ಅಜೆಕಾರು ಕಲಾಭಿಮಾನಿ ಬಳಗ: ತಾಳಮದ್ದಳೆಗೆ ಚಾಲನೆ


Team Udayavani, Jul 15, 2018, 5:38 PM IST

1407mum08.jpg

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ವಾರ್ಷಿಕ ಸರಣಿ ತಾಳಮದ್ದಳೆಯು ಜು. 14 ರಂದು ಚಾಲನೆಗೊಂಡಿತು. ಅಪರಾಹ್ನ 4 ರಿಂದ ಕಾಂಜೂರ್‌ಮಾರ್ಗ ಪೂರ್ವದ ಶ್ರೀ ಅಂಬಿಕಾ ಮಂದಿರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಅಂಬಿಕಾ ಮಂದಿರದ ಶ್ರೀ ಅನಂತ ಭಟ್‌ ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಮಾನಸ ಮುಂಬಯಿ ಅಧ್ಯಕ್ಷ ಶೇಖರ್‌ ಶೆಟ್ಟಿ ವಹಿಸಿದ್ದರು. ಮುಖ್ಯ  ಅತಿಥಿಗಳಾಗಿ ಶ್ರೀ ಅಂಬಿಕಾ ಮಂದಿರದ ಕಾರ್ಯಾಧ್ಯಕ್ಷ ರಾಜೇಶ್‌ ಶೆಟ್ಟಿ, ಗುರುದೇವಾ ಸೇವಾ ಬಳಗ ಥಾಣೆ ಘಟಕದ ಅಧ್ಯಕ್ಷ ಗುಣಪಾಲ್‌ ಎಸ್‌. ಶೆಟ್ಟಿ, ಶ್ರೀ ಅಂಬಿಕಾ ಮಂದಿರದ ಅಧ್ಯಕ್ಷ ಶಂಕರ ಪೂಜಾರಿ, ಕರ್ನಾಟಕ ಬ್ಯಾಂಕ್‌ ಮುಲುಂಡ್‌ ಶಾಖೆಯ ಮ್ಯಾನೇಜರ್‌ ನಾಗೇಂದ್ರ ಎನ್‌. ಎಸ್‌., ಶ್ರೀ ಅಂಬಿಕಾ ಮಂದಿರದ ಉಪ ಕಾರ್ಯಾಧ್ಯಕ್ಷ ಸುಂದರ ಎಂ. ಶೆಟ್ಟಿ, ಕಾರ್ಯದರ್ಶಿ ಶೇಖರ್‌ ಶೆಟ್ಟಿಗಾರ್‌, ಜನಪ್ರಿಯ ಯಕ್ಷಗಾನ ಮಂಡಳಿ ಕುರ್ಲಾ ಅಧ್ಯಕ್ಷ ರವೀಂದ್ರ ಪೈ ಅವರು ಪಾಲ್ಗೊಂಡಿದ್ದರು.

ಉದ್ಘಾಟನ ಸಮಾರಂಭದ ವೇದಿಕೆಯಲ್ಲಿ ಅಜೆಕಾರು ಕಲಾಭಿ ಮಾನಿ ಬಳಗದ ಸಂಸ್ಥಾಪಕಾಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ  ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರುಗಳಿಂದ ಭೀಷ್ಮ ವಿಜಯ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕು| ಕಾವ್ಯಶ್ರೀ ಅಜೇರು, ಚೆಂಡೆಯಲ್ಲಿ ಪ್ರಶಾಂತ್‌ ವಗೆನಾಡು, ಮದ್ದಳೆಯಲ್ಲಿ ಶ್ರೀಪತಿ ನಾಯಕ್‌ ಅಜೇರು, ಅರ್ಥದಾರಿಗಳಾಗಿ ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಹರೀಶ್‌ ಭಟ್‌ ಬಳಂತಿಮೊಗರು, ಶ್ಯಾಮ್‌ ಭಟ್‌ ಪಕಳಕುಂಜ, ಅವಿನಾಶ್‌ ಶೆಟ್ಟಿ ಉಬರಡ್ಕ ಇವರು ಪಾಲ್ಗೊಂಡಿದ್ದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ದಿನೇಶ್‌ ಶೆಟ್ಟಿ ವಿಕ್ರೋಲಿ ಸಹಕರಿಸಿ ದರು. ಕಾಂಜೂರ್‌ಮಾರ್ಗ ಪೂರ್ವದ ಶ್ರೀ ಅಂಬಿಕಾ ಮಂದಿರದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.  ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕಲಾಭಿಮಾನಿಗಳು, ತುಳು- ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಜು. 21 ರವರೆಗೆ ನಗರ ಮತ್ತು ಉಪನಗರಗಳ ವಿವಿಧೆಡೆ ಗಳಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಜು. 15 ರಂದು ಬೊರಿವಲಿ ಪಶ್ಚಿಮದ ಜಯರಾಜ್‌ ನಗರದ  ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಅಪರಾಹ್ನ 3.30 ರಿಂದ ಶ್ರೀ ರಾಮಪಟ್ಟಾಭಿಷೇಕ ಯಕ್ಷಗಾನ ತಾಳಮದ್ದಳೆ ನೆರವೇರಲಿದೆ.

 ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.