ಕರ್ನಾಟಕ ಹೈಸ್ಕೂಲ್ ಹಳೆ ವಿದ್ಯಾರ್ಥಿಗಳಿಂದ ಬಂಟರ ಸಂಘಕ್ಕೆ 7ಲಕ್ಷ ರೂ.
Team Udayavani, Apr 18, 2017, 5:35 PM IST
ಮುಂಬಯಿ: ಚೆಂಬೂರು ಕರ್ನಾಟಕ ಹೈಸ್ಕೂಲ್ನ ಕನ್ನಡ ಮಾಧ್ಯಮದ ಹಳೆವಿದ್ಯಾರ್ಥಿಗಳು ಮಾಜಿ ಪ್ರಾಂಶುಪಾಲ ಕೆ. ಆರ್. ಆಚಾರ್ಯ ಅವರ ಗುರುವಂದನ ಕಾರ್ಯಕ್ರಮವನ್ನು ಕಳೆದ ಎರಡು ವರ್ಷಗಳ ಹಿಂದೆ ಆಯೋಜಿಸಿರುವ ಸಂದರ್ಭ ದೇಣಿಗೆಯಾಗಿ ಸಂಗ್ರಹಗೊಂಡ ಮೊತ್ತದಲ್ಲಿ 7 ಲಕ್ಷ ರೂ. ಉಳಿತಾಯಗೊಂಡಿದ್ದು, ಈ ಮೊತ್ತವನ್ನು ಶಾಲೆಯ ಹಳೆವಿದ್ಯಾರ್ಥಿಗಳು, ಮಾಜಿ ಪ್ರಾಂಶುಪಾಲ ಕೆ. ಆರ್. ಆಚಾರ್ಯ ಹಾಗೂ ಅಭಿನಂದನ ಸಮಿತಿಯ ಅಧ್ಯಕ್ಷ ಸಿಎ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಎ. 12ರಂದು ಬಂಟರ ಸಂಘ ಮುಂಬಯಿಗೆ ಹಸ್ತಾಂತರಿಸಿದರು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರಲ್ಲದೆ, ಈ ಮೊತ್ತದಿಂದ ಬರುವ ಬಡ್ಡಿಯನ್ನು 2017-2018 ರ ಶೈಕ್ಷಣಿಕ ವರ್ಷದಿಂದ ಚೆಂಬೂರು ಕರ್ನಾಟಕ ಹೈಸ್ಕೂಲ್ ಹಾಗೂ ಕನ್ನಡ ಮಾಧ್ಯಮದಲ್ಲಿ ಕಲಿಯುವ ಇತರ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಜಾತಿ, ಮತದ ಭೇದವಿಲ್ಲದೆ ಪ್ರತಿವರ್ಷ ನೀಡುವಂತೆ ವಿನಂತಿಸಿದರು.
ಮಾಜಿ ಪ್ರಾಂಶುಪಾಲ ಕೆ. ಆರ್. ಆಚಾರ್ಯ ಹಾಗೂ ಕನ್ನಡ ಮಾಧ್ಯಮ ಹಳೆವಿದ್ಯಾರ್ಥಿಗಳು ರೂ. 7 ಲಕ್ಷದ ಚೆಕ್ನ್ನು ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್ದಾಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್. ಶೆಟ್ಟಿ ಅವರು ಉಪಸ್ಥಿತರಿದ್ದರು. ಅಲ್ಲದೆ ಚೆಂಬೂರು ಕರ್ನಾಟಕ ಹೈಸ್ಕೂಲ್ನ ಕನ್ನಡ ಮಾಧ್ಯಮ ಶಾಲೆಯ ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…