ಘೋಡ್‌ಬಂದರ್‌ರೋಡ್‌: ಜಿಬಿಕೆಎ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟ


Team Udayavani, Apr 18, 2017, 5:39 PM IST

16-Mum02a.jpg

ಥಾಣೆ: ಸಂಘಟಕ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆ ಕ್ರೀಡೆಯಾಗಿದೆ. ಯೋಜನಾ ಶಕ್ತಿ, ಕಲ್ಪನೆ, ವಿವೇಚನೆ, ತತ್‌ಕ್ಷಣ ಸೂಕ್ತ ಪ್ರತಿಕ್ರಿಯೆಯ ಪರಿಹಾರ ಒದಗಿಸುವ ಚಾಕಚಕ್ಯತೆ, ಸಮಯ ಪ್ರಜ್ಞೆಯನ್ನು ಪ್ರತಿಯೋರ್ವ ಆಟಗಾರರರು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗವನ್ನು ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳತ್ತ ಆಕರ್ಷಿಸಲು ಎಲ್ಲಾ ಸಂಘ-ಸಂಸ್ಥೆಗಳು  ಕ್ರೀಡೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ಮುಂಬಯಿ ಬಂಟರ ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ನುಡಿದರು.

ಎ. 16ರಂದು ಥಾಣೆಯ ಘೋಡ್‌ಬಂದರ್‌ರೋಡ್‌ ಆನಂದ ನಗರದ ಟಿ. ಎಂ. ಸಿ. ಮೈದಾನದಲ್ಲಿ ಘೋಡ್‌ಬಂದರ್‌ರೋಡ್‌ ಕನ್ನಡ ಅಸೋಸಿಯೇಶನ್‌ ತುಳು-ಕನ್ನಡಿಗ ಸಂಸ್ಥೆಗಳಿಗೆ ಆಯೋಜಿಸಿದ್ದ ಜಿಬಿಕೆಎ ಪ್ರೀಮಿಯರ್‌ ಲೀಗ್‌-2017 ಕ್ರಿಕೆಟ್‌ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತ ನಾಡಿದ ಅವರು, ಸೋಲು ಯಶಸ್ಸಿನ ಮೆಟ್ಟಿಲು. 

ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಆಡಿದರೆ ಸಿಗುವ ಗೌರವ ಮತ್ತು ಮನ್ನಣೆ ಗೆಲುವಿ ಗಿಂತಲು ಮೇಲು. ಈ ಕ್ರೀಡಾ ಮನೋಭಾವ ಸರ್ವರಲ್ಲಿ ಬೆಳೆದು ತಮ್ಮ ತಂಡ ರಾಷ್ಟ್ರ ಮಟ್ಟದಲ್ಲಿ ಮಿಂಚಲಿ ಎಂದು ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಘೋಡ್‌ಬಂದರ್‌ ಕನ್ನಡ ಅಸೋಸಿಯೇಶನ್‌ ಅಧ್ಯಕ್ಷ ವಿಕ್ರಮಾನಂದ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸೀಮಿತ ಓವರ್‌ಗಳ ಕ್ರಿಕೆಟ್‌ ಪಂದ್ಯಾಟವನ್ನು ಕೇವಲ ತುಳು-ಕನ್ನಡಿಗರಿಗೆ ಆಯೋಜಿಸಲಾಗಿದೆ. ಸುಮಾರು 16 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಂತಿಮ ಸುತ್ತಿನ ಪಂದ್ಯಾಟವು ಎ. 23ರಂದು ನಡೆಯಲಿದ್ದು, ಅಂದಿನ ಸಮಾರೋಪ ಸಮಾರಂಭದಲ್ಲಿ ವಿನ್ನರ್ ಹಾಗೂ ರನ್ನರ್ ತಂಡಕ್ಕೆ ನಗದು ಪ್ರಶಸ್ತಿ,
ಟ್ರೋಫಿ, ಸಮ್ಮಾನ ಪತ್ರವನ್ನಿತ್ತು ಗೌರವಿಸಲಾ ಗುವುದು. ಉತ್ತಮ ಎಸೆತೆಗಾರ, ಉತ್ತಮ ಆಟಗಾರ, ಸರಣಿ ಶ್ರೇಷ್ಟ ತಂಡ, ಉತ್ತಮ ದಾಂಡಿಗ, ಪಂದ್ಯಪುರುಷೋತ್ತಮ, ಉತ್ತಮ ಕ್ಷೇತ್ರರಕ್ಷಕ ಇತ್ಯಾದಿ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸ ಲಾಗುವುದು. ತಂಡಗಳು ಶಿಸ್ತು, ಸಂಯಮದಿಂದ ಆಡುವಂತೆ ಮನವಿ ಮಾಡಿದರು.

ಉದ್ಘಾಟಕ ಲಕ್ಷ್ಮಣ್‌ ಮಣಿಯಾಣಿ, ವಸಂತ ಸಾಲ್ಯಾನ್‌ ಬೀರೊಟ್ಟು ಅವರು ಮೈದಾನದಲ್ಲಿ ಕ್ರಿಕೆಡ್‌ ಆಡುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ಉಪ ಕಾರ್ಯಾಧ್ಯಕ್ಷ ಲೇಖಕ ನಿತ್ಯಾನಂದ ಬೆಳುವಾಯಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವೇದಿಕೆಯಲ್ಲಿ ಚಲನಚಿತ್ರ ನಟ, ನಿರ್ದೇಶಕ ಪುರುಷೋತ್ತಮ ಅಮೀನ್‌, ಕುಲಾಲ್‌ ಸಂಘದ ಅಧ್ಯಕ್ಷ ಗಿರೀಶ್‌ ಅಮೀನ್‌, ಚಾರ್‌ಕೋಪ್‌ ಕನ್ನಡ ಸಂಘದ ರಘುನಾಥ ಶೆಟ್ಟಿ, ಜಯ ಶೆಟ್ಟಿ, ಘೋಡ್‌ಬಂದರ್‌ ಕನ್ನಡ ಸಂಘದ ಕಾರ್ಯದರ್ಶಿ ಹರೀಶ್‌ ಡಿ. ಸಾಲ್ಯಾನ್‌, ಉಪಾಧ್ಯಕ್ಷರಾದ ಪ್ರಶಾಂತ್‌ ನಾಯಕ್‌, ಗೋಪಾಲ್‌ ಶೆಟ್ಟಿ, ಕೋಶಾಧಿಕಾರಿ ಜಯ ಪೂಜಾರಿ, ಜತೆ ಕೋಶಾಧಿಕಾರಿ ಚಂದ್ರಶೇಖರ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರತಿಭಾ ಶೆಟ್ಟಿ ಅವರು ಉಪಸ್ಥಿತರಿದ್ದರು.

ವಾಣಿಶ್ರೀ ಶೆಟ್ಟಿ, ಹೇಮಾ ಶೆಟ್ಟಿ, ವಂದನಾ ಶೆಟ್ಟಿ, ಮಾಯಾ, ಸೀಮಾ ಶೆಟ್ಟಿ ಅವರು ಪ್ರಾರ್ಥನೆಗೈದರು. ಅಶೋಕ್‌ ಮೂಲ್ಯ, ಶ್ರೀನಿಧಿ, ಸೀತಾರಾಮ ಶೆಟ್ಟಿ ಅವರು ವೀಕ್ಷಕ ವಿವರಣೆ ನೀಡಿದರು. ವಿವಿಧ ಜಾತೀಯ, ಕನ್ನಡಪರ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ರಾಜಕೀಯ ನೇತಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.