ಕರ್ನಾಟಕ ಸಂಘ ಮುಂಬಯಿ: ಯಕ್ಷಗಾನ ತಾಳಮದ್ದಳೆ


Team Udayavani, Sep 6, 2018, 4:57 PM IST

ataa.jpg

ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಆಯೋಜನೆಯಲ್ಲಿ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬಯಿ ಇವರು ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಸೆ. 3ರಂದು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ವಾಲಿಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಿತು.

ಪ್ರಾರಂಭದಲ್ಲಿ ಕರ್ನಾಟಕ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್‌ ಕುಮಾರ್‌ ಪೊಲಿಪು ಅವರು ಕಲಾ ಪ್ರಕಾಶ ಪ್ರತಿಷ್ಠಾನದ ಸಂಚಾಲಕರಾದ ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಮತ್ತು ಪ್ರಸಿದ್ಧ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಹಾಗೂ ಇತರ ಕಲಾವಿದರನ್ನು ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿದರು.
ಮಾಜಿ ಕಾರ್ಯದರ್ಶಿ ಓಂದಾಸ್‌ ಕಣ್ಣಂಗಾರ್‌ ಅವರು ಕಲಾವಿದರನ್ನು ಪರಿಚಯಿಸಿ ಕರ್ನಾಟಕ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ, ಕರ್ನಾಟಕ ಸಂಘವು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದು, ಯಕ್ಷಗಾನದಂತಹ ಕಾರ್ಯಕ್ರಮಗಳಿಗೆ ಸಂಘದ ಬೆಂಬಲ ಸದಾಯಿದೆ ಎಂದರು.

ಇದೇ ಸಂದರ್ಭದಲ್ಲಿ ಡಾ| ಭರತ್‌ ಕುಮಾರ್‌ ಪೊಲಿಪು ಅವರು ಮಾತನಾಡಿ,   ಸೆ. 8 ಮತ್ತು ಸೆ. 9 ರಂದು ಕುವೆಂಪು  ಸ್ಮಾರಕ ಏಕಾಂಕ ನಾಟಕ ಸ್ಪರ್ಧೆಯು ಕರ್ನಾಟಕ ಸಂಘದ ವತಿಯಿಂದ ಮೈಸೂರು ಅಸೋಸಿಯೇಶನ್‌ನಲ್ಲಿ ಜರಗಲಿದೆ. ಇದರಲ್ಲಿ ಮುಂಬಯಿಯ ಹಾಗೂ ಹೊರನಾಡಿನ ಪ್ರಸಿದ್ಧ ತಂಡಗಳು ಭಾಗವಹಿಸಲಿವೆ. ಅತ್ಯುತ್ತಮ ನಾಟಕಗಳು ಇಲ್ಲಿ ಪ್ರದರ್ಶನಗೊಳ್ಳಲಿದ್ದು, ಕಲಾರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಲಾಪ್ರಕಾಶನ ಪ್ರತಿಷ್ಠಾನದ ವತಿಯಿಂದ ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಅವರು ಡಾ| ಭರತ್‌ ಕುಮಾರ್‌ ಪೊಲಿಪು ಹಾಗೂ ಓಂದಾಸ್‌ ಕಣ್ಣಂಗಾರ್‌ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಆನಂತರ ನಡೆದ ವಾಲಿಮೋಕ್ಷ ತಾಳಮದ್ದಳೆಯಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ ಗಣೇಶ್‌ ಮಯ್ಯ ವರ್ಕಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್‌, ಜಬ್ಟಾರ್‌ ಸಮೋ ಸಂಪಾಜೆ, ಗಣೇಶ್‌ ಶೆಟ್ಟಿ ಕನ್ನಡಿಕಟ್ಟೆ, ವಿಜಯ ಆಚಾರ್ಯ ಹೊಸಬೆಟ್ಟು, ಸುರೇಶ್‌ ಶೆಟ್ಟಿ ನಂದೊÅಳ್ಳಿ, ಅತಿಥಿ ಭಾಗವತರಾಗಿ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಮೊದಲಾದವರು ಭಾಗವಹಿಸಿದರು. ಕಲಾಭಿಮಾನಿಗಳ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 
ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.