ಮಲಾಡ್‌ ಕುರಾರ್‌ ವಿಲೇಜ್‌ :ಅಖಂಡ ಹರಿನಾಮ ಸಂಕೀರ್ತನೆ


Team Udayavani, Dec 6, 2017, 4:45 PM IST

05-Mum01a.jpg

ಮುಂಬಯಿ: ಮಲಾಡ್‌ ಪೂರ್ವದ  ಕುರಾರ್‌ ವಿಲೇಜ್‌ನ ಶ್ರೀ  ಶನಿ ಮಹಾತ್ಮಾ ಪೂಜಾ ಸಮಿತಿಯ ವತಿಯಿಂದ ಡಿ. 3 ರಂದು  ದೇವಸ್ಥಾನದ ವಠಾರದಲ್ಲಿ ಅಖಂಡ ಹರಿನಾಮ ಸಂಕೀರ್ತನೆಯು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ  ಭಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ನಡೆಯಿತು. ಈ ಧಾರ್ಮಿಕ ಕಾರ್ಯದಲ್ಲಿ  ಶ್ರೀ ಶನೀಶ್ವರ ಭಜನಾ ಮಂಡಳಿ, ಕುರಾರ್‌ ವಿಲೇಜ್‌ ಮಲಾಡ್‌ ಸೇರಿದಂತೆ ನಗರದ ಒಂಭತ್ತು ಪ್ರಮುಖ ಭಜನಾ ಮಂಡಳಿಗಳು ಭಾಗವಹಿಸಿದ್ದು ಹಿರಿಯರು, ಕಿರಿಯರು, ಪುರುಷರು ಹಾಗೂ ಮಹಿಳೆಯರು ಇದರಲ್ಲಿ ಭಕ್ತಿ ಪೂರ್ವಕವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಊರಿನ ಪ್ರಸಿದ್ದ ಕುಣಿತ ಭಜನಾ ಮಂಡಳಿಯಾದ ರಾಧಾಕೃಷ್ಣ ಭಜನಾ ಮಂಡಳಿ ಸಸಿಹಿತ್ಲು (ಕದಿಕೆ) ಅವರು ಭಾಗವಹಿಸಿದ್ದರು. ಹೋಟೇಲು ಉದ್ಯಮಿ ಸುರೇಶ್‌ ಶೆಟ್ಟಿ, ಪ್ರಧಾನ ಅರ್ಚಕ ಹಾಗೂ ಪುರೋಹಿತರಾದ ರಾಘವೇಂದ್ರ ತುಂಗಾ ಭಟ್‌, ನಾರಾಯಣ ಭಟ್‌,  ಶ್ರೀ ಶನಿ ಮಹಾತ್ಮಾ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಪಿ. ಸಾಫಲ್ಯ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಸಂಕೀರ್ತನೆಯನ್ನು ಪ್ರಾರಂಭಿಸಿದರು. ಭಜನೆ ಬಳಿಕ ಮಂಗಳಾರತಿ ಹಾಗೂ ಪ್ರಸಾದ ವಿತರಣೆಯೊಂದಿಗೆ ಅಖಂಡ ಹರಿನಾಮ ಸಂಕೀರ್ತನೆ ಸಂಪನ್ನಗೊಂಡಿತು.

ಇದೇ ಸಂದರ್ಭದಲ್ಲಿ ಶ್ರೀ ಶನಿ ಮಹಾತ್ಮಾ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ ಅವರು ಹರಿನಾಮ ಸಂಕೀರ್ತನೆ ಬಗ್ಗೆ ವಿವರಿಸಿ, ಈ ಸಮಿತಿಯು ಕಳೆದ ಹಲವಾರು ವರ್ಷಗಳಿಂದ ಮಹಾನಗರದಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದ್ದು ಯುವ ಪೀಳಿಗೆಯಲ್ಲಿ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಿಂತನೆಯನ್ನು ಉಳಿಸಿ ಬೆಳೆಸಲು ನಿರಂತರವಾಗಿ ಭಜನೆ, ಹರಿಕಥೆ, ಪ್ರವಚನ ಇತ್ಯಾದಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಸಿದ್ದ ರಾಧಾಕೃಷ್ಣ ಭಜನಾ ಮಂಡಳಿ ಸಸಿಹಿತ್ಲು  ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿ, ಈ ಮಂಡಳಿಯನ್ನು ಕೇವಲ ಮುಂಬಯಿ ಹಾಗೂ ನಾಡಿನಲ್ಲಿ ಮಾತ್ರವಲ್ಲದೇ ದೇಶ ವಿದೇಶಗಳಲ್ಲೂ ಗುರುತಿಸುವಂತಾಗಲಿ. ಈ ಮಂಡಳಿಯವರು ಅದರಲ್ಲೂ ಸಣ್ಣ ಮಕ್ಕಳು ಸುಂದರವಾಗಿ ಈ ಭಜನೆಯಲ್ಲಿ ಭಾಗವಹಿಸಿದ್ದು ನಮ್ಮೆಲ್ಲರ ಮನಸ್ಸನ್ನು ಆಕರ್ಷಿಸಿದೆ ಎಂದರು.

ಅತಿಥಿಗಳಾಗಿ ಆಗಮಿಸಿದ ಬಿಲ್ಲವರ ಅಸೋಸಿಯೇಶನ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಪೂಜಾರಿ ಅವರು  ಶ್ರೀ ಕ್ಷೇತ್ರದ ಗೌರವವನ್ನು ಸ್ವೀಕರಿಸಿ, ತನ್ನನ್ನು ಆಮಂತ್ರಿಸಿದಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತಾ ಊರಿನಿಂದ ಆಗಮಿಸಿದ ಭಜನಾ ಮಂಡಳಿಯ ಕಾರ್ಯವನ್ನು ಮೆಚ್ಚಿ ಮಾತನಾಡಿ, ಇಂತಹ ಕಾರ್ಯಕ್ರಮ ನೀಡಲು ಮುಂಬಯಿಯ ಕಿರಿಯರಿಂದ ಅಸಾಧ್ಯವಾಗಬಹುದು. ಕುರಾರ್‌ ವಿಲೇಜ್‌ನಲ್ಲಿ  ಶ್ರೀನಿವಾಸ  ಸಾಫಲ್ಯರ ನೇತೃತ್ವದಲ್ಲಿ ಇಂತಹ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಂಡದ್ದು ಅಭಿನಂದನೀಯ ಎಂದರು.

ಇನ್ನೋರ್ವ ಅತಿಥಿ ನ್ಯಾಯವಾದಿ ಜಗನ್ನಾಥ ಶೆಟ್ಟಿ ಅವರು ಗೌರವ ಸ್ವೀಕರಿಸಿ ಮಾತನಾಡಿ, ಇಂದು ನಾನು ವೀಕ್ಷಿಸಿದ ಸಣ್ಣ ಮಕ್ಕಳ ಕುಣಿತ ಭಜನೆಯ ಹೊಸ ಶೈಲಿಯ¨ªಾಗಿದ್ದು ಪ್ರಥಮವಾಗಿ ಇಂತಹ ಭಜನೆಯನ್ನು ನೋಡಿರುವೆನು. ಆಧುನಿಕ ತಂತ್ರ
ಜ್ಞಾನಗಳಾದ ಮೊಬೈಲ್‌, ದೂರದರ್ಶನದಲ್ಲಿ ಅಧಿಕ ಸಮಯ ಕಳೆಯದೆ ಇಂತಹ ಧಾರ್ಮಿಕ ಕಾರ್ಯದಲ್ಲಿ ನಮ್ಮ ನಾಡಿನ ಯುವ ಹಾಗೂ ಕಿರಿಯರು ತೊಡಗಿದ್ದು ಅಭಿಮಾನ ತಂದಿದೆ ಎಂದರು.

ಕುರಾರ್‌ ವಿಲೇಜ್‌ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ  ಪೂಜಾರಿ ಅವರು ಉಪಸ್ಥಿತರಿದ್ದು  ಕ್ಷೇತ್ರದ ಗೌರವವನ್ನು ಸ್ವೀಕರಿಸಿದರು. ಅಖಂಡ ಹರಿನಾಮ ಸಂಕೀರ್ತನೆ ಕಾರ್ಯವು ನಿತ್ಯಪ್ರಕಾಶ್‌ ಶೆಟ್ಟಿಯವರ ಮಾರ್ಗದರ್ಶನದಲ್ಲಿ ನಡೆದಿದ್ದು ಅವರನ್ನು ಪದಾಧಿಕಾರಿಗಳು ಗೌರವಿಸಿದರು.

ಉಪಾಧ್ಯಕ್ಷ ಎಂ. ಡಿ. ಬಿಲ್ಲವ, ಗೌರವ  ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ, ಕೋಶಾಧಿಕಾರಿ ಹರೀಶ್‌ ಸಾಲ್ಯಾನ್‌ , ಜೊತೆ ಕಾರ್ಯದರ್ಶಿಗಳಾದ ನಿತ್ಯಾನಂದ ಕೋಟ್ಯಾನ್‌ ಮತ್ತು ಶಾಲಿನಿ ಶೆಟ್ಟಿ, ಜತೆ ಕೋಶಾಧಿಕಾರಿಗಳಾದ ಶಿವಾನಂದ ಎನ್‌.ದೇವಾಡಿಗ ಮತ್ತು ಚಂದ್ರಕುಮಾರ್‌ ಶೆಟ್ಟಿ, ಸಲಹೆ ಗಾರರಾದ ಶ್ರೀಧರ ಆರ್‌. ಶೆಟ್ಟಿ  ಮತ್ತು ರಮೇಶ್‌ ರಾವ್‌ , ಮಹಿಳಾ ವಿಭಾಗದ ಪ್ರಮುಖರಾದ ಶೀತಲ್‌ ಎನ್‌. ಕೋಟ್ಯಾನ್‌, ಶ್ರೀ  ಶನಿ ಮಹಾತ್ಮಾ ಪೂಜಾ ಸಮಿತಿಯ ಇತರ ಪದಾಧಿಕಾರಿಗಳಾದ  ನಾರಾಯಣ ಶೆಟ್ಟಿ, ಬಾಬು ಚಂದನ್‌, ದಿನೇಶ್‌ ಡಿ.ಕುಂಬÛ, ಪ್ರಭಾಕರ ಶೆಟ್ಟಿ, ರಾಮಕೃಷ್ಣ ವಿ. ಶೆಟ್ಟಿ ಯಾನ್‌,  ಹರೀಶ್‌ ಡಿ. ಕುಂದರ್‌, ಸದಾನಂದ ಶೆಟ್ಟಿ,ಸುರೇಶ್‌ ಸಾಲ್ಯಾನ್‌ ಹಾಗೂ ಮಹಿಳಾ ವಿಭಾಗದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.  

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.