ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬಯಿ 6ನೇ ವಾರ್ಷಿಕೋತ್ಸವ


Team Udayavani, Jan 19, 2018, 2:02 PM IST

1801mum05.jpg

ಮುಂಬಯಿ: ಕರ್ನಾಟಕ ಕರಾವಳಿ ಗಂಡುಕಲೆ ಯಕ್ಷಗಾನ ಮುಂಬಯಿ ಮಹಾನಗರದಲ್ಲಿ ಹೊಸ ಹೊಸ ಯಕ್ಷ ತಂಡದವರಿಂದ ಪ್ರದರ್ಶನಗೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಯಕ್ಷಗಾನದ ತವರೂರಾದ ಕರಾವಳಿಯಲ್ಲಿ ಈಗ ವರ್ಷವಿಡೀ ಯಕ್ಷಗಾನ ನೋಡುವ ಭಾಗ್ಯ ಬಂದಿದೆ ಎಂದರೆ ಯಕ್ಷಗಾನ ಇಂದು ತನ್ನ ಪ್ರೇಕ್ಷಕ ವರ್ಗವನ್ನು ಹೆಚ್ಚಿಸಿಕೊಂಡಿದೆ ಎಂದು ಅರ್ಥ. ಈ ವಾಣಿಜ್ಯ ನಗರದಲ್ಲಿ ಯಕ್ಷಗಾನ ನಿತ್ಯ ನಿರಂತರವಾಗಿ ಬೆಳಗಬೇಕಾದರೆ ಕಲಾಪೋಷಕರು, ದಾನಿಗಳ ಪ್ರೋತ್ಸಾಹ ಅತ್ಯಗತ್ಯ. ಅಯ್ಯಪ್ಪ ಯಕ್ಷಕಲಾ  ಪ್ರತಿಷ್ಠಾನ ಮುಂಬಯಿ ಅನೇಕ ಯುವ ಪ್ರತಿಭೆಗಳ ಮೂಲಕ ಯಶಸ್ವಿ ಪ್ರದರ್ಶನ ನೀಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಉದ್ಯಮಿ ನಿತಿನ್‌ ಶೆಟ್ಟಿ ಜಡ್ಡಾಡಿ ಅವರು ನುಡಿದರು.

ಇತ್ತೀಚೆಗೆ ಶ್ರೀ ಅಯ್ಯಪ್ಪ ಯಕ್ಷ ಕಲಾ ಪ್ರತಿಷ್ಠಾನ ಮುಂಬಯಿ ಇದರ 6ನೇ ವಾರ್ಷಿಕೋತ್ಸವ ನಿಮಿತ್ತ ಘಾಟ್ಕೊàಪರ್‌ ಅಸಲ್ಫಾದ ಗೀತಾಂಬಿಕಾ ಮಂದಿರದ ಸಭಾಂಗಣ ದಲ್ಲಿ ನಡೆದ ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ಮತ್ತು ಕಲಾಪೋಷಕ, ಉದ್ಯಮಿ ಸತೀಶ್‌ ಕೊಠಾರಿ ದಂಪತಿಗೆ ಸಮ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಮಾಳ ಶ್ರೀನಿವಾಸ ಭಟ್‌ ಅವರು, ಯಕ್ಷಗಾನಕ್ಕೆ  ಪೌರಾಣಿಕ ಪ್ರಸಂಗವೇ ಜೀವಾಳ. ಸಾಮಾಜಿಕ, ಕಾಲ್ಪನಿಕ ಪ್ರಸಂಗಗಳು ಪುರಾಣದ ಆದರ್ಶವನ್ನು ಹೊಂದಿರಬೇಕು. ಇಂದು ಕಲಾ ಪ್ರೇಕ್ಷಕರು ಪೌರಾಣಿಕ ಪ್ರಸಂಗಗಳನ್ನೇ ಬಯಸುತ್ತಿದ್ದಾರೆ.  ಪೌರಾಣಿಕ ಪ್ರಸಂಗಗಳ ಪ್ರದರ್ಶನಗಳಿಂದ ಯಕ್ಷಗಾನ ಶ್ರೀಮಂತಗೊಳ್ಳುತ್ತಿದೆ. ಬಡಗುತಿಟ್ಟಿನ ಯಕ್ಷಶೈಲಿಯ ಈ ಕಲಾತಂಡ ಇನ್ನೂ ಹೆಚ್ಚು  ಕಾರ್ಯಕ್ರಮಗಳನ್ನು ನೀಡುತ್ತಾ, ಒಂದು ಯಶಸ್ವಿ ತಂಡವಾಗಿ ಹೊರಹೊಮ್ಮಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾದ ಸಾನ್ವಿ ಸ್ಟಾರ್‌ ಹಾಸ್ಪಿಟಾಲಿಟಿ ಇದರ ನಿರ್ದೇಶಕ ಸಂತೋಷ್‌ ಶೆಟ್ಟಿ ಅವರು ಮಾತನಾಡಿ, ಯುವ ಪ್ರತಿಭಾನ್ವಿತ ಪ್ರತಿಭೆಗಳು ಭಾಗವಹಿಸುವುದರಿಂದ ಯಕ್ಷಗಾನ ಕಲೆ ಬೆಳೆಯುವುದರಲ್ಲಿ ಸಂದೇಹವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿ ಎಂ. ಡಿ. ಸತೀಶ್‌ ಕೊಠಾರಿ ದಂಪತಿಯನ್ನು ಗಣ್ಯರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು. ವೇದಿಕೆಯಲ್ಲಿ ಕಲಾ ಪೋಷಕರುಗಳಾದ ಸುರೇಶ್‌ ಕೊಠಾರಿ, ರಾಜೀವ ಕೊಠಾರಿ, ರಾಜು ಮೆಂಡನ್‌ ವಂಡ್ಸೆ, ನಾಗರಾಜ ಪುತ್ರನ್‌, ರತ್ನಾಕರ ಶೆಟ್ಟಿ, ಜಯರಾಮ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಅಶೋಕ್‌ ಮರತೂರು ಮತ್ತು ಇತರ ಸದಸ್ಯರು ಅತಿಥಿಗಳನ್ನು ಗೌರವಿಸಿದರು.

ಪ್ರತಿಷ್ಠಾನದ ಕಾರ್ಯದರ್ಶಿ ಮಹೇಂದ್ರ ಶೆಟ್ಟಿ ನಂದೊÅಳ್ಳಿ ಸ್ವಾಗತಿಸಿದರು. ನಾಗರಾಜ ಅಪ್ಪೇಡಿ ಹೇರಂಜಾಲು ಕಾರ್ಯಕ್ರಮ ನಿರ್ವ ಹಿಸಿದರು. ಪ್ರತಿಷ್ಠಾನದ ಕಲಾವಿದ ರಿಂದ  ಯಕ್ಷಗಾನ ಪ್ರದರ್ಶನ ಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.