ಸೊಲ್ಲಾಪುರ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಗೋಷ್ಠಿ 


Team Udayavani, Jul 13, 2017, 2:57 PM IST

12-Mum02.jpg

ಸೊಲ್ಲಾಪುರ: ಅನುವಾದಕನೊಬ್ಬ ನದಿಯ ಸೇತುವೆಯಂತೆ. ತಾನು ಅನುವಾದಿಸಿರುವ ಕೃತಿಯಿಂದ ಎರಡು ಬೇರೆ ಬೇರೆ ಭಾಷೆಯ ಓದುಗರಿಗೆ ವಿಷಯ ತಲುಪಿಸುವ ಕಾರ್ಯ ಮಾಡುತ್ತಾನೆ. ಒಂದು ದಡದಿಂದ ಇನ್ನೊಂದು ದಡ ಸೇರುತ್ತಿದ್ದಾಗ ಸೇತುವೆ ಕೆಳಗಿದ್ದ ಕಂಭ ಯಾರ ಕಣ್ಣಿಗೂ ಕಾಣುವುದಿಲ್ಲ. ಹಾಗೇ ಒಬ್ಬ ಅನುವಾದಕನು ಕೂಡ ಆ ಕಂಭದಂತೆ ಯಾರ ಕಣ್ಣಿಗೂ ಕಾಣದೆ ಮರೆಯಾಗಿರುತ್ತಾನೆ. ಒಟ್ಟಾರೆ ಅನುವಾದಕನು ನದಿಯ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಾನೆ ಎಂದು ಪತ್ರಕರ್ತ ಚನ್ನವೀರ ಭದ್ರೇಶ್ವರಮಠ ಅಭಿಪ್ರಾಯ ವ್ಯಕ್ತಪಡಿಸಿದರು.

ಜು. 9ರಂದು ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಘಟಕದ ವತಿಯಿಂದ ಇಲ್ಲಿಯ ಹುತಾತ್ಮ ಸ್ಮೃತಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಮಹಾರಾಷ್ಟ್ರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ-ಮರಾಠಿ ಭಾಷೆಗಳ ಅನುವಾದ ಕುರಿತು ಅವರು ಮಾತನಾಡಿ, ಅನುವಾದಕನಿಗೆ ಎರಡು ಭಾಷೆಗಳ ಮೇಲೆ ಪರಿಪೂರ್ಣತೆ ಇರಬೇಕು. ಅನುವಾದಕನಿಗೆ ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಅನುವಾದಿಸುವಾಗ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಎರಡು ಭಾಷೆಯ ಶಬ್ದಗಳ ಅರ್ಥವನ್ನು ಓದುಗರಿಗೆ ತಿಳಿಯುವಂತೆ ಅನುವಾದಿಸಬೇಕು. ಅಲ್ಲದೆ ತಾನು ಅನುವಾದಿಸಿದ ಕೃತಿ ಓದುಗನಿಗೆ ಮಾತೃ  ಭಾಷೆಯಂತೆ ಕಾಣಬೇಕು. ಅನುವಾದಕನು ತನ್ನ ಬರವಣಿಗೆಯ ಮೂಲಕ ಓದುಗರ ಮನ ಮುಟ್ಟುತ್ತಾನೆ. ಕನ್ನಡ ಮತ್ತು ಮರಾಠಿ ಇವೆರಡು ಭಾಷೆಗಳು ನಮಗೆ ತಾಯಿ ಮತ್ತು ಚಿಕ್ಕಮ್ಮ ಇದ್ದಂತೆ. ಹಾಗೇ ಕನ್ನಡ ಮತ್ತು ಮರಾಠಿ ಭಾಷೆಗಳು ನಮಗೆ ರಕ್ತ ಸಂಬಂಧದ ಸಹೋದರರಂತೆ ಕಾಣಬೇಕು. ಎರಡು ಭಾಷೆಗಳ ಅನುವಾದದಿಂದ ತಮ್ಮ ತಮ್ಮ ಭಾಷೆಯ ಸಾಹಿತ್ಯ ಶ್ರೀಮಂತಗೊಳ್ಳುತ್ತದೆ ಎಂದು ಹೇಳಿದರು.

ಜಾನಪದ ಸಾಹಿತ್ಯದ ಹಿರಿಯ ಸಾಹಿತಿ ಡಾ| ವೀರಣ್ಣ ದಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಕ್ಕಲ್‌ಕೋಟೆಯ ಪೂಜ್ಯ  ಕ್ಕರೇವಣಸಿದ್ದ ಶ್ರೀಗಳ ಸಾನ್ನಿಧ್ಯದಲ್ಲಿ ಕನ್ನಡ-ಮರಾಠಿ ಸಾಹಿತ್ಯ ಬಾಂಧವ್ಯ ಕುರಿತು ಹಂಪಿ ವಿವಿಯ ಡಾ| ವಿಟuಲರಾವ್‌ ಕಾಯಕ್ವಾಡ್‌, ಕನ್ನಡ-ಮರಾಠಿ ಭಾಷೆಗಳ ಸಂಸ್ಕೃತಿಕ ಕುರಿತು ವಿಜಯಪುರದ ಡಾ| ವಿ. ಎಸ್‌. ಮಾಳಿ ಅವರು ಉಪನ್ಯಾಸ ನೀಡಿದರು. ಸರ್ವಾಧ್ಯಕ್ಷ ಡಾ| ಬಿ. ಬಿ. ಪೂಜಾರಿ, ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ವೇದಿಕೆಯಲ್ಲಿದ್ದರು. ಸುನೀವ್‌ ಸಾವಳಿ ಕಾರ್ಯಕ್ರಮ ನಿರೂಪಿಸಿದರು. ಸಿದ್ಧರಾಮ ವಾಘ ವಂದಿಸಿದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.