ಮೀರಾರೋಡ್‌ ಪಲಿಮಾರು ಮಠ: ಶ್ರೀನಿವಾಸ ಕಲ್ಯಾಣೋತ್ಸವ


Team Udayavani, Jan 17, 2018, 2:43 PM IST

1601mum08.jpg

ಮುಂಬಯಿ: ಮೀರಾರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜ. 14 ರಂದು ನಡೆಯಿತು.

ಪಲಿಮಾರು ಮಠದ ಟ್ರಸ್ಟಿ ಹಾಗೂ ಪ್ರಬಂಧಕ ವಿದ್ವಾನ್‌ ರಾಧಾಕೃಷ್ಣ ಭಟ್‌ ಅವರ ಪೌರೋಹಿತ್ಯದಲ್ಲಿ ಶ್ರೀನಿವಾಸ ದೇವರ ಹಾಗೂ ಶ್ರೀ ದೇವಿ ಮತ್ತು ಭೂದೇವಿಯ ಉತ್ಸವ ಮೂರ್ತಿಗೆ ವರೋಪಚಾರ, ಕಂಕಣ ಧಾರೆಣೆಯೊಂದಿಗೆ ಸಪ್ತ ವಿಧದ ಶುಭ ಜಲಾಭಿಷೇಕಗೈದರು. ನವವಸ್ತ್ರ ಮತ್ತು ಆಭರಣಗಳಿಂದ ಅಕ್ಷತಾರೋಹಣ ಮಾಂಗಲ್ಯಧಾರಣೆಯೊಂದಿಗೆ ಕಲ್ಯಾಣೋತ್ಸವವು ನೆರವೇರಿತು.

ಟ್ರಸ್ಟಿ ಸಚ್ಚಿದಾನಂದ ರಾವ್‌ ಅವರು ಪೂಜಾ ಸಂಕಲ್ಪ ನೆರವೇರಿಸಿದರು. ಉಡುಪಿ ಪರ್ಯಾಯದ ಬಗ್ಗೆ ವಿವರಣೆ ನೀಡಿದ ಟ್ರಸ್ಟಿ ಸಚ್ಚಿದಾನಂದ ರಾವ್‌ ಅವರು, ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ  ಜ. 18 ರಂದು ಪ್ರಾತ:ಕಾಲ 3 ಕ್ಕೆ ವೈಭವದ ಪರ್ಯಾಯ ಮೆರವಣಿಗೆ ಹಾಗೂ ವಿವಿಧ ವಿಧಿ-ವಿಧಾನಗಳ ಬಳಿಕ ಮುಂಜಾನೆ 6.35 ಕ್ಕೆ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ ನಡೆಯಲಿದೆ. ಮಹಾರಾಷ್ಟ್ರದ ಹಾಗೂ ವಿವಿಧ ರಾಜ್ಯಗಳ ಜನತೆ ಈ ಸಮಾರಂಭದಲ್ಲಿ ಪಾಲ್ಗೊಂಡು ಶ್ರೀ ಕೃಷ್ಣ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ವಿನಂತಿಸಿದರು.

ಟ್ರಸ್ಟಿ ಹಾಗೂ ಪ್ರಬಂಧಕ ವಿದ್ವಾನ್‌ ರಾಧಾಕೃಷ್ಣ ಭಟ್‌ ಅವರು ಮಾತನಾಡಿ, ಶ್ರೀಪಾದರ ಸಂಕಲ್ಪದೊಂದಿಗೆ ಎರಡು ವರ್ಷಗಳ ಅಖಂಡ ಭಜನೆ ಪರ್ಯಾಯದಂದು ಉದ್ಘಾಟನೆಗೊಳ್ಳಳಲಿದೆ. ಮಹಾರಾಷ್ಟ್ರದಾದ್ಯಂತದ ಭಜನ ಮಂಡಳಿಗಳು ಮುಂದಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.

ಪುಂಡರಿಕಾಕ್ಷ ಉಡುಪ, ಜಯರಾಮ ಭಟ್‌, ಯತಿರಾಜ ಭಟ್‌, ಶ್ರೀಶ ಭಟ್‌ ಅವರು ಶ್ರೀನಿವಾಸ ಕಲ್ಯಾಣೋತ್ಸವದ ಬಗ್ಗೆ ವಿವರಿಸಿದರು. ಮಹಿಳಾ ಸದಸ್ಯೆಯರಿಂದ ಭಜನೆ ಮತ್ತು ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಮಹಾಪೂಜೆ ನೆರವೇರಿತು. ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ:ರಮೇಶ್‌ ಅಮೀನ್‌

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.