ಮುಂಬಯಿ ವಿವಿ ಕನ್ನಡ ವಿಭಾಗ: ಕವಿ ಸಮಯ
Team Udayavani, May 5, 2018, 3:35 PM IST
ಮುಂಬಯಿ: ವಿಶ್ವ ಪುಸ್ತಕ ದಿನದ ಶುಭಾವಸರದಲ್ಲಿ ಸಾಂತಾಕ್ರೂಜ್ ಪೂರ್ವದ ಕಲೀನಾ ಕ್ಯಾಂಪಸ್ನ ವಿದ್ಯಾನಗರಿ ಮುಂಬಯಿ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಕವಿ ಸಮಯ ಕಾರ್ಯಕ್ರಮವು ಜರಗಿತು.
ಮುಂಬಯಿ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್. ಉಪಾಧ್ಯ ಅವರು ಮಾತನಾಡುತ್ತ, ಕನ್ನಡ ಸಾಹಿತ್ಯಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡ ಸಾಹಿತ್ಯವು ಬಹು ಶ್ರೀಮಂತಿಕೆಯಿಂದ ಕೂಡಿದೆ. ಕಥೆ, ಕಾವ್ಯ, ನಾಟಕ, ಕಾದಂಬರಿ, ವಿಮರ್ಶೆ ಸಂಶೋಧನೆ ಇತ್ಯಾದಿ ಸಾಹಿತ್ಯ ಪ್ರಕಾರಗಳಿಂದ ಸಾಹಿತ್ಯಕ್ಕೆ ಕನ್ನಡದ ಹಿರಿ-ಕಿರಿಯ ಬರಹಗಾರರು ಶಕ್ತಿ ತುಂಬಿದ್ದಾರೆ. ಕಾವ್ಯ ಕಾಮನ ಬಿಲ್ಲು ಇದ್ದ ಹಾಗೆ. ಅದೊಂದು ಮಿಂಚು ಇದ್ದಂತೆ. ಓದುಗನ ಅಂತರಂಗವನ್ನು ಕೆದಕುವ ಕಾವ್ಯವೇ ನಿಜವಾದ ಕಾವ್ಯವಾಗಬಲ್ಲದು. ಇತ್ತೀಚೆಗೆ ನಾವೆಲ್ಲ ತುಂಬ ಮಾತನಾಡುತ್ತೇವೆ. ಬರೆಯುವುದು ಮಾತ್ರ ಕಡಿಮೆ. ಬರವಣಿಗೆ ಎಚ್ಚರಿಕೆಯಿಂದ ಆಗುವಂತಹದು. ಸತತ ಓದು, ಪರಿಶ್ರಮ ಇದ್ದರೆ ಲೇಖಕನು ಸುಲಭವಾಗಿ ಸಾಹಿತ್ಯ ರಚನೆ ಮಾಡಲು ಸಾಧ್ಯ. ಮುಂಬಯಿ ಯುವ ಬರಹಗಾರರಿಗೆ ಚಿತ್ತಾಲ, ಬಲ್ಲಾಳ, ಜಯಂತ ಕಾಯ್ಕಿಣಿ ಮೊದಲಾದ ಹಿರಿಯ ಲೇಖಕರು ಮಾದರಿಯಾಗಿದ್ದಾರೆ. ಬೇರೆ ಸಾಹಿತಿಗಳ ಕೃತಿಗಳನ್ನು ಓದದೆ ಕೃತಿ ರಚನೆ ಸಾಧ್ಯವಾಗದು ಎಂದು ತಿಳಿಸಿದರು.
ದಾಕ್ಷಾಯಣಿ ಯಡವಳ್ಳಿ ಅವರು ಜಾನಪದ ಹಾಡುಗಳನ್ನು ಹಾಡಿದರು. ಶಾರದಾ ಅಂಬೆಸಂಗ ಅವರು ಸ್ವರಚಿತ ಕವಿತೆಗಳನ್ನು ವಾಚಿಸಿದರು. ಅಮೃತಾ ಶೆಟ್ಟಿ, ಲಕ್ಷಿ¾à ಹೆರೂರ, ಜಯಕರ ಪಾಲನ್, ಶೈಲಜಾ ಹೆಗಡೆ, ಉದಯ ಶೆಟ್ಟಿ, ರಮಾ ಉಡುಪ, ಜಯಾ ಸಾಲಿಯಾನ್, ಮಧುಸೂದನ್ ರಾವ್, ಸುರೇಖಾ ದೇವಾಡಿಗ, ಶಿವರಾಜ ಎಂ.ಜಿ., ದಿನಕರ ಚಂದನ್, ಕುಮುದಾ ಆಳ್ವ ಉಪಸ್ಥಿತರಿದ್ದರು. ಡಾ| ಪೂರ್ಣಿಮಾ ಎಸ್.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದುರ್ಗಪ್ಪ ಕೋಟಿಯವರ್ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ