ಶಿಕ್ಷಕರು ಸಮಾಜದ ಶಿಲ್ಪಿಗಳು: ಗ್ರೇಸ್‌ ಪಿಂಟೋ


Team Udayavani, Sep 5, 2018, 1:39 PM IST

45.jpg

ಮುಂಬಯಿ: ಪ್ರತಿ ವರ್ಷ ಸೆ. 5ರಂದು ನಾವೆಲ್ಲಾ ನಮ್ಮ ದೇಶದ ಎರಡನೇ ರಾಷ್ಟ್ರಪತಿ ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸುತ್ತೇವೆ.  ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಒಬ್ಬ ಶ್ರೇಷ್ಠ ತಣ್ತೀಜ್ಞಾನಿ, ನೆನಪಿನಲ್ಲಿ ಅಚ್ಚಳಿಯದೆ ಉಳಿಯುವ ಶಿಕ್ಷಕ ಮಾತ್ರವಲ್ಲ ಹೃದಯವಂತಿಕೆಯಲ್ಲಿ ಒಬ್ಬ ಮಹಾನ್‌ ಮಾನವತಾವಾದಿ. ಹಾಗಾಗಿ ಈ ದೇಶದ ಭಾವೀ ನಾಯಕರನ್ನು ಬೆಳೆಸಿ, ಪೋಷಿಸುವ, ಅವರಲ್ಲಿ ದೂರದೃಷ್ಟಿತ್ವ ಬೆಳೆಸುವ ಮತ್ತು ಜವಾಬ್ದಾರಿಯುತ ನಾಗರಿಕರನ್ನು ಸೃಷ್ಟಿಸುವಲ್ಲಿ ಅಪಾರ ಕೊಡುಗೆಯನ್ನು ನೀಡುವ ಶಿಕ್ಷಕರಿಗೆ ಅವರ ಹುಟ್ಟಿದ ದಿನವನ್ನು ಅರ್ಪಿಸಲಾಗಿದೆ ಎಂದು ರಾಯನ್‌ ಇಂಟರ್‌ನ್ಯಾಷನಲ್‌ ಶಿಕ್ಷಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಮೇಡಂ ಗ್ರೇಸ್‌ ಪಿಂಟೋ ನುಡಿದರು.

ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಮಂಗಳವಾರ ವಿದ್ಯಾರ್ಥಿಗಳನ್ನು  ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವು, ವಿದ್ಯಾರ್ಥಿ ಜೀವನದಲ್ಲಿ ದೇಶದ ಭಾವೀ ಪ್ರಜೆಗಳನ್ನು ಕೈಹಿಡಿದು ಮುನ್ನಡೆಸಿ ಉದಾತ್ತ ಮಾರ್ಗದಲ್ಲಿ ಹೆಜ್ಜೆ ಇಡಲು ಬೆಳಕು ನೀಡುವವರು ಈ ಶಿಕ್ಷಕರು. ಅವರು ಸಮಾಜಕ್ಕೆ ನೀಡುವ ನಿಷ್ಕಲ್ಮಷ ಮತ್ತು ನಿಸ್ವಾರ್ಥ ಸೇವೆಗೆ ನಾನು ಆ ಭಗವಂತನಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯಗಳನ್ನು ತಿಳಿಹೇಳುತ್ತಾರೆ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ, ಕಾಳಜಿಯುಳ್ಳ ಮಾನವರಾಗಿ ರೂಪಿಸುತ್ತಾರೆ. ನಮ್ಮ ಕಳೆದ ದಿನಗಳನ್ನು ಒಂದು ಬಾರಿ ಹಿಂತಿರುಗಿ ನೋಡಿದರೆ ನಮ್ಮ ಜೀವನವನ್ನು ರೂಪಿಸಲು ಶಿಕ್ಷಕರು ನಿರ್ವಹಿಸಿದ ಪಾತ್ರದ ಮಹತ್ವವೇನು ಎಂಬುವುದು ಅರ್ಥವಾಗುತ್ತದೆ. ನಮ್ಮ ಜೀವನಕ್ಕೆ ಆಕಾರ, ಸ್ವರೂಪ ನೀಡಿದ ಶಿಕ್ಷಕರಿಗೆ ನಾವು ಚಿರಋಣಿ. ಇಂದು ತಾಂತ್ರಿಕತೆಯ ಹುಟ್ಟು ಮತ್ತು ತ್ವರಿತ ಬೆಳವಣಿಗೆ ಶಿಕ್ಷಣದ ಭೂದೃಶ್ಯವನ್ನೇ ಬದಲಾಯಿಸಿದೆ. 

ಪರಿಣಾಮವಾಗಿ ನಮ್ಮ ಶಿಕ್ಷಕರ ಪಾತ್ರವೂ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಶಿಕ್ಷಕರು ಶಿಕ್ಷಣ ವ್ಯವಸ್ಥೆಯ ಸಮಗ್ರ ಭಾಗವಾಗಿದ್ದಾರೆ ಮತ್ತು ಈ ವಿಕಸಿಸುತ್ತಿರುವ ಜಾಗತೀಕರಣದ ಜಗತ್ತಿನಲ್ಲಿ ಶಿಕ್ಷಕರು ಎಂದಿಗೂ ನಿಂತ ನೀರಾಗಿಲ್ಲ ಅಥವಾ  ಕಲಿಕಾ ಪ್ರವೃತ್ತಿಯಲ್ಲಿ ಹಳೆಯ ಶೈಲಿಯಲ್ಲಿಲ್ಲ. ಶಿಕ್ಷಕರು ಕಲಿಕಾ ವಿಚಾರದಲ್ಲಿ ನಿರಂತರ ಮೇಲ್ದರ್ಜೆಗೇರುವ ಅಗತ್ಯವಿದೆ. ಕಲಿಕಾ ವಿಧಾನ ಮತ್ತು ಕಲಿಕಾ ವೈವಿಧ್ಯತೆಗಳನ್ನು ಅಭಿವೃದ್ಧಿಪಡಿಸುವುದು ಆವಶ್ಯಕ. ಇಂದಿನ ದಿನಗಳಲ್ಲಿ ಒಂದು ಮೌಸ್‌ ಬಟನ್‌ ಕ್ಲಿಕ್‌ ಮಾಡಿದರೆ ಎಲ್ಲಾ ವಿಷಯಗಳು ದೊರೆಯಬಲ್ಲವು, ಆದರೆ ಹೊಸ ಪರಿಕಲ್ಪನೆ ಮತ್ತು ಕೌಶಲ್ಯಗಳನ್ನು ಕಲಿಯಲು ಶಿಕ್ಷಕರ ನೆರವು ಅಗತ್ಯವಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಲ್ಲಿ ಮಾರ್ಗದರ್ಶಕರನ್ನು ಕಾಣುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳ ಧೈರ್ಯ ಮತ್ತು ವಿಶ್ವಾಸವನ್ನು ಹೆಚ್ಚಿಸುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನಕ್ಕೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಸ್ವಸ್ಥ ಸಮಾಜದ ಭಾವೀ ಪ್ರಜೆಗಳ ನಿರ್ಮಾತೃಗಳಾಗಿದ್ದಾರೆ. 

ಈ ಬಾರಿಯ ಶಿಕ್ಷಕರ ದಿನಾಚರಣೆಗೆ ನಾವೆಲ್ಲರೂ ಸಮಾಜಕ್ಕೆ ನೀವು ನೀಡಿದ ಅಮೂಲ್ಯವಾದ ಕೊಡುಗೆಯನ್ನು ಅರ್ಥೈಸಿಕೊಂಡು ಗೌರವಿಸುತ್ತೇವೆ. ಸಮಾಜಕ್ಕೆ ನೀವು ಕೊಡುತ್ತಿರುವ ನಿಸ್ವಾರ್ಥ ಸೇವೆಯನ್ನು ಉದಾರವಾಗಿ ಮುಂದುವರಿಸಿ. ಭಗವಂತನ ಕೃಪೆ ನಿಮ್ಮೆಲ್ಲರ ಮೇಲಿರಲಿ ಎಂದು ನುಡಿದು ಶುಭಹಾರೈಸಿದರು.
 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.