ಮೀರಾರೋಡ್‌ ಪಲಿಮಾರು ಮಠ: ದೀಪಾವಳಿ ಸಂಭ್ರಮ 


Team Udayavani, Oct 22, 2017, 4:40 PM IST

21-Mum02a.jpg

ಮುಂಬಯಿ: ಅತ್ಯಂತ ಬಲಶಾಲಿಯಾದ ಬಲಿಚಕ್ರವರ್ತಿ ಅಸುರನಾದರೂ ಮಹಾದಾನಿ ಯಾಗಿದ್ದ.  ನನ್ನಷ್ಟು ದೊಡ್ಡದಾನಿ ಯಾರೂ ಇಲ್ಲ. ಸಕಲ ವನ್ನು ಗೆಲ್ಲುವ ಸಾಮರ್ಥ್ಯ ನನ್ನಲ್ಲಿದೆ ಎಂಬ ಭಾವನೆ ಆತನಲ್ಲಿತ್ತು. ಅದರ ಸತ್ವ ಪರೀಕ್ಷೆಗಾಗಿ ಭಗವಾನ್‌ ಶ್ರೀ ವಿಷ್ಣು ವಾಮನ ರೂಪ ತಾಳಿ ಬಲಿಚಕ್ರವರ್ತಿಯಲ್ಲಿ ಮೂರು ಹೆಜ್ಜೆ ಜಾಗ ದಾನ ಮಾಡು ಎಂದು ಹೇಳಿ ತ್ರಿವಿಕ್ರಮನಾದ. ಒಂದು ಹೆಜ್ಜೆ ಭೂಲೋಕಕ್ಕೂ, ಎರಡನೇ ಹೆಜ್ಜೆ ಆಕಾಶಕ್ಕೆ ಇಟ್ಟು ಮೂರನೇ ಹೆಜ್ಜೆ ಆತನ ತಲೆಯ ಮೇಲಿಟ್ಟು ಪಾತಾಳಕ್ಕೆ ತಳ್ಳಿದರೂ, ಭಗವಾನ್‌ ಶ್ರೀ ವಿಷ್ಣು ಬಲಿಚಕ್ರವರ್ತಿಯ ಅಹಂನ್ನು ತಳ್ಳಿದರೇ ವಿನಾ ಬಲಿಚಕ್ರವರ್ತಿಯನ್ನು ತಳ್ಳಲಿಲ್ಲ ಎಂಬ ನಂಬಿಕೆ ನಮ್ಮಲ್ಲಿರಬೇಕು. ಬಲಿಯ ಉತ್ತಮ ಶ್ರದ್ಧಾಭಕ್ತಿಗಾಗಿ ವರನೀಡಿ ಆಶ್ವಯುಜ ಮಾಸದಲ್ಲಿ ಮೂರು ದಿನಗಳ ಕಾಲ ಭೂಲೋಕಕ್ಕೆ ಬರುವಂತೆ ಅನುಗ್ರಹಿಸಿದರು. ಇದೇ ಸಂದರ್ಭ ಲೋಕದ ಜನತೆ ದೀಪ ಹಚ್ಚಿ, ಬಲೀಂದ್ರನನ್ನು ಸ್ವಾಗತಿಸಿ ಪೂಜಿಸುತ್ತಾರೆ. ಬಯಕೆ, ದ್ವೇಷ, ಕ್ರೋಧ ತೊರೆದು ಸಹನೆ, ಕರುಣೆ ಪರೋಪಕಾರಗಳಿಂದ ಸಾರ್ಥಕತೆ ಪಡೆಯುವುದು ದೀಪಾವಳಿ ಹಬ್ಬದ ವೈಶಿಷ್ಟéವಾಗಿದೆ ಎಂದು ದ್ವಿತೀಯ ಬಾರಿ ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾ ಧೀಶ ಪರಮಪೂಜ್ಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ನುಡಿದರು.

ಅ.19ರಂದು ಮೀರಾರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ನಡೆದ ದೀಪಾರಾಧನೆ, ಧನಲಕ್ಷ್ಮೀ ಪೂಜೆ, ಬಲೀಂದ್ರ ಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಶ್ರೀಗಳು, ಅಜ್ಞಾನದಿಂದ ಜ್ಞಾನದ ಬೆಳಕು ಸ್ಥಿರವಾಗುವುದು ಸಂಪತ್ತಿನ ಅಧಿಪತಿಯಾದ ಲಕ್ಷ್ಮೀ ದೇವಿಯ ಪೂಜೆಯಿಂದ ಧನಕನಕಾದಿಗಳು ವೃದ್ಧಿಯಾಗುತ್ತವೆೆ. ಬಲೀಂದ್ರ ಪೂಜೆ ಯಂದು ದಾನ ಮಾಡಿದರೆ ಶ್ರೀ ವಿಷ್ಣುವಿಗೆ ಪ್ರೀತಿಯ ಅಕ್ಷಯ ವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪಲಿಮಾರು ಶ್ರೀಗಳು ಪೂಜಿಸಲ್ಪಟ್ಟ ನಾಟ್ಯ, ಪುಷ್ಪ, ಮಂತ್ರಾಕ್ಷತೆಯನ್ನು ಭಕ್ತಾದಿಗಳಿಗೆ ನೀಡಿ ಆಶೀರ್ವದಿಸಿದರು. ಪ್ರಬಂಧಕ ಮತ್ತು ಟ್ರಸ್ಟಿ ವಿದ್ವಾನ್‌ ರಾಧಾಕೃಷ್ಣ ಭಟ್‌ ಅವರು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಬಲೀಂದ್ರ ಪೂಜೆ ನೆರವೇರಿಸಿದರು.

ಟ್ರಸ್ಟಿ ಸಚ್ಚಿದಾನಂದ ರಾವ್‌ ಅವರು ಮಾತನಾಡಿ, ಮುಂದಿನ ವರ್ಷ ಜನವರಿ 18ರಂದು ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಉಡುಪಿಯ ಶ್ರೀ ಕೃಷ್ಣ ದೇವಾಲಯದ ಪರ್ಯಾಯ ಪೀಠಾರೋಹಣ ಮಾಡಲಿದ್ದಾರೆ. ಪರ್ಯಾಯ ಪೂರ್ವಬಾವಿ ಸಂಚಾರದಲ್ಲಿರುವ ಶ್ರೀಗಳು ಅ. 21 ರಂದು ಮೀರಾರೋಡ್‌ ಪಲಿಮಾರು ಮಠದಿಂದ ನಿರ್ಗಮಿಸಲಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಶ್ರೀಕೃಷ್ಣನ ಪೂಜಾ ವಿಧಿ-ವಿಧಾನಗಳಲ್ಲಿ ನಿರತರಾಗಿ ರುವುದರಿಂದ ಅವರ ಭೇಟಿ ಉಡುಪಿ ಶ್ರೀಕ್ಷೇತ್ರದಲ್ಲಿ ಮಾತ್ರ ಸಾಧ್ಯವಾಗಲಿದೆ. ಭಕ್ತಾದಿಗಳು ಎಲ್ಲ  ರೀತಿಯ  ಸಹಕಾರ, ಸಹಾಯ ಶ್ರೀಗಳೊಂದಿಗೆ ಇರಲಿ ಎಂದರು.

ಸಂಚಾಲಕ ಶ್ರೀಶ ಭಟ್‌, ಪುಂಡಾರೀಕ್ಷ ಉಡುಪ, ಜಯ ರಾಮ ಭಟ್‌, ವಿಠಲ್‌ ಭಟ್‌ ಮೊದಲಾದವರು ಸಹಕರಿಸಿದರು. ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯ ಸಂಘಟನೆಗಳ ಪ್ರತಿನಿಧಿಗಳು, ಸಮಾಜ ಸೇವಕರು, ಉದ್ಯಮಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.