ತುಳು ಸಂಘ ಬರೋಡಾ ವತಿಯಿಂದ 31ನೇ ವಾರ್ಷಿಕ ಬಿಸುಪರ್ಬ


Team Udayavani, Apr 18, 2018, 3:45 PM IST

1704mum02.jpg

ಬರೋಡಾ: ತುಳು ಸಂಘ ಬರೋಡಾದ ಮಹಿಳಾ ವಿಭಾಗವು ಇಂದು ಆಯೋಜಿಸಿರುವ ವೈಶಿಷ್ಟéಪೂರ್ಣ ಬಿಸು ಕಣಿ ದರ್ಶನ ಕಾರ್ಯಕ್ರಮ ಕಂಡು ಮನಸ್ಸಿಗೆ ಬಹಳ ಸಂತೋಷವಾಯಿತು. ನಾಡಿನ ಸಂಸ್ಕೃತಿ- ಸಂಸ್ಕಾರಗಳು ಇಂದು ಮರೆಯಾಗುತ್ತಿರುವ ಸಂದರ್ಭದಲ್ಲಿ ಇಲ್ಲಿನ ತುಳು-ಕನ್ನಡಿಗ ಮಹಿಳೆ ಯರು ಸಂಘಟಿತರಾಗಿ ಬಿಸುಹಬ್ಬವನ್ನು ಹಿಂದಿನ ಪರಂಪರೆಯಂತೆ ಆಚರಿಸಿ ಯುವ ಪೀಳಿಗೆಗೆ ಇದರ ಬಗ್ಗೆ ಅರಿವು ಮೂಡಿಸಿರುವುದು ಅಭಿನಂದನೀಯ. ದೂರದ ಗುಜರಾತಿನಲ್ಲಿ ನೆಲೆನಿಂತ ತುಳು-ಕನ್ನಡಿಗರು ಕಳೆದ ಮೂವತ್ತು ವರ್ಷಗಳಿಂದ ತಪಸ್ಸಿನಂತೆ ಬಹಳ ಸಡಗರದಿಂದ ಸಂಭ್ರಮವನ್ನು ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಸಂಸ್ಕೃತಿ, ಪರಂಪರೆಯನ್ನು ಉಳಿಸಿ-ಬೆಳೆಸುವ ಒಂದು ದೊಡ್ಡ ರಚನಾತ್ಮಕ ಯಜ್ಞ ಇದಾಗಿದೆ ಎಂದು ಮುಂಬಯಿ ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಇವರು ಅಭಿಪ್ರಾಯಿಸಿದರು.

ಎ. 14ರಂದು ತುಳು ಸಂಘ ಬರೋಡಾ ಇದರ ಮಹಿಳಾ ವಿಭಾಗದ ವತಿಯಿಂದ ಸಂಘ ತುಳು ಚಾವಡಿ ಸಭಾಗೃಹದಲ್ಲಿ ನಡೆದ 31ನೇ ವಾರ್ಷಿಕ ಬಿಸುಪರ್ಬ ಸಂಭ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಇವರು, ಹೆಣ್ಮಕ್ಕಳಿಗೆ ತವರು ಮನೆಯ ಯಾವ ಸುಖ, ಭೋಗಗಳು ಬೇಡ ಎಂದು ಅವರು ತಿಳಿಸಿದರು.

ಆದ್ದರಿಂದ ಪೋಷಕರು ಎಂತಹ ಕಷ್ಟದಲ್ಲಿದ್ದರೂ ಕೂಡಾ ತಮ್ಮ ಹೆಣ್ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವ ಪಣ ತೊಡಬೇಕು. ಪಾಲಕರು ತಮ್ಮ ಈ ಹೊಣೆಗಾರಿಕೆಯಿಂದ ಯಾವ ಕಾರಣದಿಂದಲೂ ತಪ್ಪಿಸಿಕೊಳ್ಳಬಾರದು ಎಂದು ನಾನು ಕಳಕಳಿಯಿಂದ ಸೆರಗೊಡ್ಡಿ ಬೇಡಿ ಕೊಳ್ಳುತ್ತೇನೆ ಎಂದು ನುಡಿದು ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘ ಮಹಿಳಾ ವಿಭಾಗದ ಹಿರಿಯರಾದ ವಿನೋದಾ ಸುಧಾಕರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಜಯಶ್ರೀ ಜಿನ ರಾಜ್‌ ಪೂಜಾರಿ, ತುಳು ಸಂಘ ಬರೋಡಾ ಮಹಿಳಾ ವಿಭಾಗದ ಅಧ್ಯಕ್ಷೆ ಶರ್ಮಿಳಾ ಮಹಾ ವೀರ್‌ ಜೈನ್‌ ಮತ್ತು ಕಾರ್ಯದರ್ಶಿ ಮಂಜುಳಾ ಗೌಡ ಇವರು ಉಪಸ್ಥಿತರಿದ್ದರು.

ಆರಂಭದಲ್ಲಿ ಅತಿಥಿ-ಗಣ್ಯರನ್ನು ಚೆಂಡೆ- ಮದ್ದಳೆ, ಕೊಂಬು-ವಾದ್ಯಗಳೊಂದಿಗೆ ಸಾಂಪ್ರದಾಯಿಕರಾಗಿ ಸ್ವಾಗತಿಸಿ ವೇದಿಕೆಗೆ ಆಹ್ವಾನಿಸಲಾಯಿತು. ಇದೇ ಸಂದರ್ಭದಲ್ಲಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಇವರ ಮಹಾಪ್ರಬಂಧ ಮುಂಬಯಿ ಕನ್ನಡಿಗರ ಸಿದ್ಧಿ-ಸಾಧನೆಗಳು ಕೃತಿಯನ್ನು ತುಳು ಸಂಘದ ಮಾಜಿ ಅಧ್ಯಕ್ಷೆ ಕುಸುಮಾ ಜಯರಾಮ ಶೆಟ್ಟಿ ಇವರು ಬಿಡು ಗಡೆಗೊಳಿಸಿ ಶುಭಹಾರೈಸಿದರು.

ಹಿರಿಯ ಲೇಖಕರಾದ ಎಸ್ಕೆ ಹಳೆಯಂಗಡಿ ಇವರು ಕೃತಿಯನ್ನು ಪರಿಚಯಿಸಿ ಮಾತನಾಡಿ, ಇದೊಂದು ಮುಂಬಯಿ ಕನ್ನಡಿಗರ ಎನ್‌ಸೈಕ್ಲೋ ಪಿಡಿಯಾ ಇದ್ದಂತೆ. ಇದನ್ನು ಅವಸರದಿಂದ ವಿಶ್ಲೇಷಿಸುವುದು ಲೇಖಕರಿಗೆ ದ್ರೋಹ ಬಗೆದಂತೆ. ನಮ್ಮ ಪೂರ್ವಜರು ಹೆಣ್ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡದೆ ದೊಡ್ಡ ಅನ್ಯಾಯವೆಸಗಿದ್ದಾರೆ. ಅಂದಿನಿಂದಲೇ ಅವರಿಗೆ ಸೂಕ್ತ ಶಿಕ್ಷಣ ನೀಡು ತ್ತಿದ್ದರೆ, ನಮ್ಮ ದೇಶದ ಭವಿಷ್ಯವೇ ಬದಲಾಗುತ್ತಿತ್ತು ಎಂದರು.

ಹಿರಿಯರಾದ ಎಸ್‌. ಜಯರಾಮ ಶೆಟ್ಟಿ, ಕಸ್ತೂರಿ ಶೆಟ್ಟಿ ಮೊದಲಾದವರು ಸಂದಭೋìಚಿತವಾಗಿ ಮಾತನಾಡಿ ಶುಭಹಾರೈಸಿದರು. ಶರ್ಮಿಳಾ ಜೈನ್‌ ಸ್ವಾಗತಿಸಿದರು. ಶಕುಂತಳಾ ಶೆಟ್ಟಿ ಇವರು ಅತಿಥಿಗಳನ್ನು ಪರಿಚಯಿಸಿದರು. 

ಮಂಜುಳಾ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಸವಿತಾ ಸೋಮನಾಥ್‌ ಪೂಜಾರಿ ವಂದಿಸಿದರು. ಕೊನೆಯಲ್ಲಿ ಮಹಾಪ್ರಸಾದ ವಿತರಣೆ ನಡೆಯಿತು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು-ಸದಸ್ಯೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.