ಡೊಂಬಿವಲಿ ಬಂಟರ ಸಂಘ ಪ್ರಾದೇಶಿಕ ಸಮಿತಿ: ಆರ್ಥಿಕ ಸಹಾಯ ವಿತರಣೆ


Team Udayavani, Jun 20, 2018, 4:30 PM IST

1906mum01a.jpg

ಡೊಂಬಿವಲಿ: ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಬೇಕು. ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು. ಅವರಿಗೆ ಶಿಕ್ಷಣದ ಜೊತೆಗೆ ನಾಡಿನ ಸಂಸ್ಕೃತಿ-ಸಂಸ್ಕಾರಗಳ ಅರಿವು ಮೂಡಿಸುವಲ್ಲೂ ಮುಂದಾ ಗಬೇಕು. ಬಂಟರ ಸಂಘದ ದಾನಿಗಳು ಇಂದು ಸಮಾಜದ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಬಾಳಿಗೆ ಆಶಾಕಿರಣವಾಗುತ್ತಿರುವುದು ಅಭಿನಂದನೀಯ. ಡೊಂಬಿವಲಿ ಯಲ್ಲಿ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಸಮಾಜ ಸೇವೆ ಮೆಚ್ಚು ವಂತದ್ದಾಗಿದೆ. ಸಮಾಜ ಬಾಂಧವರ ಕಷ್ಟ-ಕಾರ್ಪಣ್ಯಗಳಿಗೆ ಸಂಘವು ಸದಾ ಸ್ಪಂದಿಸುತ್ತಿದ್ದು, ಪ್ರತೀ ವರ್ಷ 6 ಕೋ. ರೂ. ಗಳನ್ನು ಹಂಚುತ್ತಿದೆ. ಮುಂದಿನ ದಿನಗಳಲ್ಲಿ ಸಮಾಜದ 500 ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ನುಡಿದರು.

ಡೊಂಬಿವಲಿ ಪೂರ್ವದ ಹೊಟೇಲ್‌ ಸುಯೋಗ್‌ ಸಭಾಗೃಹ ದಲ್ಲಿ ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವಾರ್ಷಿಕ ಆರ್ಥಿಕ ನೆರವು ವಿತರಣೆ ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಮಕ್ಕಳನ್ನು ಸಮಾಜಮುಖೀಯಾಗಿ ಬೆಳೆಸಬೇಕು. ಸಂಘದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಪಾಲಕರ ಮೇಲಿದೆ. ಸಂಘದ ಋಣವನ್ನು ಮರೆಯದೆ ಅದನ್ನು ಮುಂದಿನ ದಿನಗಳಲ್ಲಿ ತೀರಿಸು ವಲ್ಲೂ ಮಕ್ಕಳು ಮುಂದಾಗಬೇಕು ಎಂದು ನುಡಿದು ಶುಭಹಾರೈಸಿದರು.

ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಇವರು ಮಾತನಾಡಿ, ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದೇನೆ. ಸಮಾಜ ಬಾಂಧವರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಅದರೊಂದಿಗೆ ಮುಂದಿನ ದಿನಗಳಲ್ಲಿ 500 ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ಯೋಜನೆ ನಮ್ಮದಾಗಿದೆ ಎಂದರು. ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪಕಾರ್ಯಾಧ್ಯಕ್ಷ ಸುಬ್ಬಯ್ಯ  ಶೆಟ್ಟಿ   ಅವರು ಮಾತನಾಡಿ, ಮಿತಿಯು ನೂತನ ಕ್ರಾಂತಿಯನ್ನು ಮಾಡಲು ಹೊರಟಿದೆ. ಅದಕ್ಕೆ ಎಲ್ಲಾ ದಾನಿಗಳ ಸಹಕಾರ 

ಅವಶ್ಯಕವಾಗಿದೆ. ಇದರ ಲಾಭವನ್ನು ಸಮಾಜದ ಪ್ರತಿಯೊಬ್ಬರು ಪಡೆಯ ಬೇಕು ಎಂದರು.

ಸಂಘದ ಗೌರವ ಕಾರ್ಯದರ್ಶಿ ಪ್ರವೀಣ್‌ ಬಿ. ಶೆಟ್ಟಿ ಇವರು ಮಾತನಾಡಿ, ಒಂಭತ್ತು ದಶಕಗಳ ಇತಿಹಾಸವನ್ನು ಹೊಂದಿರುವ ಸಂಘವು ಕಳೆದ 20 ವರ್ಷಗಳಿಂದ ಸಮಾಜ ಬಾಂಧವರ ಮನೆ ಬಾಗಿಲಿಗೆ ಬಂದು ಸಹಕರಿಸುತ್ತಿದೆ. ನಮ್ಮ ಸದಸ್ಯತನವನ್ನು 1 ಲಕ್ಷಕ್ಕೆ ಏರಿಸುವ ಯೋಜನೆಯನ್ನು ಹಾಕಿಕೊಳ್ಳೋಣ ಎಂದು ನುಡಿದರು.

ಪಶ್ಚಿಮ ವಿಭಾಗ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಇವರು ಮಾತ ನಾಡಿ, ಬಂಟರ ಸಂಘ ಮತ್ತು ಪ್ರಾದೇ ಶಿಕ ಸಮಿತಿಗಳು ಇಂದು ಸದೃಢ ಗೊಳ್ಳುತ್ತಿದ್ದು, ವಿಧವಾ ವೇತನದ ತಾರತಮ್ಯವನ್ನು ದೂರ ಮಾಡಿದ ಕೀರ್ತಿ ಸಂಘಕ್ಕೆ ಸಲ್ಲುತ್ತದೆ. ಸಂಘದ ಶಿಕ್ಷಣ ಸಂಸ್ಥೆಗಳ ಲಾಭವನ್ನು ಸಮಾಜ ಬಾಂಧವರು ಪಡೆಯಬೇಕು ಎಂದರು.

ಡೊಂಬಿವಲಿ ಪ್ರಾದೇಶಿಕ ಸಮಿತಿ  ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಪ್ರಾದೇಶಿಕ ಸಮಿತಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಬಿಸುಪರ್ಬದ ಸಂದರ್ಭದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಪ್ರಾದೇಶಿಕ ಸಮಿತಿಯ ತಂಡದ ಸದಸ್ಯರನ್ನು ಮತ್ತು ನಿರ್ದೇಶಕರನ್ನು ಸತ್ಕರಿಸಲಾಯಿತು.

ಸುನಂದಾ ಶೆಟ್ಟಿ ಪ್ರಾರ್ಥನೆಗೈದರು. ಗಣ್ಯರು ದೀಪಪ್ರಜ್ವಲಿಸಿ ಸಮಾ ರಂಭಕ್ಕೆ ಚಾಲನೆ ನೀಡಿದರು. ವೇದಿಕೆ ಯಲ್ಲಿ ಬಂಟರ ಸಂಘ ಮತ್ತು ಡೊಂಬಿವಲಿ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳಾದ ರಾಜೀವ ಭಂಡಾರಿ, ಡಾ| ಪ್ರಭಾಕರ ಶೆಟ್ಟಿ, ಸುಕುಮಾರ್‌ ಎನ್‌. ಶೆಟ್ಟಿ, ತಿಮ್ಮಪ್ಪ ಶೆಟ್ಟಿ, ಪ್ರಭಾಕರ ಶೆಟ್ಟಿ, ವಿಜಯ ಶೆಟ್ಟಿ, ಉಮೇಶ್‌ ಶೆಟ್ಟಿ, ಕೃಷಿ¡ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸುಕುಮಾರ್‌ ಎನ್‌. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

60 ಲಕ್ಷದಿಂದ ಪ್ರಾರಂಭಗೊಂಡ ಈ ಯೋಜನೆಯು ಇಂದು ಕೋಟ್ಯಂತರ ರೂ. ಗಳಿಗೆ ತಲುಪಿದೆ. ಕಳೆದ 14 ವರ್ಷಗಳಿಂದ ಡೊಂಬಿವಲಿಗೆ 3.5 ಕೋ. ರೂ.   ಸಂಘದಿಂದ ಬಂದಿದೆ ಎನ್ನಲು ಸಂತೋಷವಾಗುತ್ತಿದೆ. ಮಕ್ಕಳಿಗೆ ನೀಡುವ ಆರ್ಥಿಕ ಸಹಾಯವನ್ನು ಒಳ್ಳೆಯ ರೀತಿಯಲ್ಲಿ ವಿನಿಯೋಗಿಸಿಕೊಳ್ಳಬೇಕು. ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಶಾಲಾ-ಕಾಲೇಜುಗಳ ಲಾಭವನ್ನು ಸಮಾಜದವರು ಪಡೆದುಕೊಳ್ಳಬೇಕು. ಶಿಕ್ಷಣವೇ ಇಂದು ಎಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ  ಮಂತ್ರವಾಗಿದೆ. ಈ ಉದ್ದೇಶದಿಂದಲೇ ಸಂಘವು ಸಮಾಜವನ್ನು ಸುಶಿಕ್ಷಿತಗೊಳಿಸಲು ಹೊರಟಿದ್ದು, ದಾನಿಗಳ ಸಹಕಾರ ಸದಾಯಿರಲಿ. 
– ಇಂದ್ರಾಳಿ ದಿವಾಕರ ಶೆಟ್ಟಿ 
(ಸಮನ್ವಯರು : ಮಧ್ಯ ಪ್ರಾ.ಸಮಿತಿ ಬಂಟರ ಸಂಘ ಮುಂಬಯಿ).

ಸಾವಿರಾರು ವಿದ್ಯಾರ್ಥಿಗಳು ಆರ್ಥಿಕ ಸಹಾಯವನ್ನು ಪಡೆಯುತ್ತಿದ್ದು, ಅದರೊಂದಿಗೆ ವಿಧವಾ ವೇತನ, ವಿಕಲ ಚೇತನರಿಗೆ ಸಹಾಯ ನೀಡಲಾಗುತ್ತಿದೆ. ಸಮಾಜ ಬಾಂಧವರ ಕಣ್ಣೀರು ಒರೆಸುವ ಇಂತಹ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಡೊಂಬಿವಲಿ ಪ್ರದೇಶದ 613 ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರೂ. ಗಳನ್ನು ಸಂಘವು ನೀಡಿದೆ. ಅದರೊಂದಿಗೆ ಪ್ರಾದೇಶಿಕ ಸಮಿತಿಯ ಮುಂದಿನ ದಿನಗಳಲ್ಲಿ ದತ್ತು ಸ್ವೀಕಾರ ಮಾಡಲಿದೆ. ಇದರ ಲಾಭವನ್ನು ಸಮಾಜದವರು ಪಡೆಯಬೇಕು .
–  ಖಾಂದೇಶ್‌ ಭಾಸ್ಕರ್‌ ಶೆಟಿ 
(ಕಾರ್ಯದರ್ಶಿ :  ಶಿಕ್ಷಣ, ಸಮಾಜ ಕಲ್ಯಾಣ ಸಮಿತಿ ಬಂಟರ ಸಂಘ).

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.