ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯ: ಬಸವ ಜಯಂತಿ ಆಚರಣೆ


Team Udayavani, Apr 22, 2018, 5:01 PM IST

25563.jpg

ಮುಂಬಯಿ: ಬಸವಣ್ಣ ಹನ್ನೆರಡನೆಯ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದವರು. ಜನರಲ್ಲಿ ಮನೆಮಾಡಿದ್ದ ಅಂಧಶ್ರದ್ಧೆ, ಮೌಡ್ಯತೆ, ಕಂದಾಚಾರ, ಜಾತೀಯತೆಗಳನ್ನು ತೊಡೆದು ಹಾಕುವಲ್ಲಿ ತಮ್ಮ ವಚನದ ಮೂಲಕ ಜನ ಜಾಗೃತಿಯನ್ನು ಉಂಟು ಮಾಡಿದ ಮಹಾನ್‌ ದಾರ್ಶನಿಕ ಬಸವಣ್ಣ. ಬಸವಣ್ಣ ಅವರ  ವಚನಗಳನ್ನು ಎ. ಕೆ. ರಾಮಾನುಜನ್‌, ಇ. ಪಿ. ರೈಸ್‌ ಮೊದಲಾದವರು ಅನುವಾದ ಮಾಡಿದ್ದಾರೆ. ಬಸವಣ್ಣನ ಕುರಿತು ಅಧ್ಯಯನ ಮಾಡಲು ಹರಿಹರನ ರಗಳೆ ಒಂದು ಉತ್ತಮ ಚಾರಿತ್ರಿಕ ಆಕರ. ಬಸವಣ್ಣನವರ ಕುರಿತು ಬೇಂದ್ರೆ, ಶಿವಪ್ರಕಾಶ್‌, ಲಂಕೇಶ್‌, ಗಿರೀಶ್‌ ಕಾರ್ನಾಡ್‌ ಮೊದಲಾದವರು ರಚಿಸಿದ ನಾಟಕಗಳನ್ನು ತೌಲನಿಕವಾಗಿ ಅಧ್ಯಯನ ಮಾಡುವುದರಿಂದ ಅನೇಕ ಹೊಸ ಸಂಗತಿಗಳನ್ನು ತಿಳಿದುಕೊಳ್ಳಲು ಸಾಧ್ಯವಿದೆ. ವಚನ ಪರಂಪರೆಗೆ ಹೊಸ ಆಯಾಮ ನೀಡಿದ ಶ್ರೇಯಸ್ಸು ಬಸವಣ್ಣನದ್ದು. ಅವರಿಂದು ಜಾಗತಿಕವಾಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಕನ್ನಡದಲ್ಲಿ ಇಂದಿಗೂ ವಚನ ಪರಂಪರೆ ಮುಂದುವರಿದುಕೊಂಡು ಬಂದಿದೆ. ಶರಣ ಪರಂಪರೆಯಿಂದ ಪ್ರೇರಣೆ ಪಡೆದು ತಾವು ಸಾವಿರಾರು ವಚನಗಳನ್ನು ರಚಿಸಿದ್ದಾರೆ ಎಂದು ಕನ್ನಡ ವಿಭಾಗದ ಸಂದರ್ಶಕ ಪ್ರಾಧ್ಯಾಪಕರಾದ ಡಾ| ಜೀವಿ ಕುಲಕರ್ಣಿ ಅವರು ವಿವರಿಸಿದರು.

ಕನ್ನಡ ವಿಭಾಗ  ಮುಂಬಯಿ ವಿಶ್ವವಿದ್ಯಾಲಯ ಎ. 18 ರಂದು ವಿಭಾಗದ ರಾನಡೆ ಭವನದಲ್ಲಿರುವ ವಿಭಾಗದ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಂಗ ಕಲಾವಿದ, ಖ್ಯಾತ ಛಾಯಾಚಿತ್ರಕಾರ ಪಿ. ಆರ್‌. ರವಿ ಶಂಕರ್‌ ಅವರು ಮಾತನಾಡಿ, ಜೀವನದಲ್ಲಿ ಅನುಭವವೇ ಪಾಠವನ್ನು ಕಲಿಸುತ್ತದೆ. ಬರೆಯುವಾಗ ಅಥವಾ ರಂಗಭೂಮಿಯಲ್ಲಿ ಅಭಿನಯಿಸುವಾಗ ಅನುಭವಿಸಬೇಕು. ಆಗ ಬರಹವಾಗಲೀ, ಪಾತ್ರವಾಗಲೀ ಅದು ನೈಜರೂಪವನ್ನು ತಾಳುತ್ತದೆ. ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ತಲ್ಲೀನತೆ  ಹಾಗೂ ತಾಧ್ಯಾತ್ಮ ಭಾವನೆ ಅಗತ್ಯ. ರಂಗಭೂಮಿಯಲ್ಲಿ ಅಭಿನಯಿಸುವಾಗ ಸ್ಥಳೀಯ ಭಾಷೆಯ ಸೊಗಡಿರಬೇಕು. ರಂಗಭೂಮಿಯಲ್ಲಿ ಪ್ರಯೋಗಗಳನ್ನು  ಮಾಡಲು ವಿಪುಲ ಅವಕಾಶಗಳಿವೆ ಎಂದು ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರನ್ನು ವಿಭಾಗದ ಪರವಾಗಿ ಶಾಲು ಹೊದೆಸಿ, ಗ್ರಂಥ ಗೌರವದೊಂದಿಗೆ ಗೌರವಿಸಲಾಯಿತು.

ಬಸವಣ್ಣ ಜಗತ್ತು ಕಂಡ ಅಪರೂಪದ ಮಹಾ ಮಾನವತಾವಾದಿ, ದಾರ್ಶನಿಕ. ಜಾತ್ಯತೀತ ನಿಲುವನ್ನು ಮೈಗೂಡಿಸಿಕೊಂಡ ಬಸವಣ್ಣ ತಮ್ಮ ಸಾಧನೆಗಳಿಂದ ದೈವತ್ವಕ್ಕೇರಿದವನ್ನು. ಬದುಕು ಸಹ್ಯವಾಗಬೇಕು. ಎಲ್ಲೆಡೆ ಸಮಾನತೆ ನೆಲೆಸಬೇಕು ಎಂಬ ನಿಟ್ಟಿನಲ್ಲಿ ಹೋರಾಡಿದ ಬಸವಣ್ಣ ಯುಗಪುರುಷನೂ ಹೌದು. ಮಾತು-ಕೃತಿಗಳ ನಡುವೆ ಎರಡಿಲ್ಲದ ಬಾಳ್ವೆಗೆ ಆತ ಆದರ್ಶ ಪುರುಷ. ವರ್ತಮಾನಕ್ಕೆ ಯಾವತ್ತೂ ಸಲ್ಲುವ ಬಸವಣ್ಣನವರ ಉಪದೇಶವನ್ನು ನಾವು ಮೈಗೂಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ ಅವರು ಅತಿಥಿಗಳನ್ನು ಸ್ವಾಗತಿಸಿ ಬಸವ ಜಯಂತಿಯ ಹಿನ್ನೆಲೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಬಿಡುಗಡೆಗೊಂಡ ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರ ಮಹಾಪ್ರಬಂಧ ಮುಂಬಯಿ ಕನ್ನಡಿಗರ ಸಿದ್ಧಿ-ಸಾಧನೆಗಳು  ಕಾರ್ಯಕ್ರಮದ ನಡಾವಳಿಯ ಡಿವಿಡಿಯನ್ನು ಖ್ಯಾತ ಛಾಯಾಚಿತ್ರಕಾರ, ಕಲಾವಿದ, ಸಂಘಟಕ ರವಿಶಂಕರ್‌ ಅವರು ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಹೊಸ ಓದು ಮಾಲಿಕೆಯಲ್ಲಿ ವಿಭಾಗದ ವಿದ್ಯಾರ್ಥಿಗಳಾದ ಉದಯ ಶೆಟ್ಟಿ ಇವರು ತೇಜಸ್ವಿ ಅವರ ಕರ್ವಾಲೋ, ಸುರೇಖಾ ಶೆಟ್ಟಿ ಇವರು ಕ್ರಿಯಾಶೀಲ ಪತ್ರಕರ್ತ ಶ್ರೀನಿವಾಸ ಜೋಕಟ್ಟೆ, ಸುಧೀರ ದೇವಾಡಿಗ ಅವರು  ಗೋಪಾಲ ತ್ರಾಸಿ ಅವರ ಕಥಾ ಸಂಕಲನ, ದಿನಕರ ನಂದಿ ಚಂದನ್‌ ಇವರು ಎಂ. ಕೆ. ಇಂದಿರಾ ಅವರ ತುಂಗ-ಭದ್ರ ಕಾದಂಬರಿ, ನಳಿನಾ ಪ್ರಸಾದ್‌ ಇವರು ಪ್ರಬಂಧ ಸಂಗ್ರಹ,  ಜ್ಯೋತಿ ಶೆಟ್ಟಿ ಇವರು ಕುರ್ಕಾಲ್‌ ಅವರ ಕಾವ್ಯ; ಸಹೃದಯ ಸ್ಪಂದನ ಕೃತಿಗಳ ಕುರಿತು ಪ್ರಬಂಧ ಮಂಡಿಸಿದರು.

ವಿಭಾಗದ ಸಂಶೋಧನ ಸಹಯಕರಾದ ಮಧುಸೂದನ್‌ ವೈ. ವಿ., ಶಿವರಾಜ್‌ ಎಂ.ಜಿ., ಕುಮುದಾ ಆಳ್ವ, ವಿದ್ಯಾರ್ಥಿಗಳಾದ ಪಾಲನ್‌, ಗಣಪತಿ ಮೊಗವೀರ ಮೊದಲಾದವರು ಸಂವಾದದಲ್ಲಿ ಪಾಲ್ಗೊಂಡರು.  ವಿಭಾಗದ ಸಹಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.