ಅಂಧೇರಿ ಕರ್ನಾಟಕ ಸಂಘ: ಕುಣಿತ ಭಜನೆ ಸ್ಪರ್ಧೆ ಪ್ರಶಸ್ತಿ ಪ್ರದಾನ


Team Udayavani, Jul 12, 2018, 4:51 PM IST

1007mum07.jpg

ಮುಂಬಯಿ: ಅಂಧೇರಿ ಕರ್ನಾಟಕ ಸಂಘದ 12 ನೇ ವಾರ್ಷಿಕೋತ್ಸವದ ಅಂಗವಾಗಿ ಕುಣಿತ ಭಜನ ಸ್ಪರ್ಧೆಯು  ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ  ನಡೆಯಿತು.

ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನ ಮುಂಬಯಿ ಸಂಸ್ಥಾಪಕಾಧ್ಯಕ್ಷ ವಿದ್ವಾನ್‌ ಕೈರಬೆಟ್ಟು ವಿಶ್ವನಾಥ್‌ ಭಟ್‌ ಮತ್ತು ವೇದಮೂರ್ತಿ ಎಸ್‌. ಎನ್‌. ಉಡುಪ ಅವರು ದೀಪಪ್ರಜ್ವಲಿಸಿ ಕುಣಿತ ಭಜನ ಸ್ಪರ್ಧೆಗೆ ಚಾಲನೆ ನೀಡಿದರು. ಶ್ರೀ ಭ್ರಮರಾಂಬಿಕೆ ದೇವಸ್ಥಾನ ಸಾಕಿನಾಕಾ ಮಹಿಳಾ ಸದಸ್ಯೆಯರಿಂದ ಸಾಂಕೇತಿಕವಾಗಿ ಕುಣಿತ ಭಜನೆ ಪ್ರಾರಂಭಗೊಂಡಿತು.

ಸ್ಪರ್ಧೆಯಲ್ಲಿ ಮುಂಬಯಿ ಹಾಗೂ ಊರಿನ ಒಟ್ಟು 7 ತಂಡಗಳು ಭಾಗವಹಿಸಿದ್ದವು. ಅಂತಿಮವಾಗಿ ಶ್ರೀ ರಾಧಾಕೃಷ್ಣ ಭಜನ ಮಂಡಳಿ ಕದಿಕೆ ಸಸಿಹಿತತ್ಲು ತಂಡವು ಪ್ರಥಮ ಬಹುಮಾನ 20 ಸಾವಿರ ರೂ. ಹಾಗೂ ಟ್ರೋಫಿ, ದ್ವಿತೀಯ ಸ್ಥಾನವನ್ನು ಶ್ರೀ ರಾಮ ಭಜನಾ ಮಂದಿರ ಬಟ್ಟೆಕುದ್ರು ಕುಂದಾಪುರ 15 ಸಾವಿರ ರೂ. ಮತ್ತು ಟ್ರೋಫಿ ಹಾಗೂ ಜರಿಮೆರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನವು ತೃತೀಯ ಬಹುಮಾನ ಪಡೆದುಕೊಂಡಿತು. ಗಣ್ಯರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು.

ಸ್ಪರ್ಧೆಯಲ್ಲಿ ಶ್ರೀ ದತ್ತಾತ್ರೇಯ ಭಜನಾ  ಮಂಡಳಿ ಅಸಲ್ಫಾ, ಶ್ರೀ ಉಮಾಮಹೇಶ್ವರಿ ಭಜನಾ  ಮಂಡಳಿ ಜರಿಮೆರಿ, ಶ್ರೀ ಆದಿಶಕ್ತಿ ದೇವಸ್ಥಾನ ಥಾಣೆ, ಮಹಿಷ ಮರ್ದಿನಿ ಭಜನಾ  ಮಂಡಳಿ ಬೊರಿವಲಿ, ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಶ್ರೀ ರಾಮ ಭಜನಾ ಮಂದಿರ ಬಟ್ಟೆಕುದ್ರು ಕುಂದಾಪುರ, ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ಕದಿಕೆ ಸಸಿಹಿತ್ಲು ತಂಡಗಳು ಭಾಗವಹಿಸಿದ್ದವು.

ತೀರ್ಪುಗಾರರಾಗಿ ವಿಶ್ವನಾಥ್‌ ಭಟ್‌, ಶೇಖರ ಸಸಿಹಿತ್ಲು, ಸರಿಯಾ ಕೋತ್ವಾಲ್‌ ಅವರು ಸಹಕರಿಸಿದರು. ಸ್ಪರ್ಧಾಳುಗಳ ವಿವರವನ್ನು ಸಂಘದ ಮಾಜಿ ಅಧ್ಯಕ್ಷ ಭಾಸ್ಕರ ಸಸಿಹಿತ್ಲು ಓದಿದರು. ಪತ್ರಕರ್ತ ದಯಾ ಸಾಗರ್‌ ಚೌಟ ಅವರು ಕಾರ್ಯಕ್ರಮ ನಿರ್ವಹಿಸಿದರು. ಪಾಲ್ಗೊಂಡ ಎಲ್ಲಾ ಭಜನಾ ತಂಡಗಳಿಗೂ ಸಮಾಧಾನಕರ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನದ ಸಂಸ್ಥಾಪಕ ಕೈರಬೆಟ್ಟು ವಿಶ್ವನಾಥ್‌ ಭಟ್‌, ಕ್ಲಾಸಿಕ್‌ ಗ್ರೂಪ್‌ ಆಫ್‌ ಹೊಟೇಲ್ಸ್‌ ನ ಸುರೇಶ್‌ ಕಾಂಚನ್‌, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ, ಜೆರಿಮೆರಿ ಶ್ರೀ ಉಮಾಮಹೇಶ್ವರಿ ಮಂದಿರದ ಅರ್ಚಕ ಎಸ್‌. ಎನ್‌. ಉಡುಪ, ಟೆಕ್‌ನಿಕ್‌ ಎಂಜಿನೀಯರಿಂಗ್‌ ಇದರ ಎಂಡಿ ನಾಗರಾಜ್‌ ಪಡುಕೋಣೆ, ಉದ್ಯಮಿ ಸುಭಾಷ್‌ ಶೆಟ್ಟಿ, ಸುಗಮ ಸಂಗೀತ ಪರಿಷತ್‌ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಕಾಪು,  ಫಾಸ್ಟ್‌ಟ್ರಾÂಕ್‌ ವಲ್ಶ್ವೈಡ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಮಂಜುನಾಥ ಶೆಟ್ಟಿ, ಗಜಾನನ ಇಂಡಸ್ಟಿÅàಸ್‌ ಇದರ ಬಿ. ಗಣಪತಿ, ಸ್ಟ್ರೇಕಾನ್‌ ಬಿಲ್ಡರ್ ಆ್ಯಂಡ್‌ ಡೆವಲಪರ್ ಇದರ ಸುರೇಶ್‌ ಶೆಟ್ಟಿ, ಗಾಣಿಗ ಸಮಾಜ ಮುಂಬಯಿ ಅಧ್ಯಕ್ಷ ರಾಮಚಂದ್ರ ಗಾಣಿಗ, ಉದ್ಯಮಿ ಪ್ರವೀಣ್‌ ಶೆಟ್ಟಿ ಪುಣೆ ಉಪಸ್ಥಿತರಿದ್ದರು.

ಸಂಘದ ಸಂಸ್ಥಾಪಕಾಧ್ಯಕ್ಷ ಕೃಷ್ಣ ಶೆಟ್ಟಿ, ಸಂಸ್ಥೆಯ ಗೌರವಾಧ್ಯಕ್ಷ ಪಿ. ಧನಂಜಯ ಶೆಟ್ಟಿ, ಅಧ್ಯಕ್ಷ ಹ್ಯಾರಿ ಸಿಕ್ವೇರಾ, ಉಪಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಮತ್ತು ಸತೀಶ್‌ ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ರಾವ್‌, ಜತೆ ಕಾರ್ಯದರ್ಶಿ ದಿನೇಶ್‌ ಆರ್‌. ಕೆ., ಗೌರವ ಕೋಶಾಧಿಕಾರಿ ಗಣೇಶ್‌ ಬಲ್ಯಾಯ, ಜತೆ ಕೋಶಾಧಿಕಾರಿ ಸೀತಾರಾಮ ಪೂಜಾರಿ  ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ  ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

 ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.