶ ನೀಡುವ ನಿರೀಕ್ಷೆಯಿದ್ದು, ಸರ್ಕಾರ ರಚಿಸುವುದು ನಿಶ್ಚಿತ ಎಂದು ಹೇಳಿದರು.
ಮಧ್ಯಾಹ್ನದ ವೇಳೆಗೆ ಕೇಂದ್ರ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ರಾಜಭವನಕ್ಕೆ ಭೇಟಿ ನೀಡಿದರು. ಸಂಜೆ ವೇಳೆಗೆ, ಕಾಂಗ್ರೆಸ್, ಜೆಡಿಎಸ್ ನಾಯಕರ ದಂಡು ರಾಜಭವನದತ್ತ ದೌಡಾಯಿಸಿತು. ಕುಮಾರಸ್ವಾಮಿ ನೇತೃತ್ವದಲ್ಲಿ ಸಾಕಷ್ಟು ಜೆಡಿಎಸ್ ಶಾಸಕರು ಸಂಜೆ 5 ಗಂಟೆ ಹೊತ್ತಿಗೆ ರಾಜಭವನಕ್ಕೆ ಬಂದು ಪರೇಡ್ಗೆ ಯತ್ನಿಸಿದರಾದರೂ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ರಮೇಶ್ಬಾಬು ಸೇರಿದಂತೆ 10 ಮಂದಿಗಷ್ಟೇ ರಾಜ್ಯಪಾಲರ ಭೇಟಿಗೆ ಅವಕಾಶ ನೀಡಲಾಯಿತು. ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ. ಶಿವಕುಮಾರ್ ಇತರರು ರಾಜಭವನಕ್ಕೆ ಭೇಟಿ ನೀಡಿದರು. ಪರಮೇಶ್ವರ್, ಕೃಷ್ಣ ಬೈರೇಗೌಡ ಸೇರಿದಂತೆ 10 ಮಂದಿ ರಾಜ್ಯಪಾಲರನ್ನು ಭೇಟಿಯಾದರು.
ರಾಜ್ಯಪಾಲರ ಭೇಟಿ ಜಂಟಿ ಹೇಳಿಕೆ ನೀಡಿದ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್ ಬೆಂಬಲಿಸಲು ನಿರ್ಣಯ
ಕೈಗೊಳ್ಳಲಾಗಿದ್ದು, ಈ ಸಂಬಂಧ ಸರ್ಕಾರ ರಚನೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ, ರಾಜಭವನದ ಎದುರು ಜಮಾಯಿಸಿದ್ದ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ