ಅಜೆಕಾರು ಬಳಗದಿಂದ ಮಾನಿಷಾದ ತಾಳಮದ್ದಳೆ


Team Udayavani, Aug 15, 2018, 1:43 PM IST

1308mum11a.jpg

ಮುಂಬಯಿ: ಜುಹೂ- ಅಂಧೇರಿ- ವಸೋìವಾ- ವಿಲೇ ಪಾರ್ಲೆ ಅಸೋಸಿಯೇಶನ್‌ ಆಫ್‌ ಬಂಟ್ಸ್‌-ಜವಾಬ್‌ ಇದರ ಆಶ್ರಯದಲ್ಲಿ ಜವಾಬ್‌ನ ಮಾಜಿ ಅಧ್ಯಕ್ಷ ಹಾಗೂ ವಿಶ್ವಸ್ತ ರಘು ಎಲ್‌. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನಿರ್ದೇಶನದಲ್ಲಿ ಆ. 12ರಂದು ಅಪರಾಹ್ನ 3ರಿಂದ ಅಂಧೇರಿ ಪಶ್ಚಿಮದ ನ್ಯೂ ಲಿಂಕ್‌ರೋಡ್‌, ಸ್ಟಾರ್‌ ಬಜಾರ್‌ ಮುಂಭಾಗದ ಹೊಟೇಲ್‌ ಪೆಪಿಲಾನ್‌ ಪಾರ್ಕ್‌ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯಿತು.

ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ “ಮಾನಿಷಾದ’ ಎಂಬ ಪೌರಾಣಿಕ ಕಥಾ ಪ್ರಸಂಗದ ತಾಳಮದ್ದಳೆಯು ನೂರಾರು ಕಲಾಭಿಮಾನಿಗಳ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು.  ಜವಾಬ್‌ನ ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ, ಉಪಾಧ್ಯಕ್ಷ ಸಿಎ ಐ. ಆರ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಶೆಟ್ಟಿ ಕಡಂದಲೆ, ಗೌರವ ಕೋಶಾಧಿಕಾರಿ ಅಶೋಕ್‌ ಕುಮಾರ್‌ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಟಿ. ವಿಶ್ವನಾಥ ಶೆಟ್ಟಿ, ಜೊತೆ ಕೋಶಾಧಿಕಾರಿ ಶೇಖರ್‌ ಹೆಗ್ಡೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಮಧುಕರ್‌ ಎ. ಶೆಟ್ಟಿ, ಜವಾಬ್‌ನ ಮಾಜಿ ಅಧ್ಯಕ್ಷರು, ವಿಶ್ವಸ್ತರುಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಯಕ್ಷಗಾನದ ಪ್ರಾಯೋಜಕರಾದ ರಘು ಎಲ್‌. ಶೆಟ್ಟಿ, ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ ಅವರು ಅತಿಥಿ ಕಲಾವಿದರು ಹಾಗೂ ತಂಡದ ಸದಸ್ಯರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. 

ಅಜೆಕಾರು ಕಲಾಭಿಮಾನಿ ಬಳ ಗದ ವತಿಯಿಂದ ಕಾರ್ಯಕ್ರಮದ ಪ್ರಾಯೋಜಕ ರಘು ಎಲ್‌. ಶೆಟ್ಟಿ ಹಾಗೂ ಜವಾಬ್‌ನ ಪದಾಧಿಕಾರಿಗಳನ್ನು ಪುಷ್ಪ ಗುತ್ಛವನ್ನಿತ್ತು ಗೌರವಿಸಲಾಯಿತು.

ಜವಾಬ್‌ನ ಗೌರವ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಶೆಟ್ಟಿ ಕಡಂದಲೆ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಮಾನಿಷಾದ ತಾಳಮದ್ದಳೆ ನಡೆಯಿತು. 
ಹಿಮ್ಮೇಳದಲ್ಲಿ ಭಾಗವತರಾಗಿ ದೇವಿಪ್ರಸಾದ್‌ ಆಳ್ವ ತಲಪಾಡಿ, ಚೆಂಡೆಯಲ್ಲಿ ದಯಾನಂದ ಶೆಟ್ಟಿಗಾರ್‌ ಮಿಜಾರ್‌, ಮದ್ದಳೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು ಅವರು ಭಾಗವಹಿಸಿದ್ದರು. ಕಲಾವಿದರಾಗಿ ಭಾಸ್ಕರ ರೈ ಕುಕ್ಕುವಳ್ಳಿ, ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ಸದಾಶಿವ ಆಳ್ವ ತಲಪಾಡಿ, ವೆಂಕಟೇಶ್‌ ಕುಮಾರ್‌ ಉಳುವಾಣ, ವೇಣುಗೋಪಾಲ್‌ ಭಟ್‌ ಶೇಣಿ, ವಿಜಯ ಶಂಕರ ಆಳ್ವ ಅಳಿಕೆ ಅವರು ಪಾಲ್ಗೊಂಡಿದ್ದರು.  ದಿನೇಶ್‌ ಶೆಟ್ಟಿ ಸಹಕರಿಸಿದರು. 

ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮಂಡ್ಕೂರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.