“ಅಂಬರ್‌ ಕ್ಯಾಟರರ್’ ಚಿತ್ರದ ಆಡಿಯೋ ಬಿಡುಗಡೆ


Team Udayavani, Oct 3, 2017, 11:44 AM IST

100.jpg

 ಮುಂಬಯಿ: ಮುಂಬಯಿಯ ಸರ್ವಧರ್ಮೀಯ ಸಹೋದರ  ಕಡಂದಲೆ ಸುರೇಶ್‌ ಎಸ್‌. ಭಂಡಾರಿ ನಿರ್ಮಾಪಕತ್ವದ ನಾಗೇಶ್ವರ ಸಿನಿ ಕಂಬೈನ್ಸ್‌ ಪ್ರಸ್ತುತಿಯ “ಅಂಬರ್‌ ಕೇಟರರ್’ ಚಿತ್ರೀಕರಣ ಪೂರ್ಣಗೊಂಡಿದ್ದು, ಸಂತಸ ತಂದಿದೆ. ಚಿತ್ರ ಸಮಸ್ತ ಜನತೆಗೆ ಮನೋರಂಜನೆಯ ಜೊತೆಗೆ ನೀತಿ ಬಾಳ್ವೆಯನ್ನು ಉಣ ಬಡಿಸಲಿ. ರಾಜಕೀಯ ನಟರಿಗಿಂತ ಚಿತ್ರನಟರು ಒಳ್ಳೆಯವರು. ಅವರಿಗೆ ಕಲಾಭಿಮಾನಿಗಳು ಪ್ರೋತ್ಸಾಹ ನೀಡಬೇಕಾಗಿದೆ. ಎಲ್ಲರೂ ಈ ಚಿತ್ರವನ್ನು ನೋಡುವಂತಹ ಚಿತ್ರವಾಗಿ ಹೊರಹೊಮ್ಮಲಿ ಮತ್ತು ಚಿತ್ರದ ನಾಯಕನಟ  ರಾಜ್ಯ ಮಾತ್ರವಲ್ಲ ದೇಶದಲ್ಲಿಯೇ ನಾಯಕ ನಟನಾಗಿ ಭವಿಷ್ಯ ರೂಪಿಸುವಂತಾಗಲಿ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ ಖಾದರ್‌ ತಿಳಿಸಿದರು.

ಮಂಗಳೂರು ಅಸೈಗೋಳಿಯ ಅಭಯಾ ಶ್ರಮದಲ್ಲಿ  ಸೆ. 29 ರಂದು ಸಂಜೆ ಮುಂಬುಯಿ ಭಂಡಾರಿ ಸಮಾಜದ ಮುತ್ಸದ್ಧಿ, ಕೊಡುಗೈದಾನಿ, ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಆಡಳಿತ ಮತ್ತು ಸೇವಾ ಟ್ರಸ್ಟ್‌ ಬಾಕೂìರು ಅಧ್ಯಕ್ಷ ನಾಗೇಶ್ವರ ಸಿನಿ ಕಂಬೈನ್ಸ್‌ ಇವರ ಮೊದಲ ತುಳು ಚಲನಚಿತ್ರ ಅಂಬರ್‌ ಕ್ಯಾಟರರ್ ಇದರ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದು ಮಾತನಾಡಿ, ಯುವ ಉದ್ಯಮಿ ಭಂಡಾರಿ ಸಮಾಜದ ಯುವ ನಾಯಕ, ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದ ಕಡಂದಲೆ ಸೌರಭ್‌ ಸುರೇಶ್‌ ಭಂಡಾರಿ ಅವರನ್ನು ಸತ್ಕರಿಸಿ ಗೌರವಿಸಿದರು.

ಪಂಚತಾರಾ ಹೊಟೇಲುಗಳಲ್ಲಿ  ನಡೆಯು ವಂತಹ ಕಾರ್ಯಕ್ರಮವನ್ನು  ವೃದ್ಧಾಶ್ರಮದಲ್ಲಿ ನಡೆಸಿರುವುದು ಇತರರಿಗೆ ಮಾದರಿ. ಕಲ್ಮಶವಿಲ್ಲದಂತೆ  ಆಶ್ರಮದಲ್ಲಿ ಇರುವ ಹಿರಿಯ ಚೇತನರ ಮಧ್ಯೆ ಕಾರ್ಯಕ್ರಮ ಆಯೋಜಿಸಿದ್ದು ಅರ್ಥಪೂರ್ಣ. 

ಚಿತ್ರ ತಂಡ ಪ್ರತಿಭಾವಂತರಾಗಿದ್ದು, ಭವಿಷ್ಯದಲ್ಲಿ ಗೆಲುವು ಖಚಿತ. ತುಳು ಚಲನಚಿತ್ರಗಳ ರಚನೆಯ ಮೂಲಕ ವಿಶ್ವದಾದ್ಯಂತ ಇರುವ ತುಳು ಅಭಿಮಾನಿಗಳ ಗಮನ ಸೆಳೆಯಲಿ ಎಂದ‌ು ಕಾರ್ಕಳದ ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ,  ಚಿತ್ರದ ನಿರ್ಮಾಪಕರು ಸಾಮಾಜಿಕ ಕಳಕಳಿಯ ವ್ಯಕ್ತಿತ್ವ ಹೊಂದಿದವರು. ಇಂತಹ ಮನೋಭಾವದವರು  ಕೈ ಹಾಕುವ ಎಲ್ಲಾ ಕೆಲಸಗಳು ಯಶಸ್ವಿಯಾಗುತ್ತದೆ. ಚಿತ್ರವೂ ಯಶಸ್ವಿಯಾಗಿ ಪ್ರದರ್ಶನಗೊಳ್ಳಲಿ ಎಂದು ಹಾರೈಸಿದರು.

ತುಳು ಚಲನಚಿತ್ರ ನಿರ್ಮಾಪಕ  ಕಿಶೋರ್‌ ಡಿ. ಶೆಟ್ಟಿ ಮಾತನಾಡಿ, ನಿರ್ಮಾಪಕರಿಗೆ ಸಿನೇಮಾ ಎಂದರೆ ಗ್ಯಾಂಬ್ಲಿಂಗ್‌ ಇದ್ದಂತೆ, ಹಾಕಿರುವ ಹಣ ಬರಲೂಬಹುದು, ಹೋಗಲುಬಹುದು. ಆದರೂ ಆತ್ಮವಿಶ್ವಾಸದ ಜತೆಗೆ ಚಿತ್ರ ನಿರ್ಮಿಸುವ ಮೂಲಕ ತುಳುಚಿತ್ರವನ್ನು ಬೆಳೆಸಲು ಮುಂದಾಗಿರುವ ತಂಡಕ್ಕೆ ಶುಭಹಾರೈಸಿದರು.

ತುಳು ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಪ್ರಕಾಶ್‌ ಪಾಂಡೇಶ್ವರ,  ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ, ಅಂತರಾಷ್ಟ್ರೀಯ ಪ್ರಸಿದ್ಧ ಕೇಶ ವಿನ್ಯಾಸಗಾರ ಡಾ| ಶಿವರಾಮ ಕೆ. ಭಂಡಾರಿ, ಅಭಯಾಶ್ರಮದ ನಿರ್ದೇಶಕ  ಶ್ರೀನಾಥ್‌ ಹೆಗ್ಡೆ, ನಾಡಿನ ಪ್ರಸಿದ್ಧ ಜಾನಪದ ವಿದ್ವಾಂಸ, ವಾಗ್ಮಿ ದಯಾನಂದ ಕತ್ತಲಸಾರ್‌, ಉದ್ಯಮಿ ಮಹಾವೀರ ಜೈನ್‌, ಸೋಮಶೇಖರ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಗೌರವ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಎಂ. ಭಂಡಾರಿ, ತುಳು ಚಲನಚಿತ್ರ ನಿರ್ಮಾಪಕ ಸಚಿನ್‌ ಉಪ್ಪಿನಂಗಡಿ, ಕರ್ನೂರು ಮೋಹನ ರೈ, ಹರೀಶ್‌ ಕಟಪಾಡಿ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಸಿನೇಮಾಕ್ಕೆ ಶುಭಹಾರೈಸಿದರು.

ಚಿತ್ರದ ನಿರ್ದೇಶಕ  ಜಯಪ್ರಸಾದ್‌ ಬಜಾಲ್‌, ಸಂಗೀತ ನಿರ್ದೇಶಕ ಮಣಿಕಾಂತ್‌ ಕದ್ರಿ, ಚಿತ್ರದ ಅಭಿನೇತ್ರರಾದ ಆಶಿಕ್‌ ಶೆಟ್ಟಿ,  ಶ್ರೇಯಸ್‌ ಎಸ್‌. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಡಂದಲೆ ಸುರೇಶ್‌ ಭಂಡಾರಿ ಸ್ವಾಗತಿಸಿದರು.  ನಟ ಮಂಜು ರೈ ಮುಳೂರು ಮತ್ತು ವಿನೀತ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸೌರಭ್‌ ಭಂಡಾರಿ ವಂದಿಸಿದರು. 

ಚಿತ್ರ-ವರದಿ : ರೊನಿಡಾ ಮುಂಬಯಿ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.