ಡೊಂಬಿವಲಿ ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಲ ಸಾಮೂಹಿಕ ಶನಿಶಾಂತಿ
Team Udayavani, Feb 15, 2017, 3:29 PM IST
ಡೊಂಬಿವಲಿ: ರಾಜಾಪುರ ಸಾರಸ್ವತ ಸಮಾಜ ಡೊಂಬಿವಲಿ ಇದರ ಶ್ರೀ ವರದ ಸಿದ್ದಿವಿನಾಯಕ ಸೇವಾ ಮಂಡಲ ಡೊಂಬಿವಲಿ ಇದರ ವತಿಯಿಂದ ಶ್ರೀ ಶನಿದೇವರ ಧನು ರಾಶಿಯ ಪ್ರವೇಶದ ಸುಸಂದರ್ಭದಲ್ಲಿ ಶ್ರೀ ಮಹಾಗಣಪತಿ ಮಂದಿರದಲ್ಲಿ ಸಾಮೂಹಿಕ ಶ್ರೀ ಶನಿಶಾಂತಿ ಹವನ ವನ್ನು ಇತ್ತೀಚೆಗೆ ಹಮ್ಮಿ ಕೊಳ್ಳಲಾಗಿತ್ತು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಶ್ರೀ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಪ್ರಾರ್ಥನೆ, ಮಧ್ಯಾಹ್ನ 12.30ರಿಂದ ಹವನ ಪೂರ್ಣಾಹುತಿ ನಡೆಯಿತು. ದೇವಳದ ಪ್ರಧಾನ ಅರ್ಚಕ ರಾಜಶೇಖರ ಭಟ್ ಅವರ ನೇತೃತ್ವದಲ್ಲಿ ಗಣಪತಿ ಪೂಜೆ, ನವಗ್ರಹ ಪೂಜೆ, ಶ್ರೀ ಶನಿಜಪ, ಪೂಜೆ, ಶನಿಶಾಂತಿ ಹವನ ಮತ್ತು ಶ್ರೀ ಮಹಾಗಣಪತಿ ದೇವರ ಮಹಾ ಪೂಜೆಯನ್ನು ಆಯೋಜಿಸಲಾಗಿತ್ತು.
ಸ್ವಸಮಾಜದ ಮತ್ತು ತುಳು-ಕನ್ನಡದ ಸುಮಾರು 200ಕ್ಕೂ ಅಧಿಕ ಭಕ್ತಾದಿಗಳು ಶನಿಶಾಂತಿ ಹವನದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ದೇವರ ಪೂಜಾ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಳದ ವತಿಯಿಂದ ಮಹಾಪ್ರಸಾದ ರೂಪದಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ 350ಕ್ಕೂ ಅಧಿಕ ಭಕ್ತಾದಿಗಳು ಪಾಲ್ಗೊಂಡಿದ್ದರು. ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ