ಘಾಟ್ಕೋಪರ್‌  ಶ್ರೀ ಗೀತಾಂಬಿಕಾ ಮಂದಿರ ಜೂ.14ರಂದು ಪ್ರತಿಷ್ಠಾ ವರ್ಧಂತಿ


Team Udayavani, Jun 12, 2018, 3:38 PM IST

54455.jpg

ಮುಂಬಯಿ:ಘಾಟ್ಕೋಪರ್‌ ಪಶ್ಚಿಮದ ಅಸಲ್ಫಾದ ನಾರಿ ಸೇವಾ ಸದನ್‌ ರಸ್ತೆಯಲ್ಲಿರುವ ಶ್ರೀ ಗೀತಾಂಬಿಕಾ ಸೇವಾ ಸಮಿತಿಯ ಸಂಚಾಲಕತ್ವದ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಫಾದ ಶ್ರೀ ಗೀತಾಂಬಿಕಾ ದೇವಿ-ಪರಿವಾರದ ದೇವತೆಗಳ 20ನೇ ಪ್ರತಿಷ್ಠಾ ವರ್ಧಂತಿ ಉತ್ಸವವು ಜೂ. 14 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ಜರಗಲಿದೆ.

ವೇದಮೂರ್ತಿ ಶ್ರೀ  ಶಂಕರನಾರಾ ಯಣ ತಂತ್ರಿ ಡೊಂಬಿವಲಿ ಇವರ ನೇತೃತ್ವದಲ್ಲಿ ಉತ್ಸವವು ಜರಗಲಿದ್ದು, ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ  8ರಿಂದ  ಸಾಮೂಹಿಕ ಪ್ರಾರ್ಥನೆ, ಅದ್ಯ ಗಣಯಾಗ,  ತೋರಣ ಮುಹೂರ್ತ, ಪೂರ್ವಾಹ್ನ 9.30ರಿಂದ ಪರಿವಾರ ದೇವತೆಗಳ ನವಕ ಕಲಶ ಹಾಗೂ  ದೇವಿಗೆ 25 ಕಲಶದ ಕಲಶಪೂರಣ, ಪಂಚಾ ಮೃತ ಅಭಿಷೇಕ, ಪರಿವಾರ ದೇವತೆಗಳ ಅಭಿಷೇಕ,  ದೇವಿಗೆ ಪ್ರಧಾನ ಹೋಮ, ಪಧಾನ ಕಲಶಾ ಭಿಷೇಕ, ಮಧ್ಯಾಹ್ನ 12ರಿಂದ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 5ರಿಂದ ಭಜನೆ, ರಾತ್ರಿ 7.30ರಿಂದ ದೇವಿ ದರ್ಶನ, ರಾತ್ರಿ 8 ರಿಂದ ರಂಗಪೂಜೆ ನಂತರ ಉತ್ಸವ ಬಲಿ, ರಾತ್ರಿ 10.30ರಿಂದ  ಪ್ರಸಾದ ವಿತರಣೆ, ರಾತ್ರಿ 11ರಿಂದ ಗಂಗಾಧರ ಎಸ್‌. ಪಯ್ಯಡೆ ಅವರ ಪ್ರಾಯೋ ಜಕತ್ವದಲ್ಲಿ ದಿ| ರಮಾನಾಥ ಪಯ್ಯಡೆ ಸ್ಮರಣಾರ್ಥ “ಇಂದ್ರಜಿತು ಕಾಳಗ’ ಶ್ರೀ ಗೀತಾಂಬಿಕಾ ಯಕ್ಷಗಾನ  ಕಲಾ ಮಂಡಳಿಯ ಕಲಾವಿದರಿಂದ ಯಕ್ಷ ಗಾನ ಬಯಲಾಟ ಪ್ರದರ್ಶನ ಗೊಳ್ಳಲಿದೆ. ಜೂ. 15ರಂದು  ಬೆಳಗ್ಗೆ  ಸಂಪ್ರೋಕ್ಷಣೆ ಮತ್ತು ಮಹಾ ಮಂಗ ಳಾರತಿ ನೆರವೇರಲಿದೆ.

ಶ್ರೀ ಗೀತಾಂಬಿಕಾ ದೇವಿಯ ಹಾಗೂ ಪರಿವಾರ ದೇವತೆಗಳ ಪ್ರತಿಷ್ಠಾ ವರ್ಧಂತಿ ಉತ್ಸವದಲ್ಲಿ ಭಕ್ತರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಶ್ರೀ  ಗೀತಾಂಬಿಕಾ ಸೇವಾ ಸಮಿತಿಯ ಪರ ವಾಗಿ ಅಧ್ಯಕ್ಷ ಕಡಂದಲೆ  ಸುರೇಶ್‌ ಭಂಡಾರಿ,  ಗೌರವಾಧ್ಯಕ್ಷ  ಮುದ್ರಾಡಿ ದಿವಾಕರ ಶೆಟ್ಟಿ, ಗೌರವ  ಪ್ರಧಾನ  ಕಾರ್ಯದರ್ಶಿ ಧರ್ಮಪಾಲ್‌ ಕೋಟ್ಯಾನ್‌, ಕೋಶಾಧಿಕಾರಿ ವಿಕ್ರಮ ಸುವರ್ಣ ಮತ್ತಿತರ ಪದಾಧಿ ಕಾರಿಗಳು, ಸದಸ್ಯರು ತಿಳಿಸಿದ್ದಾರೆ.

ಕಾರಣಿಕ ಕ್ಷೇತ್ರವಾಗಿ ಪ್ರಸಿದ್ಧಿ 
ಕಾರಣಿಕ ಕ್ಷೇತ್ರ ಎಂದೇ ಬಿಂಬಿತ ಗೊಂಡಿರುವ ಶ್ರೀ  ಗೀತಾಂಬಿಕೆಯ ಸಾನ್ನಿಧ್ಯದಲ್ಲಿ ಪ್ರತಿದಿನ ತ್ರಿಕಾಲ ಪೂಜೆ ಬ್ರಾಹ್ಮಣೋತ್ತರಿಂದ ನಡೆದು ಬಂದಿದೆ. ಪ್ರತಿ ಶುಕ್ರವಾರ ಸಂಜೆ ಭಜನೆ, ಮಹಾ ಪೂಜೆ, ಹೂವಿನ ಪೂಜೆ ಹಾಗೂ ದೇವಿ ದರ್ಶನ ನಡೆಯುತ್ತಿದೆ. ಮಂಗಳ ವಾರ  ನಾಗ ದೇವರಿಗೆ ತನು ತಂಬಿಲ ಪೂಜೆ ಬೆಳಗ್ಗಿನ ಸಮಯದಲ್ಲಿ ನೆರವೇರುತ್ತಿದೆ. ಭಕ್ತಾದಿಗಳ ಅನುಕೂ ಲತೆ ಪ್ರಕಾರ ದೇವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಮಹಾ ಪೂಜೆ, ನವಗ್ರಹ ಶಾಂತಿ ಹಾಗೂ ಇತರ ಪೂಜೆಗಳು ನಡೆಯುತ್ತಿದೆ. ವಿಶೇಷ ವಾಗಿ ಬ್ರಹ್ಮಕಲಶೊತ್ಸವದ ವರ್ಷಾವಧಿ ಪೂಜೆ, ನಾಗರ ಪಂಚಮಿಯಂದು ಮುಂಜಾನೆ ನಾಗಪೂಜೆ ಹಾಗೂ ಸಂಧ್ಯಾಕಾಲದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಗಣೇಶೋತ್ಸವ, ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಸರಾ ಮಹೋತ್ಸವದ ಅಂಗವಾಗಿ ವಾರ್ಷಿಕ ಪೂಜೆಯನ್ನು ಆಚರಿಸಲಾಗುತ್ತಿದೆ. 1965ರಲ್ಲಿ ಮಂದಿರದಲ್ಲಿ ಮೂಳೂರು ಸಂಜೀವ ಕಾಂಚನ ಹಾಗೂ ಇತರರ ಸಹಕಾರದಿಂದ ಶ್ರೀ  ಗೀತಾಂಬಿಕಾ ಯಕ್ಷಗಾನ ಮಂಡಳಿ ಮಂದಿರದ ಇನ್ನೊಂದು ಅಂಗವಾಗಿ ಸ್ಥಾಪನೆಗೊಂಡಿದೆ ಮಂಡ ಳಿಯು ಮುಂಬಯಿಯ ಹಲವು ಭಾಗಗಳಲ್ಲಿ ಯಕ್ಷಗಾನ ಪ್ರದರ್ಶಿಸಿ ಶ್ರೀ ಗೀತಾಂಬಿಕಾ ಮಂದಿರದ ಹೆಸರು ಎಲ್ಲಾ ಕಡೆ ಪಸರಿಸುವಲ್ಲಿ ಮಾದರಿ ಯಾಗಿದೆ.

ಕಾರ್ಯಕಾರಿ ಸಮಿತಿ 
ಸದ್ಯ ಮಂದಿರದ ಅಧ್ಯಕ್ಷ ಸ್ಥಾನವನ್ನು ಊರಿನ ಹಾಗೂ ಮುಂಬಯಿಯ ಚಿರಪರಿಚಿತ ಕಡಂದಲೆ ಸುರೇಶ್‌ ಭಂಡಾರಿ ಅಲಂಕರಿಸಿದರೆ, ದಿವ್ಯ ಸಾಗರ್‌ ಸಮೂಹದ  ನಿರ್ದೇಶಕ ಮುದ್ರಾಡಿ ದಿವಾಕರ್‌ ಶೆಟ್ಟಿ ಅವರು ಗೌರವಾಧ್ಯಕ್ಷರಾಗಿ, ಧರ್ಮಪಾಲ್‌ ಎಸ್‌. ಕೊಟ್ಯಾನ್‌ ಗೌರವ ಪ್ರಧಾನ  ಕಾರ್ಯದರ್ಶಿಯಾಗಿ, ವಿಕ್ರಮ್‌ ಸುವರ್ಣ ಅವರು ಗೌರವ  ಕೋಶಾ ಧಿಕಾರಿಯಾಗಿ, ಸಿಎ ಬಿಪಿನ್‌ ಶೆಟ್ಟಿ ಅವರು ಆಂತರಿಕ ಲೆಕ್ಕಪತ್ರ ಪರಿಶೋಧಕರಾಗಿ, ಸುರೇಶ್‌ ಕೋಟ್ಯಾನ್‌ ಇವರು ಕಾರ್ಯಾಧ್ಯಕ್ಷರಾಗಿ, ಸತೀಶ್‌ ಶೆಟ್ಟಿ ಮತ್ತು ಇರುವೈಲು ದಾಮೋದರ್‌ ಶೆಟ್ಟಿ ಇವರು ಉಪಾಧ್ಯಕ್ಷರುಗಳಾಗಿ,  ಜಯರಾಮ್‌ ರೈ ಇವರು ಉಪ ಗೌರವಾಧ್ಯಕ್ಷರಾಗಿ, ವಿಠಲ್‌ ಶೆಟ್ಟಿ, ಬೆಳುವಾಯಿ ಮತ್ತು  ಸಂಜೀವ ಪೂಜಾರಿ ಇವರು ಉಪ ಕಾರ್ಯಾಧ್ಯಕ್ಷರಾಗಿ ಹಾಗೂ  ನಿತಿನ್‌ ಜಾಧವ್‌ ಇವರು ಜತೆ ಕೋಶಾ ಧಿಕಾರಿಯಾಗಿ ಶ್ರಮಿಸುತ್ತಿ ದ್ದಾರೆ. ಕರ್ಮಾರು ಮೋಹನ್‌ ರೈ, ಪ್ರಕಾಶ್‌ ಶೆಟ್ಟಿ ಸುರತ್ಕಲ್‌, ಕುಕ್ಕುಂದೂರು ಕರುಣಾಕರ ಶೆಟ್ಟಿ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ. ಉದ್ಯಮಿ ಮಾಧವ್‌ ಶೆಟ್ಟಿ  ಆಡಳಿತ ಸಮಿತಿಗೆ ಮಾರ್ಗದರ್ಶಕರಾಗಿ ಸಹಕರಿಸುತ್ತಿದ್ದಾರೆ. 

ಅವ್ಯಾಹತವಾಗಿ ದೈನಂದಿನ ತ್ರಿಕಾಲ ಪೂಜೆಯನ್ನು ಮಂದಿರದ ಪ್ರಧಾನ ಅರ್ಚಕ  ರಘುಪತಿ ಭಟ್‌ ನೆರವೇರಿಸುತ್ತಿದ್ದಾರೆ.

ಮೇಳದ ಉಸ್ತುವಾರಿ 
ಸದ್ಯ ಯಕ್ಷಗಾನ ಮಂಡಳಿಯ ಸ್ಥಾಪಕಾಧ್ಯಕ್ಷರಾಗಿ ಮೂಳೂರು ಸಂಜೀವ ಕಾಂಚನ್‌, ಗೌರವಾಧ್ಯಕ್ಷ ರಾಗಿ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಅಧ್ಯಕ್ಷರಾಗಿ ಕರ್ನೂರು ಮೋಹನ್‌ ರೈ, ಕಾರ್ಯಾಧ್ಯಕ್ಷರಾಗಿ ಇರುವೈಲು  ದಾಮೋದರ  ಶೆಟ್ಟಿ, ಕಾರ್ಯದರ್ಶಿ  ಅಜೆಕಾರು ಬಾಲಕೃಷ್ಣ ಶೆಟ್ಟಿ, ಸಂಚಾ ಲಕರಾಗಿ ಸುನಿಲ್‌ ಅಮೀನ್‌, ವ್ಯವಸ್ಥಾಪಕರಾಗಿ ಪ್ರಭಾಕರ್‌ ಕುಂದರ್‌ ಹಾಗೂ ಗೋವಿಂದ ಸಫಲಿಗ, ಸಲಹೆಗಾರರಾಗಿ ಮಾನಾಡಿ ಸದಾನಂದ ಶೆಟ್ಟಿ ಮತ್ತು ಭೋಜ ಬಂಗೇರ, ಕೆ. ಕೆ. ದೇವಾಡಿಗ ಇವರು ಸಹಕರಿಸುತ್ತಿದ್ದಾರೆ.

ಶಾಶ್ವತ ಪೂಜೆ
ಮಂದಿರದಲ್ಲಿ ಶಾಶ್ವತ ಪೂಜೆಯು ನಡೆಯುತ್ತಿದ್ದು ಆಸಕ್ತಿ ಭಕ್ತಾದಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡರೆ ಆ ಪೂಜೆಯನ್ನು ಅವರು ಹೇಳಿದ ದಿನಾಂಕದಲ್ಲಿ ಮಾಡಲಾಗುತ್ತಿದೆ. ಆಯಾ ದಿನದ ಪೂಜೆಯನ್ನು ಬರೆದವರು ಸಾಯಂಕಾಲ ಅಥವಾ ಬೆಳಗ್ಗೆ ಬಂದು ಪ್ರಸಾದ ಪಡಕೊಳ್ಳಬಹುದು ಅಥವಾ ಬರಲು ಅನನುಕೂಲವಿದ್ದಲ್ಲಿ ಗಂಧ ಪ್ರಸಾದವನ್ನು ಭಕ್ತರ ವಿಳಾಸಕ್ಕೆ ಕಳುಹಿಸ‌ಲಾಗುವುದು ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.

ಚಿತ್ರ/ಮಾಹಿತಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.