ಗುರುನಾರಾಯಣ ನೈಟ್ ಹೈಸ್ಕೂಲ್: ಪ್ರೀತಿಗೆ ಸ್ವರ್ಣ ಪದಕ
Team Udayavani, Jan 18, 2018, 5:03 PM IST
ಮುಂಬಯಿ: ಬಿಲ್ಲವರ ಅಸೋಸಿ ಯೇಶನ್ ಸಂಚಾಲಕತ್ವದ ಗುರು ನಾರಾಯಣ ನೈಟ್ ಹೈಸ್ಕೂಲ್ ತನ್ನ 57ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಪಾರಿತೋಷಕ ವಿತರಣೆ ಸಾಂತಾಕ್ರೂಜ್ನ ಬಿಲ್ಲವ ಭವನದ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗತ ಎಸ್ಎಸ್ಸಿ ಪರೀಕ್ಷೆಯಲ್ಲಿ ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲಾ ವಿದ್ಯಾರ್ಥಿನಿ ಕು| ಪ್ರೀತಿ ಮೂಲ್ಯ ಅವರಿಗೆ ಅಕ್ಷಯದ ಮಾಜಿ ಗೌರವ ಪ್ರಧಾನ ಸಂಪಾದಕ, ಭಾರತ್ ಬ್ಯಾಂಕಿನ ನಿರ್ದೇಶಕ ಸ್ವರ್ಣ ಪದಕ ಪ್ರಾಯೋಜಕ ಎಂ. ಬಿ. ಕುಕ್ಯಾನ್ ತನ್ನ ಸ್ವಹಸ್ತದಲ್ಲಿ ಸ್ವರ್ಣ ಪದಕ ಪ್ರದಾನಿಸಿ ಅಭಿನಂದಿಸಿದರು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳಾಗಿದ್ದ ಕನ್ನಡ ಸಂಘ ಸಾಂತಾಕ್ರೂಜ್ನ ಅಧ್ಯಕ್ಷ ಎಲ್. ವಿ. ಅಮೀನ್, ಭಾರತ್ ಬ್ಯಾಂಕಿನ ನಿರ್ದೇಶಕ ಭಾಸ್ಕರ ಎಂ. ಸಾಲ್ಯಾನ್, ಚಿತ್ರನಟ ಸೌರಭ್ ಸುರೇಶ್ ಭಂಡಾರಿ ಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತ ಮತ್ತು ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಸೋಸಿಯೇಶನ್ನ ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್, ಶಾಲಾ ಉಪ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್, ಮುಖ್ಯೋಪಾಧ್ಯಾಯ ರಾಮಚಂದ್ರಯ್ಯ ಸಿ. ಶಿಕ್ಷಕರಾದ ಶಿವರಾಜ್ ಪಾಟೀಲ್, ಮಲ್ಲಿಕಾರ್ಜುನ ಐ. ಬಡಿಗೇರಾ, ಸಿದ್ಧರಾಮ ದಶಮನಿ, ಮೋಹಿನಿ
ಪೂಜಾರಿ, ಹೇಮಾ ಗೌಡ, ನವಿತಾ ಎಸ್. ಸುವರ್ಣ, ವಿಮಲಾ ಡಿ. ಎಸ್., ಮಲ್ಲೇಶ್ ಗೌಡ, ಸುನೀಲ್ ಪಾಟೀಲ್, ವಿದ್ಯಾರ್ಥಿ ಪ್ರತಿನಿಧಿ ಕಾಶಿನಾಥ್ ಎಲ್. ಮಾನ್ಕೋಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ಬಂಗೇರ ಸೇರಿದಂತೆ ನೂರಾರು ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ