ಕನ್ನಡ ವಿಭಾಗ ಮುಂಬಯಿ ವಿವಿ: 2 ಕೃತಿಗಳ ಬಿಡುಗಡೆ


Team Udayavani, Dec 18, 2017, 11:50 AM IST

16-Mum01.jpg

ಮುಂಬಯಿ: ಮುಂಬಯಿಗರು ಪಾರದರ್ಶಕ ಭಾಷಾಭಿಮಾನಿಗಳಾಗಿದ್ದಾರೆ. ಇವರಲ್ಲಿನ ಕನ್ನಡ ಭಾಷಾ ಶೈಲಿ, ಅಪಾರವಾದ  ಸಂಸ್ಕೃತಿ  ಪ್ರೇಮ ಕನ್ನಡಿಗರಿಗೆಲ್ಲರಿಗೂ ಮಾದರಿ. ಕನ್ನಡಾಭಿಮಾನವಂತೂ ಮನಸ್ಸು ತಟ್ಟುವಂಥದ್ದು ಎಂದು ಹೆಸರಾಂತ ಸಂಶೋಧಕ, ಹಿರಿಯ ಸಾಹಿತಿ ಡಾ| ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ನುಡಿದರು.

ಡಿ. 15ರಂದು ಕನ್ನಡ ವಿಭಾಗ ಮುಂಬಯಿ ವಿವಿ ವತಿಯಿಂದ ಸಾಂತಾಕ್ರೂಜ್‌ ಪೂರ್ವದ ಕಲೀನಾ ಕ್ಯಾಂಪÓನ ವಿದ್ಯಾನಗರಿಯ ಡಬ್ಲೂÂಆರ್‌ಐಸಿ ಸಭಾಗೃಹದಲ್ಲಿಆಯೋಜಿಸಲಾಗಿದ್ದ ಕಾರ್ಯಕ್ರಮ
ದಲ್ಲಿ ಅಭಿಜಿತ ಪ್ರಕಾಶನದ ದುರ್ಗಪ್ಪ ಯು. ಕೋಟಿಯವರ್‌ ಅವರ “ಮುಂಬಯಿಯಲ್ಲಿ ಕನ್ನಡದ ಡಿಂಡಿಮ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಗಳಗನಾಥ ಮತ್ತು ರಾಜಪುರೋಹಿತ ಪ್ರತಿಷ್ಠಾನ ಹಾವೇರಿ ಅಧ್ಯಕ್ಷ ಪ್ರೊ| ದುಷ್ಯಂತ ನಾಡಗೌಡ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ಸಾಹಿತಿ ಡಾ| ಶ್ಯಾಮಸುಂದರ್‌ ಬಿದರಕುಂದಿ ಅವರು ಪ್ರೊ| ಜಿ. ಸಿ. ಕುಲ್ಕರ್ಣಿ ಅವರ ಕುಮಾರವ್ಯಾಸ ಭಾರತದ ಮರಾಠಿ ಅನುವಾದಿತ ಗ್ರಂಥವನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ, ವಿಜ್ಞಾನಿ ಡಾ| ವ್ಯಾಸರಾವ್‌ ನಿಂಜೂರು ಮತ್ತು ಮುಂಬಯಿ ವಿವಿ ಕನ್ನಡ ವಿಭಾಗದ ಸಹಾಯಕ ಉಪನ್ಯಾಸಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಉಪಸ್ಥಿತರಿದ್ದರು. ರಮಾ ಉಡುಪ ಅವರು ಕೃತಿ ಪರಿಚಯಿಸಿದರು.   ಮುಂಬಯಿ ಕನ್ನಡ ಸಾಹಿತ್ಯದ ಕೇಂದ್ರಸ್ಥಾನವಿದ್ದಂತೆ. ಮುಂಬಯಿ ವಿವಿ  ಕನ್ನಡ ವಿಭಾಗದ ಪ್ರೋತ್ಸಾಹ ಅನನ್ಯ ಎಂದು ಅಧ್ಯಕ್ಷೀಯ ಭಾಷಣದಲ್ಲಿ ನಾಡಗೌಡ ತಿಳಿಸಿದರು.

ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾ ಧ್ಯಾಯ ಅವರು ಪ್ರಸ್ತಾವಿಕ ನುಡಿಗಳನ್ನಾಡಿ “ಮುಂಬಯಿಯಲ್ಲಿ ಕನ್ನಡದ ಡಿಂಡಿಮ’ ಇದು ನಮ್ಮದು 83ನೇ ಕೃತಿ. ಕೃತಿಕರ್ತ ದುರ್ಗಪ್ಪ ಯು. ಕೋಟಿಯವರ್‌ ಅವರ ಶ್ರಮ ಅನನ್ಯವಾದದ್ದು. ನಮ್ಮಲ್ಲಿನ ಅನೇಕರು ಕೃತಿಗಳನ್ನು ರಚಿಸಿದ ಬಳಿಕ ಸುಮ್ಮಗಿರುತ್ತಾರೆ. ಆದರೆ ಪ್ರೊ| ಕುಲ್ಕರ್ಣಿ ಅವರು ಕೃತಿಗಳನ್ನು ರಚಿಸಿ
ಸಾವಿರ ಕೃತಿ ಮಾಡಿ ಹಂಚಿದ ಕೀರ್ತಿಕಾರ. ಕನ್ನಡದಲ್ಲಿ ಕುಮಾರವ್ಯಾಸನ ಸಾಹಿತ್ಯೋಪಾಸನಗೈದು ವ್ಯಾಸ
ರಿಗೆ ಮರು ಜೀವವನ್ನುನೀಡಿದ್ದಾರೆ. ಇಂಥವರಿರುವ ತನಕ ಮುಂಬಯಿಯಲ್ಲಿ ಕನ್ನಡಕ್ಕೆ ಹಿನ್ನಡೆ ಅಸಾಧ್ಯ. ಕನ್ನಡದ ಅಸ್ಮಿತೆ ಗಟ್ಟಿಗೊಳಿಸುವ ಕೆಲಸ ಕನ್ನಡ ವಿಶ್ವವಿದ್ಯಾಲಯ,ಸರಕಾರ ಮಾಡಬೇಕಾಗಿದೆ ಎಂದರು.

 ಕೃತಿಕಾರ ದುರ್ಗಪ್ಪ ಯು. ಕೋಟಿಯವರ್‌ ಮಾತನಾಡಿ, ಮುಂಬಯಿ ಕನ್ನಡ ವಿಭಾಗದಲ್ಲಿ ಎಂ.ಎಲ್‌ ಮಾಡಬೇಕೆಂಬ ಯೋಚನೆಯೊಂದಿಗೆ  ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯರನ್ನು ಭೇಟಿಯಾದೆ. ಅವರು ನನಗೆ ಎಂ.ಫಿಲ್‌ ಅಧ್ಯಯನಕ್ಕೆಬೇಕಾದ ಎಲ್ಲಾ  ಗ್ರಂಥಗಳನ್ನು ನೀಡಿ, ಮಾರ್ಗ ದರ್ಶನ ನೀಡಿ ಪ್ರೋತ್ಸಾಹಿಸಿದ ಫಲವೇ ಈ ಕೃತಿಯಾಗಿದೆ ಎಂದ‌ರು. ಕಾರ್ಯಕ್ರಮದಲ್ಲಿ ದುರ್ಗಪ್ಪ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.  ಸುರೇಖಾ ಆರ್‌. ನಾಯ್ಕ, ಡಾ| ಜೀವಿ ಕುಲಕರ್ಣಿ, ಲಲಿತಪ್ರಭಾ ಅಂಗಡಿ, ಗಿರಿಜಾ ಶಾಸ್ತ್ರಿ, ನಾರಾಯಣ ರಾವ್‌, ಕುಮುದಾ ಆಳ್ವ, ಗೀತಾ ಮಂಜುನಾಥ್‌, ಪರಸಪ್ಪ ಡಿ. ಹರಿಜನ, ಶಿವರಾಜ್‌ ಎಂ. ಜೆ., ರೇವಣಸಿದ್ಧಿ ಕೌಟಗಿ ಸೇರಿದಂತೆ ನೂರಾರು ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ವೈ. ಬಿ. ಮಧುಸೂದನ ರಾವ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.  

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.