ನೆರೂಲ್ ಶ್ರೀ ಶನೀಶ್ವರ ಮಂದಿರ ವಾರ್ಷಿಕೋತ್ಸವ,ರಥೋತ್ಸವ
Team Udayavani, Jan 28, 2018, 4:27 PM IST
ನವಿಮುಂಬಯಿ: ಕಾರಣಿಕ ಕ್ಷೇತ್ರವೆಂದೇ ಪ್ರಸಿದ್ಧಿಯಲ್ಲಿರುವ ನೆರೂಲ್ ಶ್ರೀ ಶನೀಶ್ವರ ಮಂದಿರದ ರಥೋತ್ಸವ ಹಾಗೂ 26 ನೇ ವಾರ್ಷಿಕ ಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಶಿಬರೂರು, ಕಯ್ಯೂರು ಶ್ರೀ ವಿಜಯದಾಸ ಆಚಾರ್ಯರ ಪೌರೋಹಿತ್ಯದಲ್ಲಿ ವಾರ್ಷಿಕ ಉತ್ಸವವು ಜ. 23 ರಂದು ಪ್ರಾರಂ ಭಗೊಂಡಿದ್ದು, ಜ. 28 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಯೋಜಿ ಸಲಾಗಿದೆ. ಜ. 26 ರಂದು ಬೆಳಗ್ಗೆಯಿಂದ ಶ್ರೀ ಕ್ಷೇತ್ರದ ರಥೋ ತ್ಸವವು ಅದ್ದೂರಿಯಾಗಿ ನೆರವೇರಿತು.
ಧಾರ್ಮಿಕ ಕಾರ್ಯಕ್ರಮವಾಗಿ ಜ. 23 ರಂದು ಬೆಳಗ್ಗೆ 9 ರಿಂದ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ದ್ವಾದಶ ನಾಳಿಕೇರ ಗಣಯಾಗ, ಮುಖ್ಯಪ್ರಾಣ ದೇವರಿಗೆ ನವಕ ಪ್ರಧಾನ ಹೋಮ, ಅಪರಾಹ್ನ 2 ರಿಂದ ಸಂಪೂರ್ಣ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ರಾತ್ರಿ 9 ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ ಜರಗಿತು. ಜ. 24 ರಂದು ಬೆಳಗ್ಗೆ 9 ರಿಂದ ಶ್ರೀ ಮಹಾಗಣಪತಿ ದೇವರಿಗೆ ನವಕ ಪ್ರಧಾನ ಹವನ, ಶ್ರೀ ಶನೀಶ್ವರ ದೇವರಿಗೆ ನವಕ ಪ್ರದಾನ ಹವನ, ರಾತ್ರಿ 8 ರಿಂದ ಮಹಾಗಣಪತಿ ಹಾಗೂ ಶ್ರೀ ವೀರಾಂಜನೆಯ ಸ್ವಾಮಿಗೆ ರಂಗಪೂಜೆ ಹಾಗೂ ಬಲಿ ಉತ್ಸವ ನಡೆಯಿತು.
ಜ. 25 ರಂದು ಬೆಳಗ್ಗೆ ಶ್ರೀ ಮುಖ್ಯಪ್ರಾಣ ಸ್ವಾಮಿಗೆ ವಾಯುಸ್ತುತಿ ಪುರಶ್ಚರಣ ಹವನ, ಸಗ್ರಹಮಕ ಶನಿಶಾಂತಿ ಹವನ, ಅಪರಾಹ್ನ 4 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ರಾತ್ರಿ 8 ರಿಂದ ಬಲಿ ಉತ್ಸವ, ಕವಾಟ ಬಂಧನ ನಡೆಯಿತು. ಜ. 26 ರಂದು ಶ್ರೀಕ್ಷೇತ್ರದ ಶ್ರೀ ಮಹಾಗಣಪತಿ, ಶ್ರೀ ಹನುಮಾನ್, ಶ್ರೀ ಶನೀಶ್ವರ ದೇವರ ರಥೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಂಜಾನೆ 6 ರಿಂದ ಕವಾಟೋದ್ಘಾಟನೆ, ನವಕ ಪ್ರಧಾನ ಹವನ, ಪೂರ್ವಾಹ್ನ 11 ರಿಂದ ಮಹಾಪೂಜೆ, ಬಲಿ, ರಥಾರೋಹಣ, ಪಲ್ಲಪೂಜೆ, ಮಧ್ಯಾಹ್ನ 1ರಿಂದ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ವಿವಿಧೆಡೆಗಳಿಂದ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಧಾರ್ಮಿಕ ಕಾರ್ಯಕ್ರಮಗಳು ಮಂದಿರದ ಪ್ರಧಾನ ಅರ್ಚಕ ಸೂರಜ್ ಭಟ್ ಅವರ ನೇತೃತ್ವದಲ್ಲಿ ನೆರವೇರಿದವು.
ವಿವಿಧ ಕಾರ್ಯಕ್ರಮಗಳುಅಪರಾಹ್ನ ನೃತ್ಯ ವೈಭವ ಮತ್ತು ಶ್ರೀ ವಿಠಲ ನಾಯಕ್ ವಿಟ್ಲ ಮತ್ತು ಬಳಗದವರಿಂದ ಹಾಸ್ಯ ಲಹರಿ, ಸಂಜೆ ಧಾರ್ಮಿಕ ಸಭೆ, ಬಲಿ ಉತ್ಸವ, ರಥೋತ್ಸವ, ಕಟ್ಟೆಪೂಜೆ, ಓಕುಲಿ ಸ್ನಾನ, ಜಲಕ ಬಲಿ ಹಾಗೂ ಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.
ಜ. 27 ರಂದು ಬೆಳಗ್ಗೆ 9 ರಿಂದ ನವಕ ಪ್ರಧಾನ ಹವನ, ಸಂಪ್ರೋಕ್ಷಣೆ, ಮಂತ್ರಾಕ್ಷತೆ, ತೀರ್ಥ ಪ್ರಸಾದ ವಿತರಣೆ ಜರಗಿತು.ವಿಶ್ವಸ್ಥ ಮಂಡಳಿಯ ಕಾರ್ಯಾಧ್ಯಕ್ಷ ಸಂತೋಷ್ ಡಿ. ಶೆಟ್ಟಿ, ಅಧ್ಯಕ್ಷ ರಮೇಶ್ ಎಂ. ಪೂಜಾರಿ, ಉಪಾಧ್ಯಕ್ಷ ಗೋಪಾಲ್ ವೈ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಗೌರವ ಕೋಶಾಧಿಕಾರಿ ವಿಶ್ವನಾಥ ಕೆ. ಪೂಜಾರಿ, ಜತೆ ಕಾರ್ಯದರ್ಶಿ ಜಯಕರ ಬಿ. ಪೂಜಾರಿ, ಜತೆ ಕೋಶಾಧಿಕಾರಿ ಕರುಣಾಕರ ಎಸ್. ಆಳ್ವ, ವಿಶ್ವಸ್ಥರುಗಳಾದ ಎನ್. ಡಿ. ಶೆಣೈ, ಪುನೀತ್ ಕುಮಾರ್ ಆರ್. ಶೆಟ್ಟಿ, ಪ್ರಭಾಕರ ಎಸ್. ಹೆಗ್ಡೆ, ಅನಿಲ್ ಕೆ. ಹೆಗ್ಡೆ, ಕೃಷ್ಣ ಎಂ. ಪೂಜಾರಿ, ದಾಮೋದರ ಶೆಟ್ಟಿ, ದಯಾನಂದ ಶೆಟ್ಟಿ, ತಾರಾನಾಥ ಶೆಟ್ಟಿ, ಸಲಹಾ ಸಮಿತಿಯ ಪ್ರಕಾಶ್ ಭಂಡಾರಿ, ಕೆ. ಡಿ. ಶೆಟ್ಟಿ, ಸದಾನಂದ ಡಿ. ಶೆಟ್ಟಿ, ಎನ್. ಕೆ. ಪೂಜಾರಿ, ಜಯರಾಮ ಪೂಜಾರಿ, ಕೃಷ್ಣ ಐ. ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಉತ್ಸವವು ನೆರವೇರಿತು.
ಭಜನ ಮಂಡಳಿಯ ಅಧ್ಯಕ್ಷ ಶೇಖರ ಬಿ. ಪಾಲನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವೀಣಾ ವಿ. ಪೂಜಾರಿ, ಪೂಜಾ ಸಮಿತಿ, ಮಹಿಳಾ ವಿಭಾಗ ಹಾಗೂ ಸರ್ವ ಸದಸ್ಯರ, ಭಕ್ತಾದಿಗಳ ಸಹಕಾರದೊಂದಿಗೆ ವಾರ್ಷಿಕ ಉತ್ಸವವು ಜರಗಿದ್ದು, ಭಕ್ತಾಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ