ಪಿಂಪ್ರಿ-ಚಿಂಚ್ವಾಡ್‌ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ, ಸ್ನೇಹಸಮ್ಮಿಲನ


Team Udayavani, Aug 8, 2017, 3:04 PM IST

06-Mum02a.jpg

ಪುಣೆ: ಪಿಂಪ್ರಿ -ಚಿಂಚ್ವಾಡ್‌ ಬಿಲ್ಲವ ಸಂಘ ಮತ್ತು  ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಸ್ನೇಹ ಸಮ್ಮಿಲನವು ಸಮಾರಂಭವು ಜು.  30ರಂದು ಪಿಂಪ್ರಿಯ ಆಚಾರ್ಯ ಆತ್ರೆ ಸಭಾಭವನದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಶ್ರೀಧರ ಜಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೋನವಾಲದ ಕೌನ್ಸಿಲರ್‌ ಶ್ರೀಧರ ಪೂಜಾರಿ ಹಾಗೂ ಗೌರವ ಅತಿಥಿಗಳಾಗಿ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.

ಮುಖ್ಯ ಅತಿಥಿ  ಶ್ರೀಧರ ಪೂಜಾರಿ ಮಾತನಾಡಿ, ಪಿಂಪ್ರಿ ಚಿಂಚಾÌಡ್‌ನ‌ಲ್ಲಿನ ಈ ಸಮಿತಿ ಸಮಾಜ ಬಾಂಧವರನ್ನು ಒಗ್ಗೂಡಿಸಿಕೊಂಡು ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಸಮಾಜದ ಪ್ರತಿಯೋರ್ವರನ್ನೂ ಸಂಘದೊಂದಿಗೆ ಬೆಸೆಯುವ ಕಾರ್ಯವನ್ನು ಮಾಡಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕಾರ್ಯ ಆಗಬೇಕಾಗಿದೆ ಎಂದರು.

ಗೌರವ ಅತಿಥಿಯಾಗಿ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌ ಅವರು ಮಾತನಾಡಿ, ನಮ್ಮ ಸಮಾಜದಲ್ಲಿನ ಪರಂಪರಾಗತ ಕಟ್ಟುಕಟ್ಟಳೆಗೆ ನಾವು ಸ್ಪಂದಿಸಿ ಗೌರವಿಸಬೇಕಾಗಿದೆ. ಪಿಂಪ್ರಿ-ಚಿಂಚಾÌಡ್‌ನ‌ಲ್ಲಿರುವ ಸಮಾಜ ಬಾಂಧವರ ಈ ಸಮಿತಿ ಸಮಾಜ ಬಾಂಧವರ  ಹಿತ

ಚಿಂತನೆಗಾಗಿ ಭವಿಷ್ಯದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದರು.

ಸಂಘದ ಅಧ್ಯಕ್ಷ ಶ್ರೀಧರ ಜಿ. ಪೂಜಾರಿ ಅವರು ಮಾತನಾಡಿ, ಸಮಿತಿಯ ಅಭಿವೃದ್ಧಿಯ ವಿವರಗಳನ್ನು ನೀಡುತ್ತಾ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಮಿತಿಯ ಕಾರ್ಯವೈಖರಿಯನ್ನು ವಿವರಿಸಿದರು. ಗತ ವರ್ಷ ದಲ್ಲಿ ಸಮಿತಿಯು ಹಮ್ಮಿಕೊಂಡ   ಕಾರ್ಯಚಟುವಟಿಕೆ ಗಳ ವಿವರಗಳನ್ನು ಸಮಿತಿಯ ಗೌರವ ಕಾರ್ಯದರ್ಶಿ ಪ್ರವೀಣ್‌ ಕೆ. ಅಂಚನ್‌ ಸಮಿತಿಯ ಮುಂದಿಡುತ್ತಾ ನಮ್ಮ ಸಮಿತಿಯ ಪ್ರತಿಯೊಂದು ಕಾರ್ಯಚಟುವಟಿಕೆಗಳು ಬ್ರಹ್ಮಶ್ರೀ ನಾರಾಯಣ ಗುರುಗಳ  ವಿದ್ಯೆಯಿಂದ ಜ್ಞಾನೋದಯ ಹಾಗೂ ಸಂಘಟನೆಯಿಂದ ಶಕ್ತಿ ಎನ್ನುವ ಮೂಲ ಮಂತ್ರದ ಆಧಾರದಲ್ಲಿಯೇ ನಡೆಯುತ್ತದೆ ಎಂದರು.

ಗೌರವ ಕೋಶಾಧಿಕಾರಿ ವಿಜಯ ಪೂಜಾರಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದುಕೊಂಡರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕುಸುಮಾ ಆರ್‌. ಸಾಲ್ಯಾನ್‌ ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ  ಕಳೆದ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸಮ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ  ಧನಸಹಾಯ ನೀಡಲಾಯಿತು. ಸಂಸ್ಥೆಯ ಕಾರ್ಯಕ್ರಮಗಳಿಗೆ ನೆರವು ನೀಡಿ ಸಹಕರಿಸಿದ ದಾನಿಗಳನ್ನು ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.  ಮಮತಾ ಪಿ. ಅಂಚನ್‌ ಸ್ವಾಗತಿಸಿದರು. ನವೀನ್‌ ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.  ಮನೋರಂಜನೆಯ ಅಂಗವಾಗಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.