ಡೊಂಬಿವಲಿಯ ಗೆಳೆಯರ ಸ್ವಾವಲಂಬನ ಕೇಂದ್ರ: ಸಂಗೀತ, ಚಿತ್ರಕಲಾ ವರ್ಗ
Team Udayavani, Mar 21, 2017, 4:55 PM IST
ಡೊಂಬಿವಲಿ: ಇಂದಿನ ಯಾಂತ್ರಿಕ ಜೀವನ ಕ್ರಮದಿಂದ ಮನುಷ್ಯನಲ್ಲಿ ಮಾನಸಿಕ ಒತ್ತಡ, ಭಯ, ದುಗುಡ, ದುಮ್ಮಾನ ಹೆಚ್ಚಾಗುತ್ತಿದೆ. ಅವುಗಳನ್ನು ಕಡಿಮೆ ಮಾಡುವಲ್ಲಿ ಸಂಗೀತ, ಚಿತ್ರಕಲೆ ಇತ್ಯಾದಿ ಹವ್ಯಾಸಗಳು ಪ್ರಭಾವ
ಶಾಲಿಯಾಗಿವೆ. ಆದ್ದರಿಂದ ಪ್ರತಿಯೊಬ್ಬರು ಇಂತಹ ಒಂದೆರಡು ಹವ್ಯಾಸಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ಇಂತಹ ಒಂದು ಅಪೂರ್ವ ಅವಕಾಶಗಳನ್ನು ಒದಗಿಸಿಕೊಡುತ್ತಿರುವ ಡೊಂಬಿವಲಿಯ ಗೆಳೆಯರ ಸ್ವಾವಲಂಬನ ಕೇಂದ್ರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. ಈ ಸಂಸ್ಥೆಗಾಗಿ ತನ್ನಿಂದಾಗುವ ಎಲ್ಲಾ ರೀತಿಯ ಸಹಾಯ, ಪ್ರೋತ್ಸಾಹ ಲಭಿಸಲಿದೆ ಎಂದು ಗಾಯಕಿ ಆಶಾ ನಾಯಕ್ ನುಡಿದರು.
ಮಾ. 17ರಂದು ಡೊಂಬಿವಲಿಯ ಗೆಳೆಯರ ಸ್ವಾವಲಂಬನ ಕೇಂದ್ರವು ಸಂಸ್ಥೆಯ ಕಚೇರಿಯಲ್ಲಿ ಆಯೋಜಿಸಿದ್ದ ಸಂಗೀತ, ಚಿತ್ರಕಲಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾವಲಂಬನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಈ ಎಲ್ಲಾ ಶಿಬಿರಗಳ ಪ್ರಯೋಜನವನ್ನು ತುಳು -ಕನ್ನಡಿಗರು ಪಡೆದುಕೊಳ್ಳಬೇಕು ಎಂದರು.
ಸ್ವಾವಲಂಬನಾ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಚಿತ್ರಕಲೆ ಕಲಿಕಾ ಶಿಬಿರದ ನೇತೃತ್ವ ವಹಿಸಿರುವ ಚಿತ್ರಕಲಾತಜ್ಞೆ ಲತಾ ಪೂಜಾರಿ ಅವರು ಮಾತನಾಡಿ, ಈ ವರ್ಷದಲ್ಲಿ ಪ್ರಾಥಮಿಕ ಹಾಗೂ ಪೋಸ್ಟರ್ ಡ್ರಾಯಿಂಗ್ನ್ನು ಕಲಿಸಿಕೊಡಲಾಗುವುದು. ಇದರ ಪ್ರಯೋಜನವನ್ನು ಎಲ್ಲರು ಪಡೆದುಕೊಳ್ಳುವಂತೆ ವಿನಂತಿಸಿದರು.
ಪ್ರಬಂಧಕಿ ಜ್ಯೋತಿ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರವು ಪ್ರಾರಂಭಿಸಿರುವ ಕನ್ನಡ ಕಲಿಕಾ ವರ್ಗ, ಭಜನೆ, ಸಂಗೀತ, ಚಿತ್ರಕಲೆ, ಹೊಲಿಗೆ, ಮೆಹೆಂದಿ ಇತ್ಯಾದಿ ಕಲಿಕಾ ವರ್ಗಗಳ ಲಾಭ° ಪಡೆಯುವಂತೆ ತಿಳಿಸಿದರು. ಆಶಾ ನಾಯಕ್, ಉಮಾ ಶೆಟ್ಟಿ, ಸ್ಮಿತಾ ಪಾಟ್ಕರ್ ಅವರು ಭಾವಗೀತೆ, ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು.
ಸಂಚಾಲಕ ಪ್ರೊ| ವೆಂಕಟೇಶ್ ಪೈ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿ ಮಾತನಾಡಿ, ಸಂಗೀತ ವರ್ಗವು ಪ್ರತಿ ರವಿವಾರ ಸಂಜೆ 4.30 ರಿಂದ 6.30ರವರೆಗೆ, ಚಿತ್ರಕಲಾ ವರ್ಗವು ಬೆಳಗ್ಗೆ 11ರಿಂದ ಮಧ್ಯಾಹ್ನ 1ರಿಂದ ನಡೆಯಲಿದ್ದು, ಡೊಂಬಿ ವಲಿಯ ತುಳು- ಕನ್ನಡಿಗರು, ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ