ಪುಣೆಯ ಪಂಚಮಿ ಚಾರಿಟೆಬಲ್ ಟ್ರಸ್ಟ್ನಿಂದ ಅಂಧರಿಗೆ ಸೀರೆ ವಿತರಣೆ
Team Udayavani, Mar 17, 2017, 3:44 PM IST
ಪುಣೆ: ರಾಷ್ಟ್ರೀಯ ದೃಷ್ಟಿಹೀನ ಸಂಘ ಮಹಾರಾಷ್ಟ್ರ ಇದರ ಪುಣೆ ವಿಭಾಗದ ಶಾಖೆಯ ಆಶ್ರಯದಲ್ಲಿ, ಅಖೀಲ ಭಾರತೀಯ ಅಂಧರ ಸಂಘದ ಸಹಯೋಗದೊಂದಿಗೆ, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಂಧ ಮಹಿಳೆಯರ ಸಮ್ಮೇಳನವನ್ನು ಶಂಕರ್ಶೇಟ್ ರೋಡ್ನ ಓಸ್ವಾಲ್ ಬಂಧು ಕಾರ್ಯಾಲಯದಲ್ಲಿ ಇತ್ತೀಚೆಗೆ ಎರಡು ದಿನಗಳ ಕಾಲ ಆಯೋಜಿಸಲಾಗಿತ್ತು.
ಸಮ್ಮೇಳನದಲ್ಲಿ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಅಂಧರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪುಣೆಯ ಹೊಟೇಲ್ ಉದ್ಯಮಿ ಪುರಂದರ ಪೂಜಾರಿ ಅವರ ಪಂಚಮಿ ಚಾರಿಟೆಬಲ… ಟ್ರಸ್ಟ್ ವತಿಯಿಂದ ಸುಮಾರು 150ಕ್ಕೂ ಮಿಕ್ಕಿದ ಮಹಿಳೆಯರಿಗೆ ಸೀರೆಗಳನ್ನು ಹಂಚಲಾಯಿತು.
ಪುಣೆಯ ಉದ್ಯಮಿ ಪುರಂದರ ಪೂಜಾರಿ ಅವರ ನೇತೃತ್ವದಲ್ಲಿ ಸುಮಾರು 15 ವರ್ಷಗಳ ಹಿಂದೆ ಸ್ಥಾಪನೆಗೊಂಡ ಪಂಚಮಿ ಚಾರಿಟೆಬಲ… ಟ್ರಸ್ಟ್ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಾಗೂ ಪುಣೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಾಜ ಸೇವಾ ಕೈಂಕರ್ಯ ದಲ್ಲಿ ತೊಡಗಿದೆ. ಸುಮಾರು 65 ಮಿಕ್ಕಿದ ಅಂಧರಿಗೆ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಈ ಟ್ರಸ್ಟ್ ಮುಖಾಂತರ ಮಾಡಲಾಗಿದೆ. ಅಲ್ಲದೆ ಕಣ್ಣಿನ ಸಮಸ್ಯೆಯುಳ್ಳರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಗೆ ಸಹಾಯ, ಕಾರ್ಕಳ ತಾಲೂಕಿನಾದ್ಯಂತ 250ಕ್ಕೂ ಮಿಕ್ಕಿದ ಮಕ್ಕಳನ್ನು ಈ ಟ್ರಸ್ಟ್ ಮುಖಾಂತರ ದತ್ತು ಪಡೆದು ಅವರಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಕಳ ತಾಲೂಕಿನ ಒಂದು ಶಾಲೆಯನ್ನು ದತ್ತು ಪಡೆದು ಆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 7ನೇ ತರಗತಿವರೆಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಈ ಟ್ರಸ್ಟ್ ಮುಖಾಂತರ ಮಾಡಲಾಗಿದೆ. ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸಹಾಯವನ್ನು ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ