ಶ್ರೀ ಶಾಸ್ತ ಸೇವಾ ಸಮಿತಿಯ ರಜತ ಮಹೋತ್ಸವ ಮಹಾಮಂಡಲ ಪೂಜೆ


Team Udayavani, Dec 13, 2017, 4:31 PM IST

11-Mum09b.jpg

ಮುಂಬಯಿ: ವಿದ್ಯಾವಿಹಾರ್‌ ಪೂರ್ವದ ಸ್ಟೇಷನ್‌ರೋಡ್‌ ಸಮೀಪದ ಶ್ರೀ ಶಾಸ್ತ ಸೇವಾ ಸಮಿತಿಯ ರಜತ ಮಹೋತ್ಸವದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಮಂಡಲ ಸೇವಾ ಪೂಜೆಯು ಡಿ. 10 ರಂದು ವಿದ್ಯಾವಿಹಾರ್‌ ಪೂರ್ವದ ಸ್ಟೇಷನ್‌ರೋಡ್‌, ಹೊಟೇಲ್‌ ನಟರಾಜ್‌ ಬಾರ್‌ ಸಮೀಪದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಪರಮಪೂಜ್ಯ ದಿ| ಶ್ರೀ ಪಿ. ಆರ್‌. ಸೂರ್ಯನಾರಾಯಣ ಮೂರ್ತಿ ಗುರುಸ್ವಾಮಿ ಮುಲುಂಡ್‌ ಇವರ ಶುಭಾಶೀರ್ವಾದಗಳೊಂದಿಗೆ 25 ನೇ ವಾರ್ಷಿಕ ಮಹಾಮಂಡಲ ಪೂಜೆಯು ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀ ಕ್ಷೇತ್ರ ಒಡಿಯೂರು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿ ಹಾಗೂ ಶುಭಾಶೀರ್ವಾದಗಳೊಂದಿಗೆ, ಡೊಂಬಿವಲಿ ಪೂರ್ವದ  ಆಜೆªಪಾಡಾ ಅಯ್ಯಪ್ಪ ದೇವಸ್ಥಾನದ ಹೆಬ್ರಿ ಶ್ರೀ ನಾರಾಯಣ ಗುರುಸ್ವಾಮಿ ಇವರ ಮಾರ್ಗದರ್ಶನದೊಂದಿಗೆ, ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ಇವರ ಪೌರೋಹಿತ್ಯದಲ್ಲಿ ಪೂಜಾ ವಿಧಿ-ವಿಧಾನಗಳು ನೆರವೇರಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 5 ರಿಂದ ನಾರಿಕೇಲ ಗಣಹೋಮ ಮತ್ತು ಶರಣುಘೋಷ, ಮುಂಜಾನೆ 6 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಬೆಳಗ್ಗೆ 7 ರಿಂದ ಐರೋಲಿಯ ಭಕ್ತ ವೃಂದದವರಿಂದ ವಿಷ್ಣು ಸಹಸ್ರನಾಮ, ಬೆಳಗ್ಗೆ 7.30 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು.  ಬೆಳಗ್ಗೆ 9 ರಿಂದ ದೀಪಾರಾಧನೆ, ಅಯ್ಯಪ್ಪ ಸಹಸ್ರ ನಾಮಾರ್ಚನೆ,  ಪೂರ್ವಾಹ್ನ 10 ರಿಂದ ಕಿಸನ್‌ ನಗರ ಚಂದ್ರಶೇಖರ್‌ ಸ್ಯಾಕೊÕàಫೋನ್‌ ವಾದ್ಯ ಬಳಗದಿಂದ ವಾದ್ಯ ಸಂಗೀತ, ಪೂರ್ವಾಹ್ನ 11 ರಿಂದ ದಿ|  ಪಿ. ಆರ್‌. ಸೂರ್ಯನಾರಾಯಣ ಮೂರ್ತಿ ಗುರುಸ್ವಾಮಿ ಮುಲುಂಡ್‌ ಇವರ ಶಿಷ್ಯ ವೃಂದದವರಿಂದ ಸಂಕೀರ್ತನೆ, ಮಧ್ಯಾಹ್ನ 12.45 ರಿಂದ ಮಹಾಪೂಜೆ, ಮಹಾಮಂಗಳಾರತಿ ಜರಗಿತು. ಮಧ್ಯಾಹ್ನ ದಿ| ತ್ಯಾಂಪು ಶೆಟ್ಟಿ ಯಾನೆ ಬಾಬು ಶೆಟ್ಟಿ ಮರವೂರು ಬೀಡು ಇವರ ಮಕ್ಕಳ ಸೇವಾರ್ಥಕವಾಗಿ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿದ್ದು, ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.

ಅಪರಾಹ್ನ ಧಾರ್ಮಿಕ ಕಾರ್ಯಕ್ರಮ ಮತ್ತು ಗುರುವಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಸತತ 18 ನೇ ಬಾರಿ ಶಬರಿಮಲೆ ಯಾತ್ರೆಗೈಯುತ್ತಿರುವ ಸ್ವಾಮಿಗಳಿಗೆ ಹಾಗೂ ಸಾಧಕರಿಗೆ ಗೌರವಾರ್ಪಣೆ ನಡೆಯಿತು. ಸಂಜೆ ಸಂತದಾಸ ಶಿಬರೂರು ಸುರೇಶ್‌ ಎಸ್‌. ಶೆಟ್ಟಿ ಅವರಿಂದ ಹಾಗೂ ಶ್ರೀ ಮಣಿಕಂಠ ಭಜನ ಮಂಡಳಿ ಪನ್ವೇಲ್‌, ಶ್ರೀ ಮಹಾಕಾಳೇಶ್ವರ ಭಜನ ಮಂಡಳಿ ನೆರೂಲ್‌, ಶ್ರೀ ಶಾಸ್ತಸೇವಾ ಸಮಿತಿ ಭಜನ ಮಂಡಳಿ ವಿದ್ಯಾವಿಹಾರ್‌ ಸತೀಶ್‌ ಇರ್ವತ್ತೂರು ಇವರಿಂದ ಭಜನ ಕಾರ್ಯಕ್ರಮ ನಡೆಯಿತು. ರಾತ್ರಿ ಅಯ್ಯಪ್ಪ ಅಲಂಕಾರ ಪೂಜೆ, ಆರತಿ, ರಾತ್ರಿ 9.30 ರಿಂದ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ನೆರೂಲ್‌ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ರಮೇಶ್‌ ಗುರುಸ್ವಾಮಿ, ಚಂದ್ರಹಾಸ್‌ ಗುರುಸ್ವಾಮಿ, ಲಕ್ಷ್ಮೀನಾರಾಯಣ
ರಾವ್‌, ಜಗದೀಶ್‌ ಶೆಟ್ಟಿ ನಂದಿಕೂರು, ಸದಾನಂದ ಶೆಟ್ಟಿ, ಸತೀಶ್‌ ಶೆಟ್ಟಿ, ತುಳುಕೂಟ ಐರೋಲಿ ಅಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ ಮೋಹನ್‌ ಕುಮಾರ್‌ ಗೌಡ, ನಾರಾಯಣ ಶೆಟ್ಟಿ ನಂದಳಿಕೆ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಶಾಸ್ತಾ ಸೇವಾ ಸಮಿತಿ ವಿದ್ಯಾವಿಹಾರ್‌ ಇದರ ಅಧ್ಯಕ್ಷ ಅಡ್ವೆ ದಿವಾಕರ ಶೆಟ್ಟಿ, ಉಪಾಧ್ಯಕ್ಷ ಹೆಜಮಮಾಡಿ ಸುಕೇಶ್‌ ಶೆಟ್ಟಿ, ಕಾರ್ಯದರ್ಶಿ ಗಿರೀಶ್‌ ಆರ್‌. ಶೆಟ್ಟಿ ಭಾಂಡೂಪ್‌, ಕೋಶಾಧಿಕಾರಿ ಪುತ್ತೂರು ಚಂದ್ರಶೇಖರ ರೈ, ಜತೆ ಕೋಶಾಧಿಕಾರಿ ಎಳತ್ತೂರು ಪ್ರಸಾದ್‌ ಶೆಟ್ಟಿ, ಜತೆ ಕಾರ್ಯದರ್ಶಿ ಬೆಳ್ಳೆ ಸಂದೀಪ್‌ ಶೆಟ್ಟಿ, ಸದಸ್ಯರಾದ ಅನೆಲಾ ಮಂಟಮೇ ಸದಾಶಿವ ಶೆಟ್ಟಿ, ಬೆಳ್ಮಣ್‌ ಪಾಂಡು ಶೆಟ್ಟಿ, ಪೆರ್ಡೂರು ಸದಾನಂದ ಕುಲಾಲ್‌, ಕೊಲ್ಲೂರು ವೆಂಕಟೇಶ್‌ ಶೆಟ್ಟಿ, ಕಾಂಜೂರ್‌ಮಾರ್ಗ ಮಲ್ಲಿಕಾರ್ಜುನ ಸ್ವಾಮಿ,ಬೋಳ ಸಂತೋಷ್‌ ಸಾಲ್ಯಾನ್‌, ಎಲ್ಲೂರು ಶೇಖರ ಸಾಲ್ಯಾನ್‌, ಮರವೂರು ಸುದೇಶ್‌ ಶೆಟ್ಟಿ,ಶಿರ್ಲಾಲ್‌ ದಿನೇಶ್‌ ಪೂಜಾರಿ, ನಿಡ್ಡೋಡಿ ವಿನೋದ್‌ಶೆಟ್ಟಿ, ಪುರುಷೋತ್ತಮ ಆಚಾರ್ಯ ಮೈಸೂರು, ಇರ್ವತ್ತೂರು ಸತೀಶ್‌ ಪೂಜಾರಿ ಅವರ ಉಪಸ್ಥಿತಿಯಲ್ಲಿ ರಜತ ಮಹೋತ್ಸವ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

  ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.