ಬಂಟರ ಸಂಘ ವಸಾಯಿ-ಡಹಾಣೂ: ಮಹಿಳೆಯರಿಗೆ ಫುಟ್ಬಾಲ್‌ ಪಂದ್ಯಾಟ


Team Udayavani, Aug 5, 2018, 4:05 PM IST

0308mum05a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಬಂಟ ಮಹಿಳೆಯರಿಗಾಗಿ ಫುಟ್ಬಾಲ್‌ ಪಂದ್ಯಾಟವು ಜು. 29 ರಂದು ನಲಸೋಪರ ಪೂರ್ವದ ಸೈಂಟ್‌ ಅಲೋಶಿಯಸ್‌ ಸ್ಕೂಲ್‌ ಮೈದಾನದಲ್ಲಿ ನಡೆಯಿತು.

ಬೆಳಗ್ಗೆ ಫುಟ್ಬಾಲ್‌ ಪಂದ್ಯಾಟವನ್ನು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಪಯ್ಯಡೆ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ, ಬಂಟ ಸಮಾಜದ ಮಕ್ಕಳು ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಅವರ ಕ್ರೀಡಾ ಮನೋಭಾವ ವೃದ್ಧಿಸುವ ಕಾರ್ಯಕ್ಕಾಗಿ ಪ್ರಾದೇಶಿಕ ಸಮಿತಿ ಮಹಿಳೆಯರ ಫುಟ್ಬಾಲ್‌ ಪಂದ್ಯಾಟವನ್ನು ಆಯೋಜಿಸಿ ಪ್ರತಿಭೆಗಳಿಗೆ ಅವಕಾಶ ನೀಡಿರುವುದು ಅಭಿನಂದನೀಯ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳ ಬಗ್ಗೆ ಅವಲೋಕಿಸದೆ ನಮ್ಮ ಕ್ರೀಡಾ ಅಭಿರುಚಿಗೆ ತಕ್ಕಂತೆ ಆಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಸಾಯಿ-ವಿರಾರ್‌ ಮಹಾನಗರ ಪಾಲಿಕೆಯ ಮೇಯರ್‌ ರೂಪೇವ್‌ ಜಾಧವ್‌ ಅವರು ಮಾತನಾಡಿ ಶುಭಹಾರೈಸಿದರು. ಸಂಘದ ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬೋಳ ಅವರು ಮಾತನಾಡಿ, ಬಂಟರ ಸಂಘದ ಪ್ರಾದೇಶಿಕ ಸಮಿತಿಯು ಪ್ರಥಮ ಬಾರಿಗೆ ಬಂಟ ಮಹಿಳೆಯರಿಗೆ ಫುಟ್ಬಾಲ್‌ ಪಂದ್ಯಾಟವನ್ನು ಆಯೋಜಿಸಿದ್ದು, ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾಸ್ಫೂರ್ತಿಯಿಂದ ತಂಡಗಳು ಆಡಬೇಕು ಎಂದು ನುಡಿದರು.

ಸಂಘದ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ ಮಾತನಾಡಿ, ಈ ಪ್ರಾದೇಶಿಕ ಸಮಿತಿ ಮಹಿಳೆಯರ ಕ್ರೀಡಾ ಪ್ರತಿಭೆಗೆ ಅವಕಾಶ ನೀಡಿದೆ. ಪಂದ್ಯಾಟದಲ್ಲಿ ಪಾಲ್ಗೊಂಡ ಸಂಘದ ಪ್ರಾದೇಶಿಕ ಸಮಿತಿಗಳು ಗೆಲ್ಲಲು ಪ್ರಯತ್ನಿಸಬೇಕು ಎಂದರು. ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್‌ ಪಕ್ಕಳ ಅವರು ಮಾತನಾಪಿ, ನಮ್ಮ ಸಮಿತಿಯ ಯುವ ವಿಭಾಗವು ಸಕ್ರಿಯವಾಗಿ ವಿವಿಧ ರೀತಿಯ ಸಹಕಾರ ನೀಡುತ್ತಿದೆ. ಯುವ ವಿಭಾಗದವು ಶಿಸ್ತು ಮತ್ತು ಅಚ್ಚುಕಟ್ಟಾಗಿ ಫುಟ್ಬಾಲ್‌ ಪಂದ್ಯಾಟವನ್ನು ಆಯೋಜಿಸಿರುವುದು ಅಭಿನಂದನೀಯ ಎಂದರು.

ಬಂಟರ ಸಂಘದ ಜತೆ ಕೋಶಾಧಿಕಾರಿ ಐಕಳ ಗುಣಪಾಲ್‌ ಶೆಟ್ಟಿ ಅವರು ಮಾತನಾಡಿ, ಈ ಪ್ರಾದೇಶಿಕ ಸಮಿತಿ ಅನೇಕ ಚಟುವಟಿಕೆಗಳನ್ನು ಆಯೋಜಿಸಿದೆ. ಫುಟ್ಬಾಲ್‌ ಪಂದ್ಯಾಟ ಮಹಿಳೆಯರ ಕ್ರೀಡಾಸಕ್ತಿಯನ್ನು ಹೆಚ್ಚಿಸಿದೆ ಎಂದರು.
ವೇದಿಕೆಯಲ್ಲಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ರಂಜನಿ ಸುಧಾಕರ ಹೆಗ್ಡೆ, ಪ್ರಾದೇಶಿಕ ಸಮಿತಿಯ ಸಂಚಾಲಕ ಶಶಿಧರ್‌ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಕರ್ನೂರು ಶಂಕರ್‌ ಆಳ್ವ, ಗೌರವ ಕಾರ್ಯದರ್ಶಿ ಪ್ರವೀಣ್‌ ಶೆಟ್ಟಿ ಕಣಂಜಾರು ಕೋಶಾಧಿಕಾರಿ ವಿಜಯ ಶೆಟ್ಟಿ, ಜತೆ ಕಾರ್ಯದರ್ಶಿ ರತೀಶ್‌ ಶೆಟ್ಟಿ, ಜೊತೆ ಕೋಶಾಧಿಕಾರಿ  ಜಗನ್ನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಜಯಾ  ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಕ್ರೀಡಾ ಸಮಿತಿಯ ವಿಭಾಗದ  ಕಾರ್ಯಾಧ್ಯಕ್ಷ ಅರುಣ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸುಪ್ರೀತ್‌ ಶೆಟ್ಟಿ ನೀರೆ ಹಾಗೂ ಪದಾಧಿಕಾರಿಗಳಾದ ಹರೀಶ್‌ ಶೆಟ್ಟಿ, ಪ್ರಖ್ಯಾತ್‌ ಶೆಟ್ಟಿ, ಶ್ರದ್ಧಾ ಶೆಟ್ಟಿ, ಯಶ್ವಿ‌ನ್‌ ಶೆಟ್ಟಿ, ರಿತೇಶ್‌ ಶೆಟ್ಟಿ, ಪ್ರೀತಿ ಶೆಟ್ಟಿ, ಸಂಜನಾ ಶೆಟ್ಟಿ ಉಪಸ್ಥಿತರಿದ್ದರು. ಪ್ರವೀಣ್‌ ಶೆಟ್ಟಿ ಕಣಂಜಾರು ಕಾರ್ಯಕ್ರಮ ನಿರ್ವಹಿಸಿದರು. ಸುಪ್ರೀತ್‌ ಶೆಟ್ಟಿ ವಂದಿಸಿದರು. ಭಾರತೀಯ ಫುಟ್ಬಾಲ್‌ ತಂಡದ ಆಟಗಾರ್ತಿ ರುಚಿ ಶೆಟ್ಟಿ ಅವರು ಫುಟ್ಬಾಲ್‌ ಆಡುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಪಂದ್ಯಾಟದಲ್ಲಿ ಎಂಟು ತಂಡಗಳು ಭಾಗವಹಿಸಿದ್ದು, ಸಂಜೆಯವರೆಗೆ ನಡೆಯಿತು. ಬಂಟರ ಸಂಘದ ಪದಾಧಿಕಾರಿಗಳು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ 
ಪದಾಧಿಕಾರಿಗಳು, ಸಮಾಜದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅತಿಥಿಯಾಗಿ ಪಾಲ್ಗೊಂಡ  ಭಾರತೀಯ ಫುಟ್ಬಾಲ್‌ ತಂಡದ ಆಟಗಾರ್ತಿ ರುಚಿ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು.
 

ಟಾಪ್ ನ್ಯೂಸ್

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.