ಮುಂಬಯಿ ವಿವಿ ಕನ್ನಡ ವಿಭಾಗ: ಸಾಹಿತ್ಯ ಸಂವಾದ ಕಾರ್ಯಕ್ರಮ


Team Udayavani, Feb 16, 2018, 4:21 PM IST

1502mum05.jpg

ಮುಂಬಯಿ: ನೆಲದ ಜನಪದದಲ್ಲಿ ಶ್ರೇಷ್ಠತೆಯಿದೆ. ಇವತ್ತು ನಾವು ಪ್ರೀತಿ ಗೌರವ ವನ್ನು ಕಳೆದುಕೊಳ್ಳುತ್ತಿದ್ದೇವೆ. ಅದನ್ನು ಬರೆಯು ತ್ತಿದ್ದೇವೆ, ಆದರೆ ಬದುಕುತ್ತಿಲ್ಲ. ಬಾಂಧವ್ಯಕ್ಕೆ ಗೋಡೆಯನ್ನು ಕಟ್ಟಿಕೊಳ್ತಾ ಇದ್ದೇವೆ. ಆ ಪ್ರೀತಿ ಕಟ್ಟುವ ಕ್ಷೇತ್ರ ಅಂದರೆ ಅದು ಸಾಹಿತ್ಯ ಕ್ಷೇತ್ರ ಮಾತ್ರ. ರಾಜಕೀಯ ಮನಸನ್ನು ಕೆಡಿಸುತ್ತದೆ ಆದರೆ ಸಂಗೀತ ಮನಸ್ಸನ್ನು ಕಟ್ಟುತ್ತದೆ. ನಾವು ನೈಜತೆಯ ಕಾಲವನ್ನು ಮರೆಯುತ್ತಿದ್ದೇವೆ. ತಾಂತ್ರಿಕತೆಯನ್ನು ಅಳವಡಿಸುತ್ತಿದ್ದೇವೆ. ಎದೆಯಿಂದ ಎದೆಗೆ ಬರುವುದು ಜಾನಪದ ಸಂಸ್ಕೃತಿ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ| ಅಪ್ಪಗೆರೆ ತಿಮ್ಮರಾಜು ಅವರು ನುಡಿದರು.

ಇತ್ತೀಚೆಗೆ ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಸಾಹಿತ್ಯ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಇವರು, ಜಾನಪದ ಎದೆಯ ಸಂಸ್ಕೃತಿ,  ನಾವು ಇಂದು ಸಂಸ್ಕೃತಿಯನ್ನು ತಲೆಯಿಂದ ತಲೆಗೆ ದಾಟಿಸುತ್ತಿದ್ದೇವೆ. ಇದು ಕಿವಿಯಿಂದ ಎದೆಗೆ, ಎದೆಯಿಂದ ಎದೆಗೆ ಆದಿಕಾಲದ ಸಂಸ್ಕೃತಿ ಅನಂತಕಾಲದ ಸಂಸ್ಕೃತಿಯಾಗಬೇಕು. ಮೂಲ ನಂಬಿಕೆಗಳು ಬೇಕು. ಮೂಢನಂಬಿಕೆಗಳು ಬೇಡ. ಪ್ರೀತಿ-ಗೌರವವನ್ನು ಕಟ್ಟಿದವರು ಜನಪದರು ಎಂಬುದಾಗಿ ಅನೇಕ ಜಾನಪದ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ಅವುಗಳ ಮಹತ್ವವನ್ನು ಕುರಿತು ತಿಳಿ ಹೇಳಿದರು.

ಉಪಯೋಗ ಪಡೆಯಲು ಕರೆ 
ಕನ್ನಡ ಸಾಹಿತ್ಯ ಪರಿಷತ್ತಿನ ಸಂಯೋಜನಾ ಧಿಕಾರಿಯಾಗಿರುವ ಬಿ. ಎಸ್‌. ಪರಡ್ಡಿ ಅವರು ಮಾತನಾಡಿ, ಸರಕಾರದ ವಿವಿಧ ಕಾರ್ಯಕ್ರಮಗಳ, ಯೋಜನೆಗಳ ವಿವಿಧ ಹಂತಗಳು, ಸೌಲಭ್ಯಗಳ ಕುರಿತು ತಿಳಿಸಿದರು. ಹೊರನಾಡ ಕನ್ನಡಿಗರಿಗೆ ಲಭ್ಯವಿರುವ ಸವಲತ್ತುಗಳ ಬಗ್ಗೆ ತಿಳಿಸುತ್ತಾ ಅದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಘಟಕ, ಕುವೆಂಪು  ಅವರ ಅಭಿಮಾನಿ ಕುವೆಂಪು ಪ್ರಕಾಶ್‌  ಅವರು ಮಾತನಾಡಿ, ವಿದೇಶದಲ್ಲಿ ನಮ್ಮ ಸಂಸ್ಕೃತಿಗೆ  ಹೆಚ್ಚು ಬೇಡಿಕೆ ಇದೆ. ಕನ್ನಡಿಗರಿಗೆ, ಕಲಾಸಕ್ತರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ಕಲ್ಪಿಸಿಕೊಡುವ ಕಾರ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿರತನಾಗಿದ್ದೇನೆ. ನಮ್ಮ ಸಂಸ್ಕೃತಿಯನ್ನು ವಿದೇಶದ ನೆಲದಲ್ಲಿ ಬಿತ್ತರಿಸಿ ಅವರಿಗೆ ನಮ್ಮ ಸಾಹಿತ್ಯ, ಕಲೆಯ ಮೇಲೆ ಪ್ರೀತಿ ಮೂಡಿಸುವ ಕಾರ್ಯವನ್ನು ಮಾಡುವುದು ನಮ್ಮ ಉದ್ದೇಶ ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ ಅವರು ಮಾತನಾಡಿ,  ಹೊರನಾಡಾದ ಮುಂಬಯಿ ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಗೆ ಮುಂಬಯಿ ಮಹತ್ವದ ಕಾಣಿಕೆಯನ್ನು ಕೊಟ್ಟಿದೆ. ಮುಂಬಯಿ ಒಂದು ಸಾಂಸ್ಕೃತಿಕ ನಗರ. ಇಲ್ಲಿನದು ನಗರ ಜಾನಪದ. ವಲಸೆ ಬಂದ ಕನ್ನಡಿಗರು ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡಿದ್ದಾರೆ. ಕನ್ನಡ ವಿಭಾಗ ಕಳೆದ ನಾಲ್ಕು ದಶಕಗಳಿಂದ ವಿಭಾಗದಲ್ಲಿ ಕನ್ನಡ ಪ್ರಸಾರ ಪ್ರಚಾರದಲ್ಲಿ ನಿರತವಾಗಿದೆ. ಡಾ| ಅಪ್ಪಗೆರೆ ತಿಮ್ಮರಾಜು ಅವರಂತಹ ಅಪ್ಪಟ ಕಲಾವಿದರು ಸಂಘಟಕರು ವಿಭಾಗದ ಮೇಲಿನ ಪ್ರೀತಿಯಿಂದ ವಿಭಾಗಕ್ಕೆ ಭೇಟಿ ನೀಡಿರುವುದು ಸಂತೋಷದ ಸಂಗತಿ ಎಂದು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಪರಿಚಾರಿಕೆಗೈದ ಮೇರಿ ಪಿಂಟೊ ಅವರನ್ನು ಡಾ| ಅಪ್ಪಗೆರೆ ತಿಮ್ಮರಾಜು ಅವರು ಸಮಸ್ತ ಕನ್ನಡಿಗರ ಪರವಾಗಿ ಗೌರವಿಸಿದರು. ವಿಭಾಗದ ಸಹಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. 

ವಿಭಾಗದ ಸಂಶೋಧನ ಸಹಾಯಕರಾದ ಶಿವರಾಜ್‌ ಎಂ. ಜಿ, ನಳಿನಾ ಪ್ರಸಾದ್‌, ದಿನಕರ ನಂದಿ ಚಂದನ್‌, ಸುರೇಖಾ ಶೆಟ್ಟಿ, ಅಮೃತಾ ಶೆಟ್ಟಿ, ಸುಧೀರ್‌ ದೇವಾಡಿಗ, ಗಣಪತಿ ಮೊಗವೀರ, ಅನಿತಾ ಪೂಜಾರಿ, ಉದಯ ಶೆಟ್ಟಿ, ಲಕ್ಷಿ¾à ಪೂಜಾರಿ, ಜಯಕರ್‌ ಪಾಲನ್‌ ಮೊದಲಾದವರು ಸಂವಾದದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.