ಭೀಮ್‌ಸೇನ್‌ ಜೋಶಿ ಹಿಮಾಲಯಕ್ಕೆ ಸಮಾನರು: ಪಂ. ಉಪೇಂದ್ರ ಭಟ್‌


Team Udayavani, Feb 15, 2017, 3:42 PM IST

14-Mum04a.jpg

ಡೊಂಬಿವಲಿ: ಗಾನ ಭಾಸ್ಕರ, ಭಾರತ ರತ್ನ ಪಂಡಿತ್‌ ಭೀಮಸೇನ್‌ ಜೋಶಿ ಅವರು ಸಂಗೀತ ಕ್ಷೇತ್ರದಲ್ಲಿ ಹಿಮಾಲಯಕ್ಕೆ ಸಮಾನರಾಗಿದ್ದು, ಅವರ ಸಂಗೀತ ಗರಡಿಯಲ್ಲಿ ಪಳಗಿದ ನಾನು ಒಂದು ಮುಷ್ಟಿ ಹಿಮಮಾತ್ರ. ಅಂತಹ ಮಹಾನ್‌ ಗುರುಗಳನ್ನು ಪಡೆದ ನಾನೇ ಭಾಗ್ಯವಂತ ಎಂದು ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಪಂಡಿತ್‌ ಉಪೇಂದ್ರ ಭಟ್‌ ಅವರು ಅಭಿಪ್ರಾಯಿಸಿದರು.

ಫೆ. 12ರಂದು ಸಂಜೆ ಡೊಂಬಿವಲಿ ಪೂರ್ವದ ಸಾವಿತ್ರಿಭಾಯಿ ಫುಲೆ ಸಭಾಗೃಹದಲ್ಲಿ ಜಿಎಸ್‌ಬಿ ಮಂಡಳ ಡೊಂಬಿವಲಿ ಆಯೋಜಿಸಿದ್ದ ವಾರ್ಷಿಕ ಪಂಡಿತ್‌ ಭೀಮಸೇನ್‌ ಜೋಶಿ ಸಂಸ್ಮರಣ ಪ್ರಶಸ್ತಿ ಪ್ರದಾನ ಹಾಗೂ ಸಂಗೀತ ಸಂಭ್ರಮ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಭೀಮಸೇನ್‌ ಜೋಶಿ ಅವರು ಹಾಡಿದ್ದೆ ಹಾಡಾಗುತ್ತಿತ್ತು.  ಆದರೆ ನಾವು ಮಾತ್ರ ಅವರು ಹಾಡಿದ ಹಾಡುಗಳನ್ನು ಕಲಿತು ಹಾಡಬೇಕಿತ್ತು. ಮತ್ತೆ ಪುನರ್ಜನ್ಮ ಎಂಬುದಿದ್ದರೆ ಅವರ ಶಿಷ್ಯನಾಗಿ ಮತ್ತೆ ಹುಟ್ಟಲು ಬಯಸುತ್ತೇನೆ. ಇಂದು ಪಂಡಿತ್‌ ಭೀಮಸೇನ ಜೋಶಿ ಅವರ ಸಂಸ್ಮರಣೆಯ ಪ್ರಶಸ್ತಿಯು ಅವರ ಶಿಷ್ಯರಾದ ಪಂಡಿತ್‌ ಓಂಕಾರ್‌ ಗುಲ್ವಾಡಿ ಮತ್ತು ಪಂಡಿತ್‌ ವಸಂತ ರಾವ್‌ ಅಜಗಾಂವ್ಕರ್‌ ಅವರ ಹಸ್ತದಿಂದ ಪ್ರದಾನಿಸಿರುವುದು ಹೃದಯ ತುಂಬಿ ಬಂದಿದೆ. ವಿದೇಶಗಳಲ್ಲಿ ದೊರೆತ ಸಮ್ಮಾನಕ್ಕಿಂತಲೂ ಇಂದು ತಾಯ್ನಾಡಿನ ಸಮಾಜ ಬಾಂಧವರು ಪ್ರಶಸ್ತಿಯನ್ನು ನೀಡಿದ್ದು, ಜೀವನದ ಬಹು ಸಂತೋಷದ ಕ್ಷಣವಾಗಿದೆ. ಇದನ್ನು ಜೀವಮಾನ ಶ್ರೇಷ್ಠ ಪ್ರಶಸ್ತಿ ಎಂದು ಭಾವಿಸುತ್ತೇನೆ. ನನ್ನನ್ನು ಗುರುತಿಸಿ ಪ್ರಶಸ್ತಿ ಪ್ರದಾನಿಸಿ ಜಿಎಸ್‌ಬಿ ಮಂಡಳ ಡೊಂಬಿವಲಿ ಸಂಸ್ಥೆಗೆ ಋಣಿಯಾಗಿದ್ದೇನೆ ಎಂದರು.

ಸಮಾರಂಭದಲ್ಲಿ ಪಂಡಿತ್‌ ಉಪೇಂದ್ರ ಭಟ್‌ ಅವರನ್ನು ಸಂಸ್ಥೆಯ 2017 ನೇ ಸಾಲಿನ ಪಂಡಿತ್‌ ಭೀಮಸೇನ್‌ ಜೋಶಿ ಸಂಸ್ಮರಣ ಪ್ರಶಸ್ತಿಯನ್ನು ಪ್ರದಾನಿಸಿ, ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರ ಹಾಗೂ ಗೌರವ ನಿಧಿಯನ್ನಿತ್ತು ಗೌರವಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹಿರಿಯ ಗಾಯಕ ಪಂಡಿತ್‌ ವಸಂತರಾವ್‌ ಅಜಗಾಂವ್ಕರ, ಗೌರವ ಅತಿಥಿ ಗಳಾಗಿ ಉದ್ಯಮಿ ಹೇಮಂತ್‌ ಬಾಂದೋಡ್ಕರ್‌, ಜಿ. ಎಸ್‌. ಬಿ. ಸೇವಾ ಮಂಡಳ ಸಾಯನ್‌ ಮುಂಬಯಿ ಕೋಶಾಧಿಕಾರಿ ವಿಜಯ ಭಟ್‌, ಜಿಎಸ್‌ಬಿ ಶಿಕ್ಷಣ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಡಾ| ಯೋಗೇಶ್‌ ಆಚಾರ್ಯ, ವೈದ್ಯ ಡಾ| ಘನಶ್ಯಾಮ್‌ ಶಿರಾಲಿ, ತಬಲಾ ವಾದಕ ಪಂಡಿತ್‌ ಓಂಕಾರನಾಥ ಗುಲ್ವಾಡಿ, ಜಿಎಸ್‌ಬಿ ಟೆಂಪಲ್‌ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಅವಧೂತ ದಾಬೋಳ್ಕರ, ಜಿಎಸ್‌ಬಿ ಟೆಂಪಲ್‌ ಟ್ರಸ್ಟ್‌ನ ಪ್ರವೀಣ್‌ ಕಾನವಿಂದೆ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಮನೋಹರ ಪೈ ಹಾಗೂ ಕಾರ್ಯದರ್ಶಿ ನಿತ್ಯಾನಂದ ಶೆಣೈ ಅವರು ಅತಿಥಿಗಳನ್ನು ಗೌರವಿಸಿದರು. ಸಂಗೀತ ಕಾರ್ಯಕ್ರಮ ನೀಡಿದ ಗಾಯಕ ರುತುಜಾ ಲಾಡ್‌, ರವೀಂದ್ರ ಪೈ, ವರ್ಷಾ ಪ್ರಭು, ಹಾರ್ಮೋನಿಯಂನಲ್ಲಿ ಸಹಕರಿಸಿದ ವಿನೋದ್‌ ಪದಗೆ, ತಬಲಾ ವಾದಕ ರಾಜೇಶ್‌ ಭಾಗವತ್‌, ಪಕ್ವಾಜ್‌ನಲ್ಲಿ ಸಹಕರಿಸಿದ ಮಂಗಲ್‌ದಾಸ್‌ ಗುಲ್ವಾಡಿ, ನಿರ್ವಹಣೆಗೈದ ಮೋಹನ್‌ ಕಾನ್ಹರೆ ಅವರನ್ನು ಹಿರಿಯ ಕಲಾವಿದ ಪಂಡಿತ್‌ ಉಪೇಂದ್ರ ಭಟ್‌ ಹಾಗೂ ಪಂಡಿತ್‌ ಓಂಕಾರ್‌ನಾಥ್‌ ಗುಲ್ವಾಡಿ ಅವರು ಗೌರವಿಸಿದರು.

ಅತಿಥಿ-ಗಣ್ಯರು ಜ್ಯೋತಿ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಸಂಯೋಜಕ ವಿ. ಎನ್‌. ಭಟ್‌ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಅಧ್ಯಕ್ಷ ಮನೋಹರ್‌ ಪೈ ಸ್ವಾಗತಿಸಿದರು. ಕೊನೆಯಲ್ಲಿ ಪಂಡಿತ್‌ ಉಪೇಂದ್ರ ಭಟ್‌ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಬ್ಲೀನ್‌ ಜಿ. ವ್ಹಿ. ಎಸ್‌. ಫಾರ್ಮ ಲಿಮಿಟೆಡ್‌, ಸಾರಸ್ವತ ಕೋ ಆಪರೇಟಿವ್‌ ಬ್ಯಾಂಕ್‌, ಎನ್‌ಕೆಜಿಎಸ್‌ಬಿ ಬ್ಯಾಂಕ್‌ ಹಾಗೂ ಜಿಎಸ್‌ಬಿ ಟೆಂಪಲ್‌ ಟ್ರಸ್ಟ್‌ ಸಂಸ್ಥೆಗಳು ಪ್ರಾಯೋಜಕರಾಗಿ ಸಹಕರಿಸಿದವು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.