ಮೀರಾರೋಡ್ನಲ್ಲಿ ಪತ್ತನಾಜೆ ತುಳುಚಿತ್ರ ಪ್ರದರ್ಶನ
Team Udayavani, Nov 28, 2017, 4:27 PM IST
ಮುಂಬಯಿ: ತುಳು ನಾಡಿನಾದ್ಯಂತ ಯಶಸ್ವಿ ಪ್ರದರ್ಶನ ಕಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ತೋನ್ಸೆ ವಿಜಯಕುಮಾರ್ ಶೆಟ್ಟಿ ನಿರ್ದೇಶಕ ಕಲಾಜಗತ್ತು ಕ್ರಿಯೇಶನ್ಸ್ ಅವರ ಪತ್ತನಾಜೆ ತುಳು ಸಿನೆಮಾ ಮುಂಬಯಿ ಹಾಗೂ ವಿವಿಧ ಉಪನಗರಗಳಲ್ಲಿ ಪ್ರದರ್ಶನಗೊಂಡು ನ. 19ರಂದು ಮೀರಾರೋಡ್ನ ಸಿನೆಮ್ಯಾಕ್ಸ್ ಚಿತ್ರಮಂದಿರದಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿತು.
ಚಿತ್ರ ಪ್ರದರ್ಶನದ ಮಧ್ಯಾಂತರದಲ್ಲಿ ನಡೆದ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಪ್ರೊ| ಕಬಡ್ಡಿ ಆಯೋಜಕ, ಬಂಟರ ಸಂಘ ಮೀರಾ-ಭಾಯಂದರ್ ಸ್ಥಳೀಯ ಸಮಿತಿಯ ಯುವ ವಿಭಾಗದ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್, ಬಂಟರ ಸಂಘ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಅರುಣೋದಯ ರೈ, ಹೊಟೇಲ್ ಉದ್ಯಮಿ ಆನಂದ ಶೆಟ್ಟಿ, ಸಮಾಜ ಸೇವಕಿ ಸುಮತಿ ಶೆಟ್ಟಿ, ಅಮಿತಾ ಕೆ. ಶೆಟ್ಟಿ, ಉದ್ಯಮಿ ಕೆರಮ ಮಾಗಂದಡಿ ದಯಾನಂದ ಶೆಟ್ಟಿ, ವಿಶ್ವನಾಥ ಎಂ. ಸಾಲ್ಯಾನ್, ಚೇತನ್ ಶೆಟ್ಟಿ ಮೂಡಬಿದ್ರೆ, ರವೀಂದ್ರ ಶೆಟ್ಟಿ ಕೊಟ್ರಪಾಡಿ, ರವೀಂದ್ರ ಶೆಟ್ಟಿ ದೇರಳಕಟ್ಟೆ, ಬೆಳ್ಳಿಪಾಡಿ ಸಂತೋಷ್ ರೈ, ಪಂಜದಗುತ್ತು ಸಂಪತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು, ತೋನ್ಸೆ ವಿಜಯ ಕುಮಾರ್ ಶೆಟ್ಟಿ ಅವರನ್ನು ಹಾಗೂ ಚಿತ್ರದ ಕಲಾವಿದರಾದ ಸುಂದರ ರೈ ಮಂದಾರ, ಪ್ರತೀಕ್ ಶೆಟ್ಟಿ, ರೇಷ್ಮಾ ಶೆಟ್ಟಿ ಹಾಗೂ ಎನ್. ಪೃಥ್ವಿರಾಜ್ ಮುಂಡ್ಕೂರು ಅವರನ್ನು ಗೌರವಿಸಿದರು.
ಗೌರವ ಸ್ವೀಕರಿಸಿ ಮಾತನಾಡಿದ ತೋನ್ಸೆ ವಿಜಯ ಕುಮಾರ್ ಶೆಟ್ಟಿ ಅವರು,ಕಲಾಭಿಮಾನಿಗಳ ಪ್ರೋತ್ಸಾಹದಿಂದಲೇ ಕಲಾಜಗತ್ತು ರಂಗಭೂಮಿಯಲ್ಲಿ ಅನೇಕ ನಾಟಕಗಳನ್ನು ನೀಡಿದೆ. ಇದೀಗ ಪತ್ತನಾಜೆ ಸಿನೆಮಾ ಪ್ರದರ್ಶನಗೊಳ್ಳುತ್ತಿರುವ ಎಲ್ಲಾ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ನಿಮ್ಮೆಲ್ಲರ ಅಭಿಮಾನ ನನಗೆ ಇನ್ನಷ್ಟು ಸಿನೆಮಾ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ಕಲಾಭಿಮಾನಿಗಳ ಪ್ರೋತ್ಸಾಹ, ಸಹಕಾರ ಇದೇ ರೀತಿಯಲ್ಲಿ ಮುಂದುವರಿಯಲಿ ಎಂದು ಹೇಳಿದರು. ಸಂಘಟಕ ನಿರ್ದೇಶಕ ಜಿ. ಕೆ. ಕೆಂಚನಕೆರೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ