ಪುಣೆ ತುಳುಕೂಟದ ವಾರ್ಷಿಕ ಕ್ರೀಡೋತ್ಸವದ ಸಮಾರೋಪ ಸಮಾರಂಭ


Team Udayavani, Jan 17, 2019, 12:47 PM IST

1601mum01.jpg

ಪುಣೆ: ಪುಣೆ ತುಳುಕೂಟದ ಇಂದಿನ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಸಂತಸ ವಾಗುತ್ತಿದೆ. ಹೊರನಾಡಿನಲ್ಲಿದ್ದುಕೊಂಡು ಸಂಘ ಸಂಸ್ಥೆಗಳ ಮೂಲಕ ಒಗ್ಗಟ್ಟಿನಿಂದ, ಸ್ನೇಹ ಸೌಹಾರ್ದದಿಂದ ಬೆಸೆದುಕೊಂಡು ಕ್ರೀಡಾಕೂಟದಂತಹ ಚಟುವಟಿಕೆಗಳನ್ನು ಮಾಡುತ್ತಿರುವ ಪುಣೆ ತುಳುಕೂಟದ ಕಾರ್ಯ ಅಭಿನಂದನೀಯವಾಗಿದೆ. ಕ್ರೀಡಾಕೂಟವೆಂದರೆ  ಕೇವಲ ಸ್ಪರ್ಧೆಯಲ್ಲ. ಅದೊಂದು ಸ್ನೇಹ ಸಮ್ಮಿಲನವೆನ್ನಬಹುದಾಗಿದೆ. ಪ್ರತಿಯೊಬ್ಬರಿಗೂ ದೇಹಾರೋಗ್ಯ ಅಗತ್ಯವಾಗಿ ಬೇಕಾಗಿದೆ. ಅದಕ್ಕಾಗಿ ಬೇರೆ ಬೇರೆ  ರೀತಿಯ ಕ್ರೀಡೆಯಲ್ಲಿ  ನಮ್ಮನ್ನು ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ  ಎಂದು ಅಂತಾರಾಷ್ಟ್ರೀಯ ವೈಟ್‌ ಲಿಫ್ಟರ್‌  ಶ್ಯಾಮಲಾ ಶೆಟ್ಟಿ ಅವರು ನುಡಿದರು.

ಅವರು ಜ. 13 ರಂದು ನಗರದ ಬಿಎಂಸಿಸಿ  ಕಾಲೇಜು ಮೈದಾನದಲ್ಲಿ ನಡೆದ ಪುಣೆ ತುಳುಕೂಟದ ವಾರ್ಷಿಕ ಕ್ರೀಡಾಕೂಟದ  ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ, ಇಂತಹ ಕ್ರೀಡಾಸ್ಪರ್ಧೆಗಳು ಎಲ್ಲೆಲ್ಲಿ ನಡೆ ಯುತ್ತವೆಯೋ ಅಗತ್ಯವಾಗಿ ಭಾಗವಹಿಸುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕಾಗಿದೆ. ನಾನು ಬಾಲ್ಯ   ದಿಂದಲೇ ಪರಿಶ್ರಮಪಟ್ಟು ಕ್ರೀಡಾಕ್ಷೇತ್ರದಲ್ಲಿ ಗುರುತಿಸಿಕೊಂಡು ಹಂತಹಂತವಾಗಿ ಸಾಧನೆಯನ್ನು ಮಾಡಿದ್ದೇನೆ. ಮಕ್ಕಳು  ಶಿಕ್ಷಣ ದೊಂದಿಗೆ ಪ್ರಯತ್ನಪಟ್ಟರೆ ಕ್ರೀಡಾಕ್ಷೇತ್ರದಲ್ಲಿ ಸಾಧನೆಯನ್ನು ಮಾಡಬಹುದಾಗಿದೆ ಎಂದರು.

ಆಳ್ವಾಸ್‌ ಕಾಲೇಜು ಮೂಡಬಿದಿರೆ ಇದರ ಕ್ರೀಡಾ ತರಬೇತುದಾರ ಪ್ರಮೋದ್‌ ಕುಮಾರ್‌ ಶೆಟ್ಟಿ ಅವರು ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ, ಪುಣೆಯಲ್ಲಿ ಜಾತಿಭೇದವಿಲ್ಲದೆ ವಿವಿಧ ವಯೋಮಾನದ ತುಳುನಾಡಿನ ಬಂಧುಗಳನ್ನು  ಒಗ್ಗೂಡಿಸಿ ಕೊಂಡು ಮಾಡುತ್ತಿರುವ ಕ್ರೀಡಾಕೂಟದಲ್ಲಿ ಭಾಗವಹಿಸಿರು ವುದಕ್ಕೆ ಹೆಮ್ಮೆಯಾಗುತ್ತಿದೆ. ಇದೊಂದು ಸಂತೋ ಷದ ಕೂಟವೆನ್ನಬಹುದಾಗಿದೆ. ನಮ್ಮೆಲ್ಲರ ಆರೋಗ್ಯ ವೃದ್ಧಿಗಾಗಿ ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳಬೇಕಾ ಗಿದೆ. ಆರೋಗ್ಯವಂತ ದೇಹ ನಮ್ಮದಾದರೆ ಆರೋಗ್ಯವಂತ ಮನಸ್ಸೂ ನಮ್ಮದಾಗುತ್ತದೆ ಎಂದರು.
ಅತಿಥಿಗಳಾಗಿ ಉಪಸ್ಥಿತರಿದ್ದ ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಪೂಂಜಾ ಮಾತನಾಡಿ, ಪುಣೆ ತುಳುಕೂಟದ ಇಂದಿನ ಕ್ರೀಡಾಕೂಟದಲ್ಲಿ ಭಾಗಿಯಾಗಿ ರುವುದಕ್ಕೆ ಸಂತೋಷವಾಗುತ್ತಿದೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರೆಲ್ಲರೂ ಉತ್ಸಾಹದಿಂದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಪಟ್ಟಿರುತ್ತಾರೆ. ಇಲ್ಲಿ ಗೆಲುವು ಸೋಲುಗಳ ಬಗ್ಗೆ  ಚಿಂತಿಸದೆ ನಮ್ಮೆಲ್ಲರ ಭಾಗವಹಿಸುವಿಕೆಯೇ ಮುಖ್ಯ ಎಂಬುವುದನ್ನು ಮನಗಂಡು ಮುಂದಿನ ವರ್ಷಗಳಲ್ಲಿ ಇನ್ನೂ ಉತ್ಸಾಹದಿಂದ ಭಾಗವಹಿಸಿ ನಮ್ಮ ಸಂಘದ ಜೊತೆ ಸಹಕಾರ ನೀಡಬೇಕಾಗಿದೆ ಎಂದು ನುಡಿದರು.

ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ತುಳುಕೂಟದ ಗೌರವಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ಕಾರ್ಯದರ್ಶಿ ಅರವಿಂದ ರೈ, ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ತುಳುಕೂಟ ಪಿಂಪ್ರಿ-ಚಿಂಚಾÌಡ್‌ ಇದರ ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಕುರ್ಕಾಲ್‌, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಅರವಿಂದ ರೈ ಉಪಸ್ಥಿತರಿದ್ದು ಸಂಘದ ಯಶಸ್ವಿ ಕ್ರೀಡಾಕೂಟಕ್ಕೆ ಅಭಿನಂದಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಸಂಘದ ಕ್ರೀಡಾ ಕಾರ್ಯಾಧ್ಯಕ್ಷ ಯಶವಂತ್‌ ಶೆಟ್ಟಿ ತಾಮಾರು, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ದಿವಾಕರ ಶೆಟ್ಟಿ ಮಾಣಿಬೆಟ್ಟು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷೆ ಗೀತಾ ಡಿ. ಪೂಜಾರಿ ಉಪಸ್ಥಿತರಿದ್ದರು. ಅತಿಥಿಗಳನ್ನು ಶಾಲು ಹೊದೆಸಿ, ಪುಷ್ಪಗುಚ್ಚ, ಸ್ಮರಣಿಕೆಯನ್ನಿತ್ತು  ಸತ್ಕರಿಸಲಾಯಿತು.
ಕ್ರೀಡಾಕೂಟದಲ್ಲಿ ಭಾಗವಹಿಸಿದ 9 ವರ್ಷದೊಳಗಿನ ಎÇÉಾ ಮಕ್ಕಳಿಗೆ ಪ್ರೋತ್ಸಾಹದಾಯಕ ಕ್ರೀಡಾ ಪದಕಗಳನ್ನು ನೀಡಲಾಯಿತು. 

ಕ್ರೀಡೋತ್ಸವದಲ್ಲಿ ಭಾಗವಹಿಸಿ ಬಹುಮಾನಗಳನ್ನು ಗಳಿಸಿದ ಕ್ರೀಡಾಳುಗಳಿಗೆ ಟ್ರೋಫಿಗಳನ್ನು ಅತಿಥಿಗಳ ಹಸ್ತದಿಂದ ನೀಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಗಣ್ಯರುಗಳನ್ನು  ಪುಷ್ಪಗುತ್ಛ ನೀಡಿ ಗೌರವಿಸಲಾಯಿತು. ಕ್ರೀಡೋತ್ಸವಕ್ಕೆ ಪ್ರಾಯೋಜಕತ್ವ ನೀಡಿದ ಪ್ರಾಯೋಜಕರುಗಳನ್ನು  ಗೌರವಿಸಲಾಯಿತು. ಕ್ರೀಡಾಸಮಿತಿ ಉಪ ಕಾರ್ಯಾಧ್ಯಕ್ಷ ಪ್ರಕಾಶ್‌ ಪೂಜಾರಿ, ಪ್ರಿಯಾ ಎಚ್‌. ದೇವಾಡಿಗ, ಯಶವಂತ್‌ ಶೆಟ್ಟಿ ತಾಮಾರು  ಕ್ರೀಡಾ ಸ್ಪರ್ಧೆಗಳನ್ನು ನಡೆಸಿಕೊಡುವಲ್ಲಿ ಸಹಕಾರ ನೀಡಿದರು. ದೇಶಭಕ್ತಿಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮವು ಕೊನೆಗೊಂಡಿತು.

 ಇಂದಿನ ಕ್ರೀಡಾಕೂಟದಲ್ಲಿ ಬಹುಸಂಖ್ಯೆಯಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದ ತುಳು-ಕನ್ನಡಿಗರಿಗೆ ವಂದನೆಗಳು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರೆಲ್ಲರೂ ಇಂದಿನ  ಕ್ರೀಡಾಕೂಟದ ಆಯೋಜನೆಗೆ ಶ್ರಮಿಸಿದ್ದು ಅವರೆಲ್ಲರಿಗೂ ಕೃತಜ್ಞತೆಗಳು. ಮುಂದೆಯೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಘವನ್ನು ಬೆಂಬಲಿಸಿ .
 – ಮೋಹನ್‌ ಶೆಟ್ಟಿ ಎಣ್ಣೆಹೊಳೆ ಅಧ್ಯಕ್ಷರು, ಪುಣೆ ತುಳುಕೂಟ
 
ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.