ಬಂಟರ ಸಂಘ: ಮುದ್ರಾಡಿ ಮೇಲ್ಮನೆ ಕೃಷ್ಣ  ಶೆಟ್ಟಿ ಅವರಿಗೆ ಶ್ರದ್ಧಾಂಜಲಿ


Team Udayavani, Jun 18, 2018, 3:55 PM IST

1706mum13.jpg

ಮುಂಬಯಿ: ನಗರದ ಹಿರಿಯ ಹೊಟೇಲ್‌ ಉದ್ಯಮಿ, ಮಾಜಿ ನಗರ ಸೇವಕ ಮುದ್ರಾಡಿ ಮೇಲ್ಮನೆ ಕೃಷ್ಣ ಡಿ. ಶೆಟ್ಟಿ ಅವರು ಮೇ 28ರಂದು ನಿಧನರಾಗಿದ್ದು, ಅವರ ಆತ್ಮ ಸದ್ಗತಿಗಾಗಿ ಜೂ. 13ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು.

ಅಂಧೇರಿಯ ಮಾಜಿ ಶಾಸಕ ಸುರೇಶ್‌ ಶೆಟ್ಟಿ ಅವರು ನುಡಿನಮನ ಸಲ್ಲಿಸಿ, ಸಮಾಜ ಸೇವೆಯ ಮೂಲಕ ನಗರ ಸೇವಕರಾಗಿ, ಕಾಂಗ್ರೆಸ್‌ ಪಕ್ಷದ ಧೀಮಂತ ನಾಯಕರ ನಂಟನ್ನು ಬೆಳೆಸಿಕೊಂಡು ಓರ್ವ ನಿಷ್ಠಾವಂತ ರಾಜಕಾರಣಿಯಾಗಿ ಸಾರ್ಥಕ ಬದುಕನ್ನು ಕಟ್ಟಿಕೊಂಡವರು. ಅವರ ಆಗಲಿಕೆ ದು:ಖವಾಗಿರದೆ, ಜೀವನದ ಎಲ್ಲಾ ಮಜಲುಗಳಲ್ಲೂ ರಾಜರಾಗಿ ಬಾಳಿದವರು. ಅವರ ನೆನಪು ಅಂಧೇರಿಯಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ನುಡಿದರು.

ಬಂಟ್ವಾಳದ ಶಾಸಕ, ಕೃಷ್ಣ ಶೆಟ್ಟಿ ಅವರ ಅಳಿಯ ರಾಜೇಶ್‌ ನಾಯ್ಕ ಉಳಿಪಾಡಿ ಇವರು ಮಾತನಾಡಿ, ತಾನಿಂದು ರಾಜಕೀಯದಲ್ಲಿ ಬೆಳೆಯಲು ಪ್ರೇರಣೆ ಕೃಷ್ಣ ಶೆಟ್ಟಿ ಅವರು. ಸಮಾಜ ಸೇವಕನಾಗಿದ್ದ ತನ್ನನ್ನು ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿ ನಮ್ಮ ಕುಟುಂಬಕ್ಕೆ ರಾಜಕೀಯ ಜೀವನದ ಅರಿವು ಮೂಡಿಸಿದ್ದಾರೆ ಎಂದರು.

ಎನ್‌ಸಿಪಿಯ ನೇತಾರ ಲಕ್ಷ್ಮಣ್‌ ಪೂಜಾರಿ ಅವರು ನುಡಿನಮನ ಸಲ್ಲಿಸಿ, ಕೃಷ್ಣ ಶೆಟ್ಟಿ ಅವರು ಅಂಧೇರಿಯ ಪ್ರದೇಶಕ್ಕೆ ಹುಲಿಯಂತಿದ್ದರು. ಯಾವುದೇ ಸಮಸ್ಯೆಗಳು ಪರಿಸರದಲ್ಲಿ ಉದ್ಭವಿಸಿದಾಗ ಕೃಷ್ಣ ಶೆಟ್ಟಿ ಅವರೇ ನಿಂತು ಪರಿಹರಿಸುತ್ತಿದ್ದರು ಎಂದು ನುಡಿದರು.

ಪುಣೆಯ ನಗರ ಸೇವಕಿ ಸುಜಾತಾ ಶೆಟ್ಟಿ ಅವರು ಮಾತನಾಡಿ, ನಮ್ಮ ಕುಟುಂಬವನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಪುಣೆಯಂತಹ ನಗರದಲ್ಲಿ ನಾನು ರಾಜಕೀಯವಾಗಿ ಬೆಳೆಯಲು ಮಾರ್ಗದರ್ಶಕರಾಗಿದ್ದರು ಎಂದರು.

ವಿಲೇಪಾರ್ಲೆಯ ಮಾಜಿ ಶಾಸಕ ಕೃಷ್ಣ ಹೆಗ್ಡೆ ಇವರು ನುಡಿ ನಮನ ಸಲ್ಲಿಸಿ, ನಮ್ಮ ತಂದೆಯ ಕಾಲದಿಂದಲೂ ನಮ್ಮೊಂದಿಗೆ ಬಹಳ ಆತ್ಮೀಯತೆಯನ್ನು ಬೆಳೆಸಿಕೊಂಡವರು. ನಿಷ್ಠಾವಂತ ರಾಜಕಾರಣಿಯಾಗಿ ನಿಷ್ಠುರವಾಗದಂತೆ 

ಜೀವನ ನಡೆಸಿ ಎಲ್ಲರಿಗೂ ಆದರ್ಶ ಪ್ರಾಯ ರಾಗಿದ್ದರು ಎಂದರು. ಇದೇ ಸಂದರ್ಭದಲ್ಲಿ ದಿ| ಕೃಷ್ಣ ಶೆಟ್ಟಿ ಅವರ ಭಾವಚಿತ್ರಕ್ಕೆ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಮತ್ತು ಪದಾಧಿಕಾರಿಗಳು ಬೃಹತ್‌ ಹೂವಿನ ಹಾರ ಸಮರ್ಪಿಸಿದರು.

ಕಾಂಗ್ರೆಸ್‌ ಪಕ್ಷದ ಮುಂಬಯಿ ಪ್ರದೇಶ ಅಧ್ಯಕ್ಷ ಸಂಜಯ್‌ ನಿರುಪಮ್‌, ಬೊರಿವಲಿ ಮಾಜಿ ನಗರ ಸೇವಕ ಶಿವಾನಂದ ಶೆಟ್ಟಿ, ಚರಿಷ್ಮಾ ಸುಧೀರ್‌ ಶೆಟ್ಟಿ, ಐಕಳ ಹರೀಶ್‌ ಶೆಟ್ಟಿ, ಕೃಷ್ಣ ಶೆಟ್ಟಿ ಇವರ ಕುಟುಂಬಿಕರು, ಹಿತೈಷಿಗಳು, ಅಭಿಮಾನಿಗಳು, ಬಂಟ ಸಮಾಜದ ಗಣ್ಯರು, ಮುದ್ರಾಡಿ ದಿವಾಕರ ಶೆಟ್ಟಿ ಅವರು ಪುಷ್ಪವೃಷ್ಠಿಗೈದು ಶ್ರದ್ಧಾಂಜಲಿ ಸಲ್ಲಿಸಿದರು. ಸಂತೋಷ್‌ ಕ್ಯಾಟರಿಂಗ್‌ ಇದರ ಮಾಲಕ ರಾಘು ಪಿ. ಶೆಟ್ಟಿ ಇವರು ಕೃಷ್ಣ ಶೆಟ್ಟಿ ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.