ಖಾರ್ ಪೂರ್ವ: ಶನಿ ಮಹಾತ್ಮ ಸೇವಾ ಸಮಿತಿಯ ಸುವರ್ಣ ಮಹೋತ್ಸವ
Team Udayavani, Feb 8, 2017, 4:02 PM IST
ಮುಂಬಯಿ: ಖಾರ್ ಪೂರ್ವದ ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯ ಸಂಚಾಲಕತ್ವದ ಶ್ರೀ ಶನಿಮಹಾತ್ಮ ಮಂದಿರದ ಸುವರ್ಣ ಮಹೋತ್ಸವ ಸಂಭ್ರಮವು ಫೆ. 5 ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವರ ಭವನದ ಸಭಾಗೃಹದಲ್ಲಿ ವಿಜೃಂಭಣೆಯಿಂದ ನಡೆಯಿತು.
ಸಮಾರಂಭದಲ್ಲಿ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ನಿರಂತರ 50 ವರ್ಷಗಳ ಸೇವೆಸಲ್ಲಿಸಿದ ಯೋಗೆಶ್ ಕೆ. ಹೆಜ್ಮಾಡಿ ಮತ್ತು ಲೀಲಾ ಯೋಗೇಶ್ ದಂಪತಿಯನ್ನು ಅತಿಥಿಗಳು ಸೇವಾ ಸಮಿತಿ ಪರವಾಗಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಅವರು ವಿಶೇಷವಾಗಿ ಸಮ್ಮಾನಿಸಿ ಗೌರವಿಸಿದರು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ಅಸೋಸಿಯೇಶನ್ನ ಸೇವಾದಳದ ಅನನ್ಯ ಸೇವೆಯನ್ನು ಪರಿಗಣಿಸಿ ಗೌರವಿಸಲಾಯಿತು. ಸೇವಾದಳ ಪಡೆಯ ಸಿಪಾಯಿಗಳು, ಮಹಿಳಾ ಕಾರ್ಯಕರ್ತೆಯರನ್ನು ಸೇರಿಕೊಂಡು ಸೇವಾದಳದ ದಳಪತಿ ಗಣೇಶ್ ಕೆ. ಪೂಜಾರಿ, ಉಪ ದಳನಾಯಕ ಸುಧಾಕರ ಎ. ಪೂಜಾರಿ ಅವರನ್ನು ಸಮ್ಮಾನಿಸಿ ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶನಿ ಮಹಾತ್ಮ ಸೇವಾ ಸಮಿತಿಯ ಅಧ್ಯಕ್ಷ ಶಂಕರ್ ಕೆ. ಸುವರ್ಣ, ಗೌರವಾಧ್ಯಕ್ಷ ಶ್ರೀಧರ್ ಜೆ. ಬಂಗೇರ, ಉಪಾಧ್ಯಕ್ಷ ದೇವೇಂದ್ರ ವಿ. ಬಂಗೇರ, ಗೌರವ ಪ್ರಧಾನ ಕೋಶಾಧಿಕಾರಿ ನಾಗೇಶ್ ಜಿ. ಸುವರ್ಣ, ಮಹಿಳಾ ಮಂಡಳಿಯ ಮುಖ್ಯಸ್ಥೆ ಕೇಸರಿ ಬಿ. ಅಮೀನ್, ಪ್ರಕಾಶ್ ಮೂಡಬಿದ್ರಿ ಮತ್ತಿತರ ಪದಾಧಿಕಾರಿಗಳು, ಸದಸ್ಯರು, ಅಸೋಸಿಯೇಶನ್ನ ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್, ಗೌರವ ಪ್ರಧಾನ ಕೋಶಾಧಿಕಾರಿ ಮಹೇಶ್ ಸಿ. ಕಾರ್ಕಳ, ದಾಮೋದರ ಸಿ. ಕುಂದರ್, ನ್ಯಾಯವಾದಿ ಎಸ್. ಬಿ. ಅಮೀನ್, ಭಾರತಿ ನಿಟ್ಟೇಕರ್, ಹರಿದಾಸ ಜಿ. ಶೆಟ್ಟಿ ವಿದ್ಯಾವಿಹಾರ್, ನಿಲೇಶ್ ಪೂಜಾರಿ ಪಲಿಮಾರ್, ಹರೀಶ್ ಅಂಚನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ