ಪತ್ರಿಕೋದ್ಯಮ ಮತ್ತು ಸಂಪಾದಕೀಯ ಒಂದು ನಾಣ್ಯದ ಎರಡು ಮುಖ 


Team Udayavani, Mar 29, 2018, 4:42 PM IST

2703mum08.jpg

ಮುಂಬಯಿ: ಸಂಪಾದಕನ ಕ್ರಿಯೆ ಸಂಪಾ ದಕೀಯ. ಸಂಪಾದಕೀಯ ನಿಷ್ಪಕ್ಷ ಪಾತವಾಗಿರಬೇಕು. ಯಾವುದೇ ವಿಷಯದ ಕುರಿತು ವಿಮರ್ಶಿಸುವ ಶಕ್ತಿ ಸಂಪಾದಕೀಯಕ್ಕಿರಬೇಕು. ಸಂಪಾದಕನಾದವನಿಗೆ ಬದ್ಧತೆ, ಶಿಸ್ತು, ಸಂಯಮ, ಜವಾಬ್ದಾರಿ ಇರಬೇಕು. ಸಮಾಜ ಕಟ್ಟುವ ಜವಾಬ್ದಾರಿ ಸಂಪಾದಕೀಯದಲ್ಲಿದೆ. ಅದು ಚರ್ಚೆಗೆ ಪೂರಕವಾಗಿರಬೇಕು. ಸ್ಪಷ್ಟವಾದ ದೃಷ್ಟಿಕೋನವಿರಬೇಕು. ಅದರಂತೆ ಸುತ್ತಮುತ್ತಲಿನ ಆಗು-ಹೋಗುಗಳ ಕುರಿತು ಸೂಕ್ಷ್ಮಾವಲೋಕನವಿರಬೇಕು.  ಪತ್ರಿಕೆ, ಪತ್ರಿಕೋದ್ಯಮ, ಸಂಪಾದಕೀಯ ಏಕಕಾಲಕ್ಕೆ ಒಟ್ಟೊಟ್ಟಿಗೆ ನಡೆಯುತ್ತಾ ಹೋಗುವ ಕ್ರಿಯೆ. ದೊಡ್ಡ ಪತ್ರಿಕೆಗಳಲ್ಲಿ ಪ್ರತಿ ವಿಭಾಗಕ್ಕೆ  ಹಲವು ಉಪ ಸಂಪಾದಕರು ಇರುತ್ತಾರೆ. ಒಂದೊಂದು ಪುಟಗಳಿಗೂ ಕೆಲವು ಉಪ ಸಂಪಾದಕರಿರುವುದೂ ಇದೆ. ಪತ್ರಿಕೋದ್ಯಮ ಮತ್ತು ಸಂಪಾದಕೀಯ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ  ಚಂದ್ರಶೇಖರ ಪಾಲೆತ್ತಾಡಿ ಅವರು ಅಭಿಪ್ರಾಯಪಟ್ಟರು.

ಅವರು ಇತ್ತೀಚೆಗೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಸಂಪಾದಕೀಯ ಬರೆಹ ಎಂಬ ವಿಷಯದ ಕುರಿತು ಸಾಹಿತ್ಯ ಸಂವಾದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಈಗ ಪತ್ರಿಕೆಗಳ ಆವೃತ್ತಿಗಳು ವಿಕೇಂದ್ರೀಕರಣಗೊಂಡಿವೆ. ಆದ್ದರಿಂದ ಓದುಗರಿಗೆ ಸಮಗ್ರ ಸುದ್ದಿಗಳನ್ನು ತಲುಪಿಸಲಾಗುತ್ತಿಲ್ಲ. ಒಂದು ಜಿಲ್ಲೆಯಲ್ಲಿನ ಸುದ್ದಿಗಳು ಇನ್ನೊಂದು ಜಿಲ್ಲೆಗೆ ಪಸರಿಸುತ್ತಿಲ್ಲ. ಆಯಾಯ ಪ್ರದೇಶದ ಸುದ್ದಿಗಳಿಗೇ ಹೆಚ್ಚು ಮಹತ್ವ ನೀಡುಲಾಗುತ್ತಿದೆ. ಅದಕ್ಕೆ ಮುಖ್ಯ ಕಾರಣ ಜಾಹೀರಾತು ಕೂಡ ಆಗಿದೆ. ಜಾಹೀರಾತು ಇಲ್ಲದೆ ಪತ್ರಿಕೆ ನಡೆಸುವುದೂ ಕೂಡಾ ಕಷ್ಟ. ಒಮ್ಮೊಮ್ಮೆ ಜಾಹೀರಾತು ಇಲ್ಲದಿದ್ದಾಗ ಪುಟ ತುಂಬಿಸುವ ಕಾರ್ಯವನ್ನೂ ಮಾಡಬೇಕಾಗುತ್ತದೆ ಎಂದು ಅವರು ನುಡಿದರು. ವಿಭಾಗದ ಪ್ರಾಧ್ಯಾಪಕರೂ, ಮುಖ್ಯಸ್ಥರೂ ಆದ ಡಾ| ಜಿ. ಎನ್‌. ಉಪಾಧ್ಯ ಅವರು  ಪ್ರಾಸ್ತಾವಿಕವಾಗಿ ಮಾತನಾಡಿ, ಮುಂಬಯಿ ಕನ್ನಡ ಪತ್ರಿಕೋದ್ಯಮಕ್ಕೆ ಸುದೀರ್ಘ‌ವಾದ ಇತಿಹಾಸವಿದೆ. ಕರ್ನಾಟಕ ಮಲ್ಲ ಪತ್ರಿಕೆಯ ಮೂಲಕ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರು ಗೈದ ಕನ್ನಡ ನುಡಿಸೇವೆ ಅನುಪಮವಾದುದು. ಪಾಲೆತ್ತಾಡಿ ಅವರು ಬರೆದ ಸಂಪಾದಕೀಯ ಹಾಗೂ ಇದು ಭಾರತ ಅಂಕಣಗಳ ಸಂಖ್ಯೆ ಹತ್ತಿರ ಹತ್ತಿರ ಒಂಬತ್ತು ಸಾವಿರ. ನೇರ ನಡೆ ನುಡಿಗೆ ಹೆಸರಾದ ಪಾಲೆತ್ತಾಡಿ ಅವರ ಬರವಣಿಗೆ ಸಮಚಿತ್ತದಿಂದ ಕೂಡಿದ್ದು ಓದುಗರನ್ನು ಚಿಂತನೆಗೆ ಹಚ್ಚುತ್ತಲೇ ಬಂದಿರುವುದು ಗಮನೀಯ ಅಂಶ. ಸಂಪಾದಕೀಯ ಪತ್ರಿಕೆಯೊಂದರ ಅಭಿರುಚಿ, ಮನೋಧರ್ಮವನ್ನು ಎತ್ತಿ ಹಿಡಿಯುತ್ತದೆ. ಎಂಎ ವಿದ್ಯಾರ್ಥಿ ಗಳು ಒಳ್ಳೆಯ ಲೇಖಕರಾಗಿ  ಹೊರ ಹೊಮ್ಮಿದರೆ ನಮ್ಮ ಶ್ರಮ ಸಾರ್ಥಕ ಎಂದು ನುಡಿದು, ಹಿರಿಯ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ ಅವರ ಶೈಲಿಯನ್ನು ಕೊಂಡಾಡಿದರು.

ಸಂಶೋಧನ ಸಹಾಯಕರಾದ ರಮಾ ಉಡುಪ, ಮಧುಸೂದನ್‌ ರಾವ್‌, ಶಿವರಾಜ್‌ ಎಂ.ಜಿ., ಸುರೇಖಾ ದೇವಾಡಿಗ, ನಳಿನಾ ಪ್ರಸಾದ್‌, ಸುರೇಖಾ ಶೆಟ್ಟಿ, ಜ್ಯೋತಿ ಶೆಟ್ಟಿ, ದಿನಕರ್‌ ಚಂದನ್‌, ಪಾಲನ್‌, ಸುಧೀರ್‌ ದೇವಾಡಿಗ, ಗಣಪತಿ ಮೊಗವೀರ, ಉದಯ ಶೆಟ್ಟಿ, ಕರುಣಾಕರ, ಮೊದಲಾದವರು ಉಪಸ್ಥಿತರಿದ್ದು ಸಂವಾದದಲ್ಲಿ ಪಾಲ್ಗೊಂಡರು. ವಿಭಾಗದ ಸಹಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.