ನವದುರ್ಗಾ ಅಯ್ಯಪ್ಪ ಸೇವಾ ಸಂಘ: ವಾರ್ಷಿಕ ಮಹಾಪೂಜೆ
Team Udayavani, Dec 12, 2017, 12:00 PM IST
ಮುಂಬಯಿ: ದಹಿಸರ್ ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘ ಇದರ 25ನೇ ವಾರ್ಷಿಕ ಮಹಾಪೂಜೆಯು ದಹಿಸರ್ ಪೂರ್ವದ ಶೈಲೇಂದ್ರ ನಗರದ ಹ್ಯಾಪಿ ಹೋಂನಲ್ಲಿರುವ ಶಿಬಿರದ ಆವರಣದಲ್ಲಿ ಡಿ. 9ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ವಿಶ್ವನಾಥ್ ಅಯ್ಯರ್ ಗುರುಸ್ವಾಮಿ, ಕಣ್ಣನ್ ನಾಯರ್ ಗುರುಸ್ವಾಮಿ ಬಾಂದ್ರಾ, ಗಣೇಶ್ ಗುರುಸ್ವಾಮಿ ಘಾಟ್ಕೋಪರ್, ಶ್ರೀ ಧರ್ಮಶಾಸ್ತ ಭಕ್ತವೃಂದ ಬಾಂದ್ರಾ ಅಧ್ಯಕ್ಷ ರಾಮಣ್ಣ ಗುರುಸ್ವಾಮಿ, ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘದ ಗೌರವಾಧ್ಯಕ್ಷ ಸುರೇಂದ್ರ ಗುರುಸ್ವಾಮಿ ಬೆಳಗಾವಿ, ಅಧ್ಯಕ್ಷ ಸುಧಾಕರ ಎನ್. ಶೆಟ್ಟಿ ಬಿಯಾಳಿ ಮಂದಾರ್ತಿ, ಕಾರ್ಯದರ್ಶಿ ಮೋಹನ್ ರೈ ಗುರುಸ್ವಾಮಿ ಉಪ್ಪಳ, ಕೋಶಾಧಿಕಾರಿ ಗಣೇಶ್ ಶೆಟ್ಟಿ ಕುಂಬ್ಳೆ, ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ, ಪ್ರಧಾನ ಅರ್ಚಕ ಸಾಂತಿಂಜ ಜನಾರ್ದನ ಭಟ್ ಅವರ ಪೌರೋಹಿತ್ಯದಲ್ಲಿ ಗಣಹೋಮ, ಅಯ್ಯಪ್ಪ ಪ್ರತಿಷ್ಠೆ, ಸಹಸ್ರ ನಾಮ ಅರ್ಚನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು.
ಜಯಂತಿ ಶೆಟ್ಟಿ ನೇತೃತ್ವದ ಬೊರಿವಲಿ ಪಶ್ಚಿಮದ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಇದರ ಮಹಿಳಾ ಸದಸ್ಯೆಯರಿಂದ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್ ಇದರ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಮೀರಾರೋಡ್ ಶ್ರೀ ಅಯ್ಯಪ್ಪ ಭಕ್ತಮಂಡಳಿಯ ಗುರುಸ್ವಾಮಿ ಜಯಶೀಲ ತಿಂಗಳಾಯ ಮತ್ತು ಗುರುಸ್ವಾಮಿ ಉಮೇಶ್ ಕಾಂತಾವರ ಅವರು ಹಾಗೂ ಅಯ್ಯಪ್ಪ ವ್ರತಧಾರಿಗಳು ಶ್ರೀ ಸನ್ನಿಧಿಯ ಪರಿಚಯವನ್ನು ಶರಣು ಘೋಷದ ಮೂಲಕ ಮಾಡಿದರು.
ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘ ಇದರ ಶಿಬಿರದ ವ್ರತಧಾರಿ ಅಯ್ಯಪ್ಪ ಸ್ವಾಮಿಗಳು ಪಡಿಪೂಜೆಯ ಹದಿನೆಂಟು ಮೆಟ್ಟಿಲುಗಳಿಗೆ ಶಾಸ್ತ್ರೋಕ್ತ ಹಾಗೂ ಸನಾತನ ಪೂಜಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ತುಪ್ಪದ ದೀಪ, ಕರ್ಪೂರವನ್ನು ಹಚ್ಚಿ ಶ್ರೀ ಅಯ್ಯಪ್ಪ ಸ್ವಾಮಿಯನ್ನು ಸ್ಮರಿಸಿದರು. ಶಿಬಿರದ ಗುರುಸ್ವಾಮಿಗಳಿಂದ ಮಹಾಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಅನ್ನಸಂತರ್ಪಣೆಯಲ್ಲಿ ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ಶ್ರೀ ಗುರುನಾರಾಯಣ ಯಕ್ಷಗಾನ ಕಲಾಮಂಡಳಿ ಸಾಂತಾಕ್ರೂಜ್ ಕಲಾವಿದರಿಂದ ಬ್ರಹ್ಮ ಬಲಾಂಡಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ದಿನಪೂರ್ತಿ ನಡೆದ ಧಾರ್ಮಿಕ
ಉತ್ಸವದಲ್ಲಿ ಸ್ಥಳೀಯ ನಗರ ಸೇವಕರು, ಪೊಲೀಸ್ ಅಧಿಕಾರಿಗಳು, ದಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಮಾಜದ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ
ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್