ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್‌ ಪುಣೆ ಯೋಗ ಶಿಬಿರ, ಸಮ್ಮಾನ


Team Udayavani, Jun 24, 2018, 5:10 PM IST

2206mum02.jpg

ಪುಣೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪುಣೆಯ  ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ  ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ  ಆಯೋಜಕತ್ವದಲ್ಲಿ   ಜೂ.  21 ರಂದು ಬೆಳಗ್ಗೆ 8 ರಿಂದ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ 2017-2018 ನೇ ಶೈಕ್ಷಣಿಕ ಎಚ್‌ಎಸ್‌ಸಿ ಮತ್ತು ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಅಧಿಕ ಅಂಕಗಳನ್ನು ಪಡೆದ  ಪುಣೆಯ ತುಳು ಕನ್ನಡಿಗ ವಿದ್ಯಾರ್ಥಿಗಳನ್ನು ದೇವಸ್ಥಾನದ  ವತಿಯಿಂದ ಸಮ್ಮಾನಿಸಲಾಯಿತು.    ಕಾತ್ರಜ್‌  ಶ್ರೀ ಅಯ್ಯಪ್ಪ ಸ್ವಾಮಿ  ಸೇವಾ ಸಂಘದ   ವಿಶ್ವಸ್ತ ಮಂಡಳಿಯ   ಅಧ್ಯಕ್ಷ  ಸುಭಾಷ್‌ ಶೆಟ್ಟಿ, ಸ್ಥಾಪಕಾಧ್ಯಕ್ಷ, ಕಾರ್ಯದರ್ಶಿ ರಘುರಾಮ್‌ ರೈ, ಕೋಶಾಧಿಕಾರಿ ಜಗದೀಶ್‌ ಶೆಟ್ಟಿ, ಉಪಾಧ್ಯಕ್ಷ  ಸುಧಾಕರ್‌ ಶೆಟ್ಟಿ, ಮಾಜಿ ಅಧ್ಯಕ್ಷ  ಶೇಖರ್‌  ಟಿ. ಪೂಜಾರಿ,  ಜೊತೆ ಕಾರ್ಯದರ್ಶಿ ಸಚ್ಚಿದಾನಂದ ಶೆಟ್ಟಿ, ಜೊತೆ ಕೋಶಾಧಿಕಾರಿ ಬಾಲಕೃಷ್ಣ ಗೌಡ, ವಿಶ್ವಸ್ತ ಭಾಸ್ಕರ್‌ ಶೆಟ್ಟಿ,  ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ  ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್‌ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು    ಅರ್ಹ ವಿದ್ಯಾರ್ಥಿಗಳಿಗೆ ಶಾಲು, ಪುಷ್ಪಗುತ್ಛ, ಸ್ಮರಣಿಕೆ ಹಾಗೂ ಆಶೀರ್ವಾದ ಹೊಟೇಲ್‌ನ ಮಾಲಕ ಮಾಧವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ   ಪ್ರೋತ್ಸಾಹ ಧನವನ್ನು ನೀಡಿ ಸಮ್ಮಾನಿಸಿ ಗೌರವಿಸಿದರು.

ಪುಣೆಯ ವಿವಿಧ  ಹೈಸ್ಕೂಲ್‌ ಮತ್ತು ಕಾಲೇಜು ಗಳ  ವಿದ್ಯಾರ್ಥಿಗಳಾದ ನಿಧಿ ಜೆ. ಶೆಟ್ಟಿ, ಪ್ರಥ್ವಿ ಬಿ. ಕೊಟ್ಟಾರಿ, ವಿಂಧ್ಯಾ ಪಿ. ಗೌಡ ,     ಸಂವೇದ್‌ ಎಸ್‌. ಶೆಟ್ಟಿ, ತ್ರಿಜûಾ ಗೌಡ, ಹರ್ಷ್‌ ಎಸ್‌. ಕೋಟ್ಯಾನ್‌, ಕೌಶಿಕ್‌ ಎಸ್‌. ಪೂಜಾರಿ, ಸ್ನೇಹಾ ಎಸ್‌. ಸಫಲಿಗ, ಅಸ್ಮಿತಾ ಎಸ್‌. ಸಾಲ್ಯಾನ್‌, ದೀಪಕ್‌ ಆರ್‌. ಮೂಲ್ಯ, ಸೌಜನ್ಯಾ ಜೆ. ಪೂಜಾರಿ, ಪಾರ್ಥ್ ಎಸ್‌. ಶೆಟ್ಟಿ, ಹೃದಯ್‌ ಅರ್‌. ಶೆಟ್ಟಿ, ಶ್ವೇತಾ ಮೂಲ್ಯ, ಅಕಾಂಕ್ಷ ದೇವಾಡಿಗ, ವೈಷ್ಣವಿ ಎಸ್‌. ಹೆಗ್ಡೆ, ದೇವಿಕಾ ಡಿ. ರಾವ್‌ ಮೊದಲಾದವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಸಮ್ಮಾನಿಸಲಾಯಿತು.

ಪ್ರಾರಂಭದಲ್ಲಿ  ಯೋಗ ದಿನ ಆಚರಣೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ  ಸೇವಾ ಸಂಘ ಮಹಿಳಾ ವಿಭಾಗದ ಸದಸ್ಯೆ, ಯೋಗ ಶಿಕ್ಷಕಿ ಪ್ರಮೀಳಾ ಜಗದೀಶ್‌ ಶೆಟ್ಟಿ ಇವರ ಮುಂದಾಳತ್ವ ದಲ್ಲಿ  ಹಾಗೂ ಜಗದೀಶ್‌ ಶೆಟ್ಟಿಯವರ ಸಹಕಾರ ದೊಂದಿಗೆ  ಯೋಗ ಶಿಬಿರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ  ಸಮಿತಿಯ ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯ ಭಕ್ತರು, ಯೋಗಾಸಕ್ತರು, ವಿದ್ಯಾರ್ಥಿಗಳು, ಮಕ್ಕಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಅಧ್ಯಕ್ಷ ಸುಭಾಷ್‌ ಶೆಟ್ಟಿ ಇವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಈ ಸುಸಂದರ್ಭದಲ್ಲಿ ಅಯ್ಯಪ್ಪ ದೇವಸ್ಥಾನದ  ಸೇವಾ ಸಂಘದ    ವತಿಯಿಂದ ಪ್ರತಿ ವರ್ಷವೂ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಸಮ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುತ್ತಿದೆ. ಉತ್ತಮ ಅಂಕ ಪಡೆದ  ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿದರು. ಅಲ್ಲದೆ  ಯೋಗ ಶಿಬಿರದ ಉಸ್ತುವಾರಿ ವಹಿಸಿಕೊಂಡು ಉತ್ತಮ ಯೋಗಾಭ್ಯಾಸವನ್ನು   ನಡೆಸಿಕೊಟ್ಟ  ಪ್ರಮೀಳಾ ಜಗದೀಶ್‌ ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಕೊನೆಯಲ್ಲಿ ಅಂಬಿಕಾ ವಿಶ್ವನಾಥ್‌ ಶೆಟ್ಟಿ ಮತ್ತು ಶೇಖರ್‌ ಟಿ. ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸ ಲಾಗಿತ್ತು.  ವಿಶ್ವಸ್ತ  ಮಂಡಳಿಯ ಕಾರ್ಯದರ್ಶಿ ರಘುರಾಮ್‌ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

ಚಿತ್ರ-ವರದಿ : ಹರೀಶ್‌ ಪಡುಬಿದ್ರೆ ಪುಣೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.