ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ:ಸಾಂಸ್ಕೃತಿಕ ಕಲಾಮಹೋತ್ಸವ


Team Udayavani, Mar 9, 2019, 9:55 PM IST

0903mum07.jpg

ಮುಂಬಯಿ: 12 ವರ್ಷದ ಪ್ರೌಢ ಕನ್ನಡಿಗ ಕಲಾವಿದರ ಸಂಸ್ಥೆಗೆ ವರ್ಷ ಹೆಚ್ಚಾದಂತೆ ಗೌರವ ಹೆಚ್ಚಾಗುತ್ತಿದೆ. ಇದು ಮೆಚ್ಚುವಂಥದ್ದು. ಯೌವನಕ್ಕೆ ಕಾಲಿಡುವ ಸಂಭ್ರಮ. ರಾಷ್ಟ್ರವನ್ನು ನರೇಂದ್ರ, ಮಹಾರಾಷ್ಟ್ರವನ್ನು ದೇವೇಂದ್ರ, ಕಲಾ ಪರಿಷತ್ತನ್ನು ಸುರೇಂದ್ರ ನಡೆಸುತ್ತಿದ್ದಾರೆ. ಅಂತೆಯೇ ಇಂದ್ರನಿಲ್ಲದೆ ಯಾವುದೂ ಅಸಾಧ್ಯ ಎಂಬುವುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ. ಬೆಳಗುವುದಕ್ಕೆ ಇಂದ್ರನಂಥವರ ಅಗತ್ಯವಿದೆ. ಇಂತಹ ಗಣ್ಯರ ಮುನ್ನಡೆಯಿಂದ ಈ ಸಂಸ್ಥೆ ಕಾರ್ಯ ನೆರವೇರಿಸುತ್ತಿದೆ. ಶ್ರೀಕೃಷ್ಣನ ಅನುಗ್ರಹದಿಂದ ಸಂಸ್ಥೆ ಬೆಳೆದು ಶತಮಾನ ಕಾಣಲಿ ಎಂದು ಶ್ರೀ ಪೇಜಾವರ ಮಠದ ಮುಂಬಯಿ ಶಾಖೆಯ ಆಡಳಿತಾಧಿಕಾರಿ ವಿದ್ವಾನ್‌ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ತಿಳಿಸಿದರು.
ಮಾ. 9 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಸಭಾಗೃಹದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ವಾರ್ಷಿಕ ಸಾಂಸ್ಕೃತಿಕ  ಕಲಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಾವಿದರೆಲ್ಲರನ್ನು ಒಂದೇ ವೇದಿಕೆಯಡಿಯಲ್ಲಿ ಒಗ್ಗೂಡಿ ಸುತ್ತಿರುವ ಈ ಸಂಸ್ಥೆಯ ಕಾರ್ಯವೈಖರಿ ಅಭಿನಂದನೀಯವಾಗಿದೆ ಎಂದರು.

ಪರಿಷತ್ತಿನ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಫೋರ್‌ಕಾಸ್ಟ್‌ ಎಡ್ವರ್‌ಟೈಸಿಂಗ್‌ ಪ್ರೈವೇಟ್‌ ಲಿಮಿಟೆಡ್‌  ಕಾರ್ಯ ನಿರ್ದೇಶಕ ಗಣೇಶ್‌ ಶ್ಯಾನ್‌ಬಾಗ್‌, ಗೌರವ ಅತಿಥಿಗಳಾಗಿ  ಕನ್ನಡ ಸೇವಾ ಸಂಘ ಪೊವಾಯಿ ಅಧ್ಯಕ್ಷ ಕರುಣಾಕರ ವಿ. ಶೆಟ್ಟಿ, ಮುಲುಂಡ್‌ ಫ್ರೆಂಡ್ಸ್‌ ಅಧ್ಯಕ್ಷ ಸುರೇಶ್‌ ಶೆಟ್ಟಿ ಯೆಯ್ನಾಡಿ, ಖಾರ್‌ಘರ್‌  ಕನ್ನಡ ಸಂಘ ಅಧ್ಯಕ್ಷೆ ನಳಿನಾ ಪ್ರಸಾದ್‌, ಉದ್ಯಮಿ ಹಾಗೂ ಸಮಾಜ ಸೇವಕ  ಆರ್‌. ಕೆ. ನಾಯರ್‌, ರಾಧಾಕೃಷ್ಣ ಆಕಾಡೆಮಿಯ  ಸ್ಥಾಪಕ ನಿರ್ದೇಶಕಿ ಸುಕನ್ಯಾ ಸುಬ್ರಹ್ಮಣ್ಯ ಭಟ್‌ ಉಪಸ್ಥಿತರಿದ್ದು ಸಾಂದರ್ಭಿಕವಾಗಿ ಮಾತನಾಡಿ ಶುಭಹಾರೈಸಿದರು.

ಮುಖ್ಯ ಅತಿಥಿ ಗಣೇಶ್‌ ಶ್ಯಾನ್‌ಬಾಗ್‌ ಅವರು ಮಾತನಾಡಿ,  ನನ್ನನ್ನು ನಿಮ್ಮಂತಹ ಕಲಾವಿದರೊಂದಿಗೆ ಸೇರಿಸಿಕೊಂಡು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ನೀಡಿದ್ದು ಅತೀವ ಸಂತೋಷ ತಂದುಕೊಟ್ಟಿದೆ. ಕಲೆಗೆ ಅಂತ್ಯವಿಲ್ಲ, ಆದರೆ ಯುವ ಜನಾಂಗವನ್ನು ಕಲೆಯತ್ತ ಸೇರಿಸಿಕೊಳ್ಳುವ ಕೆಲಸ ನಮ್ಮಿಂದಾಗಬೇಕು. ಇವತ್ತು ಮಾಧ್ಯಮ ಮತ್ತು ತಾಂತ್ರಿಕ ವ್ಯವಸ್ಥೆ ಮೇಲ್ಮಟ್ಟಕ್ಕೆ ತಲುಪಿದ್ದು, ಆದರ ಸದುಪಯೋಗವನ್ನು ಇಂದಿನ ಕಲಾವಿದರು ಪಡೆದುಕೊಳ್ಳಬೇಕು. ವಿಶೇಷವಾಗಿ ಯುವ ಜನಾಂಗ ಪಡೆದುಕೊಳ್ಳುವಂತೆ ನಾವೂ ಮಾರ್ಗದರ್ಶಕರಾಗಬೇಕು ಎಂದರು.

ಅಪರ್ಣಾ ಭಟ್‌ ಪ್ರಾರ್ಥನೆಗೈದರು. ಉಪಾಧ್ಯಕ್ಷ ಕಮಲಾಕ್ಷ ಜಿ. ಸರಾಫ್‌ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಅರವಿಂದ ಶೆಟ್ಟಿ ಕೊಜಕೊಳಿ,  ಗೌರವ ಪ್ರಧಾನ  ಕೋಶಾಧಿಕಾರಿ ಪಿ. ಬಿ, ಚಂದ್ರಹಾಸ್‌, ಜೊತೆ ಕಾರ್ಯದರ್ಶಿ ಚಂದ್ರಾವತಿ ದೇವಾಡಿಗ,  ಜೊತೆ ಕೋಶಾಧಿಕಾರಿ ನವೀನ್‌ ಶೆಟ್ಟಿ ಇನ್ನಬಾಳಿಕೆ, ಸಂಚಾಲಕ ರಮೇಶ್‌ ಶಿವಪುರ,  ಸಂಚಾಲಕಿ ಕುಸುಮಾ  ಸಿ. ಪೂಜಾರಿ, ಮಾಜಿ ಕಾರ್ಯದರ್ಶಿ ರಾಜು ಶ್ರೀಯಾನ್‌ ನಾವುಂದ ಅವರು ಅತಿಥಿಗಳನ್ನು ಪುಷ್ಪಗುಚ್ಚ, ಸ್ಮರಣಿಕೆಯನ್ನಿತ್ತು  ಗೌರವಿಸಿದರು. ವಿಜಯ ಶೆಟ್ಟಿ ಕುತ್ತೆತ್ತೂರು ಸಭಾ ಕಾರ್ಯಕ್ರಮ ನಿರೂಪಿಸಿದರು. ಗೌರವ  ಪ್ರಧಾನ  ಕಾರ್ಯದರ್ಶಿ ಬಾಬಾಪ್ರಸಾದ್‌ ಅರಸ ವಂದಿಸಿದರು.

ಸಾಂಸ್ಕೃತಿಕ ಕಲಾಮಹೋತ್ಸವವಾಗಿ ವಿವಿಧ ಕಲಾ ಸಂಸ್ಥೆಗಳಿಂದ “ನೃತ್ಯಸಂಗಮ’ ಮತ್ತು ಕಲಾ ಸೌರಭ ತಂಡದ ನಿರ್ದೇಶಕ ಪದ್ಮನಾಭ ಸಸಿಹಿತ್ಲು ನಿರ್ದೇಶನದಲ್ಲಿ “ಗಾನ ಸಂಭ್ರಮ’ ಕಾರ್ಯಕ್ರಮನ್ನು ಹಾಗೂ ಪರಿಷತ್ತಿನ ಸದಸ್ಯರಿಂದ   ರಂಗ ಕಲಾವಿದ ರಮೇಶ್‌ ಶಿವಪುರ ನಿರ್ದೇಶನದಲ್ಲಿ “ತಾಳಮದ್ದಲೆ’ ಕನ್ನಡ ನಾಟಕ ಪ್ರದರ್ಶನಗೊಂಡಿತು. ಸಾಂಸ್ಕೃತಿಕ  ಕಾರ್ಯಕ್ರಮವನ್ನು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತಾರಾ ಬಂಗೇರ ನಿರ್ವಹಿಸಿದರು. ಸಂಸ್ಥೆಯ ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.       

ಕನ್ನಡಿಗ ಕಲಾವಿದರ ಪರಿಷತ್ತು  ಕಲೆಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಅವರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದೆ. ಕಲಾವಿದರಿಗೆ ವೈದ್ಯಕೀಯ ನೆರವು, ಮಕ್ಕಳಿಗೆ ಶೈಕ್ಷಣಿಕ ನೆರವು ನೀಡಲಾಗುತ್ತಿದೆ. ಇಂದಿನ ಸಮಾರೋಪ ಸಮಾರಂಭದಲ್ಲಿಯೂ ಕಲಾವಿದರಿಗೆ ಧನ ಸಹಾಯ ನೀಡಲಿದ್ದೇವೆ. ಓರ್ವ ವ್ಯಕ್ತಿಗೆ ಮನೆ ಇಲ್ಲದಿದ್ದರೆ ಸಮಾಧಾನದಿಂದ ಇರಲು ಸಾಧ್ಯವಿಲ್ಲ.  ಅದೇ ರೀತಿಯಲ್ಲಿ ಸಂಸ್ಥೆಯೊಂದು ಸ್ವಂತ ಮನೆಯ ಆವಶ್ಯಕತೆಯಿದೆ. ಪರಿಷತ್ತು ಕೂಡ ವೃಕ್ಷವಾಗಿ ಬೆಳೆಯುತ್ತಿದ್ದು, ಇದಕ್ಕಾಗಿ ಸ್ವಂತ ಕಚೇರಿಯ ಅಗತ್ಯವಿದೆ. ಅದಕ್ಕಾಗಿ ಎಲ್ಲರೂ ಒಂದುಗೂಡಿ ಸ್ಪಂದಿಸಬೇಕು.
 – ಡಾ| ಸುರೇಂದ್ರ ಕುಮಾರ್‌ ಹೆಗ್ಡೆ 
            
ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.