ಮೀರಾರೋಡ್ ಪಲಿಮಾರು ಮಠದಲ್ಲಿ ಯಕ್ಷಗಾನ ಪ್ರದರ್ಶನ
Team Udayavani, Jan 2, 2018, 4:37 PM IST
ಮುಂಬಯಿ: ಮೀರಾರೋಡ್ ಪೂರ್ವದ ಪಲಿಮಾರು ಮಠದ ಶಾಖೆಯ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಮುಂಬಯಿ ಪ್ರವಾಸದಲ್ಲಿರುವ ಸಿರಿಕಲಾ ಮೇಳ ಬೆಂಗಳೂರು ಇದರ ಕಲಾವಿದರುಗಳಿಂದ ಲಶ-ಕುಶ ಯಕ್ಷಗಾನ ಬಯಲಾಟವು ಡಿ. 23 ರಂದು ಜರಗಿತು.
ಯಕ್ಷಗಾನ ಕಲಾಪೋಷಕ ಸಂಘಟಕ ಗುಣಕಾಂತ್ ಕರ್ಜೆ ಮತ್ತು ರಾಜೇಶ್ ಶೆಟ್ಟಿ ಕಾಪು ಅವರ ನೇತೃತ್ವದಲ್ಲಿ ಹಾಗೂ ಅತಿಥಿ-ಗಣ್ಯರ ಸಮ್ಮುಖದಲ್ಲಿ ಕಲಾವಿದರನ್ನು ಸ್ವಾಗತಿಸಿ ಗೌರವಿಸಲಾಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಸುರೇಶ್ ಶೆಟ್ಟಿ, ಮೃದಂಗದಲ್ಲಿ ನರಸಿಂಹ ಹೆಗಡೆ, ಚೆಂಡೆಯಲ್ಲಿ ರಾಮನ್ ಹೆಗಡೆ, ವೇಷಧಾರಿಗಳಾಗಿ ಅವಿನಾಶ್ ಶೆಟ್ಟಿ, ಕಿರಣ್ ಪೈ, ಅರ್ಪಿತಾ ಹೆಗಡೆ, ನಾಗಶ್ರೀ ಗೀಜಗಾರ, ಭುವನಾ ಕಾರಂತ್ ಅವರು ಸಹಕರಿಸಿದರು.
ಮೇಳದ ಪ್ರಮುಖರಾದ ಸುರೇಶ್ ಹೆಗ್ಡೆ ಮತ್ತು ಟಿ. ಎಸ್. ಮಹಾಬಲೇಶ್ವರ ಅವರು ದ್ವಿತೀಯ ಯಕ್ಷಗಾನ ಪ್ರದರ್ಶನಕ್ಕೆ ಸಹಕರಿಸಿದ ಗುಣಕಾಂತ ಶೆಟ್ಟಿ ಕರ್ಜೆ, ರಾಜೇಶ್ ಶೆಟ್ಟಿ ಕಾಪು, ಗುರುರಾಜ ಉಪಾಧ್ಯಾಯ, ಸದಾಶಿವ ವಾಲ್ಪಾಡಿ ಮತ್ತಿತರನ್ನು ಗೌರವಿಸಿದರು. ವಿಜಯ ಶೆಟ್ಟಿ ಮೂಡುಬೆಳ್ಳೆ ಅವರು ಕಾರ್ಯಕ್ರಮ ನಿರ್ವಹಿಸಿದರು.
ಅಪಾರ ಸಂಖ್ಯೆಯಲ್ಲಿ ಯಕ್ಷಗಾನ ಕಲಾಭಿಮಾನಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ