ಡೊಂಬಿವಲಿ ಶ್ರೀ ಬಸವ ಸೇವಾ ಮಂಡಳ: ಬಸವೇಶ್ವರ ಜಯಂತಿ 


Team Udayavani, Apr 24, 2018, 2:08 PM IST

2204mum03.jpg

ಡೊಂಬಿವಲಿ: ವೀರಶೈವ ಹಾಗೂ ಲಿಂಗಾಯತರು ಧರ್ಮದ ವಿಷಯದಲ್ಲಿ ಕಾದಾಡದೆ ಪರಸ್ಪರ ಒಗ್ಗಟ್ಟಿನಿಂದ ಮುನ್ನಡೆದು ಇಷ್ಟಲಿಂಗದ ಉಪಾಸನೆ ಮಾಡುವುದರಿಂದ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಸತಾರಾ ಶ್ರೀಕ್ಷೇತ್ರವಾಮಿ ಮಠದ ಶ್ರೀ ಮಹಾದೇವ ಶಿವಾಚಾರ್ಯ ಮಹಾರಾಜರು ಅವರು  ನುಡಿದರು.

ಎ. 21 ರಂದು ಸಂಜೆ ಡೊಂಬಿವಲಿ ಪೂರ್ವದ ಸರ್ವೇಶ ಸಭಾಗೃಹದಲ್ಲಿ ಡೊಂಬಿ ವಲಿಯ ಶ್ರೀ ಬಸವ ಸೇವಾ ಮಂಡಳದ ವತಿಯಿಂದ ನಡೆದ ಜಗಜ್ಯೋತಿ ಶ್ರೀ ಬಸವೇಶ್ವರ 886 ನೇ ಜಯಂತಿ ಉತ್ಸವದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಇಂದು ಆಧ್ಯಾತ್ಮಿಕತೆಯ ಬೇರುಗಳು ಸಡಿಲಗೊಂಡಿವೆ. ನಮ್ಮ ಅಂತ:ಕರಣ ಮಲೀನವಾಗಿವೆ. ನಾವು ಜಾತಿಯಿಂದ ಲಿಂಗಾಯಿತರಾಗಿರದೆ ಸಂಸ್ಕಾರದಿಂದ ಲಿಂಗಾಯತರಾಗಬೇಕು. ಜಾತೀಯತೆಯ ಲಿಂಗಾಯತ ಧರ್ಮಕ್ಕಿಂತ ಬಸವ ತತ್ವಗಳ ಆಧಾರಿತ ದೃಷ್ಟಿಯಲ್ಲಿ ದೇಹವೇ ದೇಗುಲವಾಗಿದ್ದು, ಅದರಲ್ಲಿ ನಾವು ಆ ಪರಮಾತ್ಮನನ್ನು ಪ್ರತಿಷ್ಠಾಪಿಸಬೇಕಾಗಿದೆ. ಸಕಲ ಮಾನವ ಕುಲಕ್ಕೆ ಲೇಸನ್ನೆ ಬಯಸುವ ಬಸವ ತತ್ವಗಳು ಎಂದೆಂದಿಗೂ ಪ್ರಸ್ತುತವಾಗಿವೆ. ಡೊಂಬಿವಲಿಯ ಶ್ರೀ ಬಸವ ಸೇವಾ ಮಂಡಳದ ಕಾರ್ಯವೈಖರಿ ಅಭಿನಂದನೀಯವಾಗಿದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಿಶ್ವ ಲಿಂಗಾಯತ ಸಮಿತಿಯ ಕಾರ್ಯಾಧ್ಯಕ್ಷ ಡಾ| ಶಶಿಕಾಂತ್‌ ಪಟ್ಟಣ ಅವರು ಮಾತನಾಡಿ, 12 ನೇ ಶತಮಾನದಲ್ಲಿ ಸಮಾನತೆಗಾಗಿ ಬಹುದೊಡ್ಡ ಕ್ರಾಂತಿಯನ್ನೇ ಮಾಡಿದ ಹೆಗ್ಗಳಿಕೆ ಜಗಜ್ಯೋತಿ ಬಸವೇಶ್ವರರದ್ದಾಗಿದೆ. ಡಾ| ಬಾಬಾ ಸಾಹೇಬ ಅಂಬೇಡ್ಕರ್‌ ಅವರು ಸಂವಿಧಾನದ ಶಿಲ್ಪಿಯಾದರೆ, ಬಸವೇಶ್ವರರು ಸಂವಿ ಧಾನದ ಜನಕರಾಗಿದ್ದಾರೆ. ಕಾರ್ಲ್ ಮಾರ್ಕ್ಸ್

ನಂತವರು ಸಮಾನತೆಯಲ್ಲಿ ಒಂದು ಹೆಜ್ಜೆ ಮುಂದಿದ್ದ ಬಸವೇಶ್ವರರ ಕಾಯಕಕ್ಕೆ ಪಾವಿತ್ರÂತೆ ನೀಡಿದರಲ್ಲದೆ ಮಹಿಳೆಯರಿಗೆ ಸಮಾನತೆಯನ್ನು ದೊರಕಿಸಿಕೊಡಲು ಪ್ರಯತ್ನಿಸಿದರು. ನಮ್ಮ ದೃಷ್ಟಿಯಲ್ಲಿ ಬಸವೇಶ್ವರರೇ ಜಗದ್ಗುರು. ಜನ ಸಾಮಾನ್ಯರಿಗೂ ಮೂಲಭೂತ ಅರ್ಥವನ್ನು ಒದಗಿಸಿಕೊಟ್ಟ ಮಹಾನ್‌ ಸಾಧಕ ಬಸವಣ್ಣನವರಾಗಿದ್ದಾರೆ ಎಂದು ನುಡಿದು, ವಿಶ್ವಗುರು ಬಸವೇಶ್ವರರ ವಚನಗಳ ಬಗ್ಗೆ ವಿವರಿಸಿದರು.

ಇನ್ನೋರ್ವ ಅತಿಥಿ ಮಂಜುನಾಥ ವಿದ್ಯಾ ಲಯ ಡೊಂಬಿವಲಿ ಇದರ ಪ್ರಾಂಶುಪಾಲ ಡಾ| ವಿ. ಎಸ್‌. ಅಡಿಗಲ್‌ ಅವರು ಮಾತನಾಡಿ, ಶ್ರೀ ಬಸವೇಶ್ವರರು ಜನಸಾಮಾನ್ಯರಿಗೂ ತಿಳಿಯು ವಂತಹ ವಚನಗಳನ್ನು ರಚಿಸಿದ್ದು, 23 ಕ್ಕಿಂತಲೂ ಹೆಚ್ಚು ಭಾಷೆಗಳಲ್ಲಿ ಅನುವಾದಿತ ಗೊಂಡಿವೆ. ಇಡೀ ವಿಶ್ವವೇ ಮೆಚ್ಚಿದ ಈ ವಿಶ್ವಗುರುವಿನ ತತ್ವಗಳನ್ನು ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಳ್ಳಲು ಸಾಧ್ಯ ವಾಗಿಲ್ಲ. ಮೂಡನಂಬಿಕೆಯ ವಿರುದ್ಧ ಹಾಗೂ ಮಹಿಳಾ ಸಬಲಿಕರಣಕ್ಕಾಗಿ ಹೋರಾಡಿದ ವ್ಯಕ್ತಿ ಬಸವೇಶ್ವರರಾಗಿದ್ದು, ಅವರ ಹೆಸರು ಹಾಗೂ ತತ್ವಗಳನ್ನು ಜಯಘೋಷವಾಗಿ ಮೀಸಲಿಡದೆ ಜನಮನಗಳನ್ನು ಮುಟ್ಟಿಸುವಂತೆ ನಾವೆಲ್ಲರು ಪ್ರಯತ್ನಿಸಬೇಕು. ಡೊಂಬಿವಲಿಯ ಶ್ರೀ  ಬಸವ ಸೇವಾ ಮಂಡಳದ ಕಾರ್ಯ ನಿಜವಾಗಿಯೂ ಅನುಕರಣೀಯವಾಗಿದೆ ಎಂದರು.

ವಚನ ಸಾಹಿತ್ಯದ ಅಭ್ಯಾಸಕ ಬಸವರಾಜ ಪೂಜಾರಿ ಅವರು ಕನ್ನಡ ವಚನ ಸಾಹಿತ್ಯಕ್ಕೆ  ಹರ್ಡಿಕರ ಮಂಜಪ್ಪ ಮತ್ತು ಫ. ಗು. ಹಳಕಟ್ಟಿ ಅವರ ಕೊಡುಗೆಗಳನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಸಮಾಜದ ಹಿರಿಯ ನಾಗರಿಕರು ಹಾಗೂ ಪ್ರತಿಭಾವಂತ ಮಕ್ಕಳನ್ನು ಅಭಿನಂದಿಸಿ ಗೌರವಿಸಲಾಯಿತು.

75 ನೇ ಹುಟ್ಟುಹಬ್ಬ ಮತ್ತು ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಅಚರಿಸಿದ ಶ್ರೀ ಬಸವ ಸೇವಾ ಮಂಡಳ ಡೊಂಬಿವಲಿ ಇದರ ಅಧ್ಯಕ್ಷ, ಉದ್ಯಮಿ ಆರ್‌. ಬಿ. ಹೆಬ್ಬಳ್ಳಿ ದಂಪತಿಯನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಆರ್‌. ಬಿ. ಹೆಬ್ಬಳ್ಳಿ ಇವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಕಾರ್ಯದರ್ಶಿ ರಮೇಶ್‌ ನ್ಹಾವಕರ ಕಾರ್ಯಕ್ರಮ ನಿರೂಪಿಸಿದರು. ಮಲ್ಲಪ್ಪಾ ಬಿರಾದಾರ ವಂದಿಸಿದರು. ಕಾರ್ಯಾಧ್ಯಕ್ಷ ಬಸವಲಿಂಗಪ್ಪ ಸೊಡ್ಡಗಿ ಸಂಸ್ಥೆ ನಡೆದು ಬಂದ ಬಗೆಯನ್ನು ವಿವರಿಸಿದರು. ನೂರಾರು ಬಸವ ಅನುಯಾಯಿಗಳು, ಭಕ್ತರು ಉಪಸ್ಥಿತರಿದ್ದರು. 

ಚಿತ್ರ-ವರದಿ : ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.