ಪುಣೆ ಗುರುದೇವ ಬಳಗ: ಒಡಿಯೂರು ಶ್ರೀ ಜನ್ಮದಿನೋತ್ಸವ


Team Udayavani, Aug 10, 2018, 3:43 PM IST

0908mum11a.jpg

ಪುಣೆ: ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ  ಇದರ ವತಿಯಿಂದ  ದಕ್ಷಿಣದ ಗಾಣಗಾಪುರ ಎಂದೇ ಪ್ರಸಿದ್ಧಿ ಪಡೆದ ಶ್ರೀ ದತ್ತಾಂಜನೆಯಸ್ವಾಮಿ ಕ್ಷೇತ್ರ, ಶ್ರೀ ಗುರುದೇವದತ್ತ ಸಂಸ್ಥಾನಂ,  ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಯವರ ಜನ್ಮ ದಿನೋತ್ಸವ ಆಚರಣೆಯು ಆ. 8 ರಂದು ಪುಣೆ ಶ್ರೀ  ವಜ್ರಮಾತ ಮಹಿಳಾ ವಿಕಾಸ ಕೇಂದ್ರದ  ಮಾಜಿ ಅಧ್ಯಕ್ಷೆ ಪುಷ್ಪಾ ಎಲ್‌. ಪೂಜಾರಿ ಅವರ ನೇತೃತ್ವದಲ್ಲಿ ದನ್ವರ್ಶ್‌ ಬಿಲ್ಡಿಂಗ್‌ನಲ್ಲಿ   ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಶ್ರೀ  ಗುರುದೇವರಿಗೆ ಪೂಜೆ,  ಗುರುವಂದನೆಯೊಂದಿಗೆ ಕಾರ್ಯಕ್ರಮವು  ಪ್ರಾರಂಭಗೊಂಡಿತು. ಆನಂತರ ಶ್ರೀ  ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗು ಬಳಗದ ಸದಸ್ಯರಿಂದ ಬಳಗದ ಭಜನಾ ಗುರು ದಾಮೋದರ ಬಂಗೇರ ಅವರ ಮುಂದಾಳತ್ವದಲ್ಲಿ ಭಜನೆ ನಡೆಯಿತು. ಕೊನೆಯಲ್ಲಿ  ಮಹಾಮಂಗಳಾರತಿ ಪ್ರಸಾದ ವಿತರಣೆ ನೆರವೇರಿತು. ಪುಣೆ ಬಳಗದ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ, ಕಾರ್ಯಕ್ರಮದ ಆಯೋಜಕರಾದ ಪುಷ್ಪಾ ಪೂಜಾರಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಪ್ರೇಮಾ ಎಸ್‌. ಶೆಟ್ಟಿ ಹಾಗು ಬಳಗದ ಸದಸ್ಯ, ಸದಸ್ಯೆಯರು ಗುರುಗಳ ಫೋಟೋಗೆ ಆರತಿ ಎತ್ತುವುದರ ಮೂಲಕ ಗುರುವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುಣೆ ಬಳಗದ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ ಅವರು ಮಾತನಾಡಿ, ಮಾತೃ ದೇವೋ ಭವ, ಪಿತೃ ದೇವೋ ಭವ, ಗುರುದೇವೋ ಭವ ಎಂಬ ವೇದ ವಾಕ್ಯದಂತೆ ನಮ್ಮ ತಂದೆ ತಾಯಿ ನಮಗೆ ಹೇಗೆ ದೇವರೋ ಹಾಗೆಯೇ ಗುರುಗಳು ಕೂಡಾ ದೇವರಾಗಿದ್ದಾರೆ. ನಮ್ಮನ್ನು ಸನ್ಮಾರ್ಗದಲ್ಲಿ ನಡೆಸುವ, ನಮಗೆ ಜೀವನ ಶೈಲಿಯ ಪಾಠವನ್ನು ನೀಡಿ ಅಶಿರ್ವದಿಸಿ ಭಗವಂತನ ದರುಶನ ಮಾಡಿಸುವವನೇ ಗುರು ದೇವರು. ನಿತ್ಯಾನಂದ ಸ್ವಾಮೀಜಿಯವರ ಸಮಾಧಿ ದಿನದ ಪುಣ್ಯ ದಿನದಂದೆ ನಮ್ಮ  ಗುರುವರ್ಯ   ಒಡಿಯೂರಿನ ಒಡೆಯರಾದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವನರ ಜನ್ಮದಿನ. ಸ್ವಾಮೀಜಿಯವರ ಜನ್ಮ ದಿನೋತ್ಸವ ದಂದು ನಾವಿಂದು ಗುರುಭಕ್ತಿಯಿಂದ ಗುರು ವಂದನೆಯನ್ನು  ಸಲ್ಲಿಸಿದ್ದೇವೆ. ಸ್ವಾಮೀಜಿಗಳು  ಸನ್ಯಾಸಿಗಳು  ಜನ್ಮದಿನವನ್ನು  ಆಚರಿಸಿಕೊಳ್ಳುವುದಿಲ್ಲ. ಆದರೆ ಗುರುಭಕ್ತರ ಅಭಿಲಾಷೆಯಂತೆ ಆ ದಿನವನ್ನು ಸಮಾಜ ಉದ್ಧಾರಕ್ಕಾಗಿ ಉಪಯೋಗವಾಗುವಂತೆ ಆಚರಿಸು ತ್ತಾರೆ.  ಈ ನಿಟ್ಟಿನಲ್ಲಿ ಒಡಿಯೂರು ಶ್ರೀಗಳು   ತಮ್ಮ ಜನ್ಮದಿನೋತ್ಸವವನ್ನು ತಮ್ಮ  ಭಕ್ತ ಜನರಿಗೆ, ಬಡ ಜನರಿಗೆ, ಜನ ಸಾಮನ್ಯರಿಗೆ   ಸಹಾಯಕವಾಗುವಂತೆ ಗ್ರಾಮೋತ್ಸವವಾಗಿ ಆಚರಿಸಿ ಅ ಮೂಲಕ ಗ್ರಾಮ ಗ್ರಾಮಗಳಲ್ಲಿ  ಹಲವಾರು ಜನೋಪಯೋಗಿ  ಯೋಜನೆಗಳ ಮೂಲಕ ಸಮಾಜ ಸೇವಾ ಕಾರ್ಯಗಳನ್ನು ಮಾಡಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿ¨ªಾರೆ. ಗ್ರಾಮ ಸ್ವತ್ಛತಾ ಅಭಿಯಾನ, ತುಳುನಾಡಿನ ಸಂಸ್ಕೃತಿಗೆ ಪೂರಕವಾಗಿ ಗ್ರಾಮೀಣ ಕ್ರೀಡಾಕೂಟ, ಗ್ರಾಮವಿಕಾಸ ಯೋಜನೆಯ ಕಾರ್ಯಗಳು, ಬಡ ಕುಟುಂಬಗಳಿಗೆ ಧನ ಸಹಾಯ, ಶೈಕ್ಷಣಿಕ ನೆರವು ಅರೋಗ್ಯ ನೆರವು ಮೊದಲಾದ  ಯೋಜನೆಗಳಿಂದ  ಹಲವಾರು ಸಮಾಜ ಕಾರ್ಯಗಳು ಸಾಕಾರಗೊಳ್ಳುತ್ತಿವೆ. ಸ್ವಾಮೀಜಿ ಯವರ ಸನಾತನ ಸಂಸ್ಕಾರ, ಗ್ರಾಮವಿಕಾಸ, ಶಿಕ್ಷಣ, ವೈದ್ಯಕೀಯ, ಪರಿಸರ ಸಂರಕ್ಷಣೆ ಮೊದಲಾದ  ಸಮಾಜಮುಖೀ ಸೇವಾ ಕಾರ್ಯಗಳ ಮುಖಾಂತರ ಇಂದು  ಹಲವಾರು ಹಳ್ಳಿ, ಗ್ರಾಮಗಳು ಅಭಿವೃದ್ಧಿಯನ್ನು ಹೊಂದಿವೆ. ತಾಲೂಕು, ಜಿÇÉಾ  ಮಟ್ಟದಲ್ಲೂ ಈ ಯೋಜನೆಗಳನ್ನು  ಹಮ್ಮಿಕೊಂಡು ಕಾರ್ಯಗತಗೊಳಿಸಲಾಗುತ್ತಿದೆ. ಗುರುಗಳ ಈ ಎÇÉಾ  ಕಾರ್ಯಗಳಿಗೆ ನಾವು ಕೂಡ ಕೈಜೋಡಿಸುವ ಮೂಲಕ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಳಗದ ಪ್ರಮುಖರಾದ ಉಮೇಶ್‌ ಶೆಟ್ಟಿ, ಸುರೇಶ್‌ ಶೆಟ್ಟಿ, ದಿನೇಶ್‌ ಶೆಟ್ಟಿ, ಧನಂ ಜಯ್‌ ಪೂಜಾರಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಪ್ರಮುಖರಾದ  ವೀಣಾ ಪಿ. ಶೆಟ್ಟಿ, ಶೋಭಾ ಯು. ಶೆಟ್ಟಿ, ಸರೋಜಿನಿ ಡಿ. ಬಂಗೇರ, ಸುಮನಾ ಎಸ್‌. ಹೆಗ್ಡೆ, ಸುಜಾತಾ  ಶೆಟ್ಟಿ,  ಆಶಾ ವಿ. ಶೆಟ್ಟಿ, ಶ್ವೇತಾ ಎಚ್‌. ಮೂಡಬಿದ್ರಿ, ಮಮತಾ ಶೆಟ್ಟಿ, ಸುಶೀಲಾ ಮೂಲ್ಯ   ಹಾಗು ಹೆಚ್ಚಿನ ಸಂಖ್ಯೆಯ ಗುರು ಭಕ್ತರು ಉಪಸ್ಥಿತರಿದ್ದು ಗುರು ಕೃಪೆಗೆ ಪಾತ್ರರಾದರು. ಕೊನೆಯಲ್ಲಿ ಪ್ರಸಾದ ವಿತರಣೆ, ಲಘು ಉಪಾಹಾರ ನಡೆಯಿತು.   

ಚಿತ್ರ-ವರದಿ –  ಹರೀಶ್‌  ಮೂಡಬಿದ್ರಿ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.