ಅತ್ತೂರು ಬಾಬು ಶೆಟ್ಟಿ ಅವರಿಗೆ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ನುಡಿನಮನ


Team Udayavani, Jul 20, 2018, 11:16 AM IST

1807mum05.jpg

ಮುಂಬಯಿ: ಹುಟ್ಟಿದ ಮನುಷ್ಯ ಒಂದಲ್ಲ ಒಂದು ದಿನ ಸಾಯಲೇ ಬೇಕು. ವ್ಯಕ್ತಿಅಳಿದರೂ ಮುಂದೆ ಉಳಿಯುವುದು ಅವರು ಮಾಡಿದ ಕರ್ಮಫಲ ಮಾತ್ರ. ಅಂತಹ ಮಹಾನ್‌ಕಾರ್ಯವನ್ನು ಬಾಬು ಶೆಟ್ಟಿ ಅವರು ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ. ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಸ್ಥಾಪನೆಯಲ್ಲಿ ಅವರಯೋಗದಾನ ಮಹತ್ತರದ್ದಾಗಿದೆ. 

ಮುಂಬಯಿ ಯಲ್ಲದೆ ಊರಿನಲ್ಲೂ ಅವರ ಸಮಾಜ ಸೇವೆ ಅನನ್ಯವಾಗಿದೆ. ಕಷ್ಟ ಎಂದು ಬಂದವರನ್ನು ಅವರು ಬರೀ ಕೈಯಲ್ಲಿ ಕಳಿಸಿದವರಲ್ಲ. ದೇಣಿಗೆ ನೀಡುವಲ್ಲೂ ಅವರು ಒಂದು ಹೆಜ್ಜೆ ಮುಂದೆ. ಅವರು ದೈಹಿಕವಾಗಿ ನಮ್ಮಿಂದ ದೂರಹೋದರೂ ಕೂಡ ಅವರು ಮಾಡಿದ ಸಾಧನೆ, ಆದರ್ಶಗಳು ನಮಗೆ ದಾರಿದೀಪವಾಗಿದೆ. ಅವರು ಜೀವಿತ ಕಾಲ ದಲ್ಲಿ ಮಾಡಿದ ಸೇವೆ ಅಜರಾಮರವಾಗಿರಲಿ ಎಂದು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ  ನ್ಯಾಯವಾದಿ ಸುಭಾಷ್‌ ಶೆಟ್ಟಿ ಅವರು ನುಡಿದರು.

ಜು. 14ರಂದು ಸಯಾನ್‌ನ ನಿತ್ಯಾನಂದ ಸಭಾಗೃಹದಲ್ಲಿ ಬೋಂಬೆ ಬಂಟ್ಸ್‌ ಅಸೋಸಿ ಯೇಶನ್‌ ವತಿಯಿಂದ ನಡೆದ ಇತ್ತೀಚೆಗೆ ನಿಧನ ರಾದ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ, ಸ್ಥಾಪಕ, ಹಿರಿಯ ಮುತ್ಸದ್ದಿ, ಸಮಾಜ ಸೇವಕ, ದಾನಿ ಬಾಬು ಶೆಟ್ಟಿ ಅತ್ತೂರು ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿನಮನ ಸಲ್ಲಿಸಿದರು.
ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಎನ್‌. ಸಿ. ಶೆಟ್ಟಿ ಇವರು ಮಾತನಾಡಿ, ಬಾಬು ಶೆಟ್ಟಿ ಅವರ ಸಮಾಜ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಅವರಲ್ಲಿ ಬಂಟತನವಿತ್ತು. ಧಾರ್ಮಿಕ ಕಾರ್ಯಗಳಿಗೆ ಅಪಾರ ಸೇವೆಯನ್ನು ನೀಡಿದ್ದಾರೆ. ಕಟೀಲು ಧ್ವಜಸ್ತಂಭಕ್ಕೆ ಬೆಳ್ಳಿಮುಚ್ಚಿಸಿದ ಮಹಾದಾನಿ ಅವರಾಗಿದ್ದಾರೆ. 91 ರ ಹರೆಯದಲ್ಲೂ ಅವರು ಲವಲವಿಕೆಯಿಂದ ಕೂಡಿದ್ದರು ಎಂದರು.

ಮತ್ತೋರ್ವ ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ ಇವರು ಮಾತನಾಡಿ, 1961 ರಲ್ಲಿ ಕಟೀಲಿನ ತೀರ್ಥ ಮಂಟಪಕ್ಕೆ ಬೆಳ್ಳಿಯ ಕವಚವನ್ನು ನೀಡಿದ ಮುಂಬಯಿಯ ಪ್ರಥಮ ದಾನಿ ಅವರಾಗಿದ್ದಾರೆ. ಅವರ ಮದುವೆಯ ಪ್ರತೀ ವಾರ್ಷಿಕೋತ್ಸವದಂದು ಕಟೀಲಿನ ಯಕ್ಷಗಾನವನ್ನು ಆಡಿಸಿದ್ದಾರೆ. ನಿತ್ಯಾನಂದ ಗುರುಗಳ ಪರಮ ಭಕ್ತರಾಗಿದ್ದು, ದೇವಿ ಆರಾಧಕರಾಗಿದ್ದುಕೊಂಡ ಅವರು ಶುಕ್ರವಾರವೇ ದೈವಾಧೀನರಾಗಿ ದೇವಿಯ ಪಾದಕ್ಕೆ ಅರ್ಪಿತಗೊಂಡಿದ್ದಾರೆ ಎಂದು ನುಡಿದರು.

ಇನ್ನೋರ್ವ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌.ಶೆಟ್ಟಿ  ಮಾತನಾಡಿ, ನನಗೆ ಅವರು ಧನಿಯಾಗಿದ್ದರು. ಅವರು ಎಂದಿಗೂ ಕೋಪಗೊಂಡವರಲ್ಲ. ಏಕೆಂದರೆ ನಗುವೇ ಅವರ ಆದರ್ಶ ವ್ಯಕ್ತಿತ್ವವಾಗಿತ್ತು. ಅವರೋರ್ವ ಶುದ್ಧ ಚಾರಿತ್ರÂದ ವ್ಯಕ್ತಿಯಾಗಿದ್ದು, ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಮಾಜಿ ಅಧ್ಯಕ್ಷ ಜಯರಾಮ ಎಸ್‌. ಮಲ್ಲಿ ಇವರು ಮಾತನಾಡಿ, 1968-69 ನೇ ಸಾಲಿನಲ್ಲಿ ಬಾಬು ಶೆಟ್ಟಿ ಅವರ ಪರಿಚಯವಾಯಿತು. ತುಂಬಾ ಸರಳ 
ವ್ಯಕ್ತಿತ್ವ ಅವರದು. ನಗು ಮೊಗದ ಅವರು ಅಸೋಸಿಯೇಶನ್‌ನ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದು ನುಡಿದರು.

ಗೋಪಾಲ್‌ ವೈ. ಶೆಟ್ಟಿ, ಪತ್ರಕರ್ತ ದಯಾಸಾಗರ್‌ ಚೌಟ, ಶ್ರೀ ಗುರುದೇವಾ ಸೇವಾ ಬಳಗ ಮಹಾರಾಷ್ಟ್ರ ಘಟಕದ ಅಧ್ಯಕ್ಷ ನ್ಯಾಯವಾದಿ ಕೃಷ್ಣ ಎಲ್‌. ಶೆಟ್ಟಿ, ನಟರಾಜ್‌ ರಾವ್‌ ಪಡುಬಿದ್ರೆ, ಬಾಬು ಎನ್‌. ಶೆಟ್ಟಿ ಅವರ ಆತ್ಮೀಯರಾದ ಆ್ಯಂಟನಿ ಮೊದಲಾದವರು ನುಡಿನಮನ ಸಲ್ಲಿಸಿದರು. ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟÅ ಘಟಕದ ಗೌರವ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್‌ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ, ಬಾಬು ಶೆಟ್ಟಿ ಅತ್ತೂರು ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಅಸೋಸಿಯೇಶನ್‌ನ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್‌. ಶೆಟ್ಟಿ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಟ್ರಸ್ಟಿಗಳು, ಬಾಬು ಶೆಟ್ಟಿ ಅವರ ಅಭಿಮಾನಿಗಳು, ಹಿತೈಷಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಅವರ ಭಾವಚಿತ್ರಕ್ಕೆ ಪುಷ್ಟವೃಷ್ಟಿಗೈದು ಶ್ರದ್ಧಾಂಜಲಿ ಸಲ್ಲಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.