ಶಿಕ್ಷಕರು ಸಮಾಜದ ಶಿಲ್ಪಿಗಳು: ಗ್ರೇಸ್‌ ಪಿಂಟೋ


Team Udayavani, Sep 5, 2018, 1:39 PM IST

45.jpg

ಮುಂಬಯಿ: ಪ್ರತಿ ವರ್ಷ ಸೆ. 5ರಂದು ನಾವೆಲ್ಲಾ ನಮ್ಮ ದೇಶದ ಎರಡನೇ ರಾಷ್ಟ್ರಪತಿ ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸುತ್ತೇವೆ.  ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ ಒಬ್ಬ ಶ್ರೇಷ್ಠ ತಣ್ತೀಜ್ಞಾನಿ, ನೆನಪಿನಲ್ಲಿ ಅಚ್ಚಳಿಯದೆ ಉಳಿಯುವ ಶಿಕ್ಷಕ ಮಾತ್ರವಲ್ಲ ಹೃದಯವಂತಿಕೆಯಲ್ಲಿ ಒಬ್ಬ ಮಹಾನ್‌ ಮಾನವತಾವಾದಿ. ಹಾಗಾಗಿ ಈ ದೇಶದ ಭಾವೀ ನಾಯಕರನ್ನು ಬೆಳೆಸಿ, ಪೋಷಿಸುವ, ಅವರಲ್ಲಿ ದೂರದೃಷ್ಟಿತ್ವ ಬೆಳೆಸುವ ಮತ್ತು ಜವಾಬ್ದಾರಿಯುತ ನಾಗರಿಕರನ್ನು ಸೃಷ್ಟಿಸುವಲ್ಲಿ ಅಪಾರ ಕೊಡುಗೆಯನ್ನು ನೀಡುವ ಶಿಕ್ಷಕರಿಗೆ ಅವರ ಹುಟ್ಟಿದ ದಿನವನ್ನು ಅರ್ಪಿಸಲಾಗಿದೆ ಎಂದು ರಾಯನ್‌ ಇಂಟರ್‌ನ್ಯಾಷನಲ್‌ ಶಿಕ್ಷಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಮೇಡಂ ಗ್ರೇಸ್‌ ಪಿಂಟೋ ನುಡಿದರು.

ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಮಂಗಳವಾರ ವಿದ್ಯಾರ್ಥಿಗಳನ್ನು  ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವು, ವಿದ್ಯಾರ್ಥಿ ಜೀವನದಲ್ಲಿ ದೇಶದ ಭಾವೀ ಪ್ರಜೆಗಳನ್ನು ಕೈಹಿಡಿದು ಮುನ್ನಡೆಸಿ ಉದಾತ್ತ ಮಾರ್ಗದಲ್ಲಿ ಹೆಜ್ಜೆ ಇಡಲು ಬೆಳಕು ನೀಡುವವರು ಈ ಶಿಕ್ಷಕರು. ಅವರು ಸಮಾಜಕ್ಕೆ ನೀಡುವ ನಿಷ್ಕಲ್ಮಷ ಮತ್ತು ನಿಸ್ವಾರ್ಥ ಸೇವೆಗೆ ನಾನು ಆ ಭಗವಂತನಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯಗಳನ್ನು ತಿಳಿಹೇಳುತ್ತಾರೆ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ, ಕಾಳಜಿಯುಳ್ಳ ಮಾನವರಾಗಿ ರೂಪಿಸುತ್ತಾರೆ. ನಮ್ಮ ಕಳೆದ ದಿನಗಳನ್ನು ಒಂದು ಬಾರಿ ಹಿಂತಿರುಗಿ ನೋಡಿದರೆ ನಮ್ಮ ಜೀವನವನ್ನು ರೂಪಿಸಲು ಶಿಕ್ಷಕರು ನಿರ್ವಹಿಸಿದ ಪಾತ್ರದ ಮಹತ್ವವೇನು ಎಂಬುವುದು ಅರ್ಥವಾಗುತ್ತದೆ. ನಮ್ಮ ಜೀವನಕ್ಕೆ ಆಕಾರ, ಸ್ವರೂಪ ನೀಡಿದ ಶಿಕ್ಷಕರಿಗೆ ನಾವು ಚಿರಋಣಿ. ಇಂದು ತಾಂತ್ರಿಕತೆಯ ಹುಟ್ಟು ಮತ್ತು ತ್ವರಿತ ಬೆಳವಣಿಗೆ ಶಿಕ್ಷಣದ ಭೂದೃಶ್ಯವನ್ನೇ ಬದಲಾಯಿಸಿದೆ. 

ಪರಿಣಾಮವಾಗಿ ನಮ್ಮ ಶಿಕ್ಷಕರ ಪಾತ್ರವೂ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಶಿಕ್ಷಕರು ಶಿಕ್ಷಣ ವ್ಯವಸ್ಥೆಯ ಸಮಗ್ರ ಭಾಗವಾಗಿದ್ದಾರೆ ಮತ್ತು ಈ ವಿಕಸಿಸುತ್ತಿರುವ ಜಾಗತೀಕರಣದ ಜಗತ್ತಿನಲ್ಲಿ ಶಿಕ್ಷಕರು ಎಂದಿಗೂ ನಿಂತ ನೀರಾಗಿಲ್ಲ ಅಥವಾ  ಕಲಿಕಾ ಪ್ರವೃತ್ತಿಯಲ್ಲಿ ಹಳೆಯ ಶೈಲಿಯಲ್ಲಿಲ್ಲ. ಶಿಕ್ಷಕರು ಕಲಿಕಾ ವಿಚಾರದಲ್ಲಿ ನಿರಂತರ ಮೇಲ್ದರ್ಜೆಗೇರುವ ಅಗತ್ಯವಿದೆ. ಕಲಿಕಾ ವಿಧಾನ ಮತ್ತು ಕಲಿಕಾ ವೈವಿಧ್ಯತೆಗಳನ್ನು ಅಭಿವೃದ್ಧಿಪಡಿಸುವುದು ಆವಶ್ಯಕ. ಇಂದಿನ ದಿನಗಳಲ್ಲಿ ಒಂದು ಮೌಸ್‌ ಬಟನ್‌ ಕ್ಲಿಕ್‌ ಮಾಡಿದರೆ ಎಲ್ಲಾ ವಿಷಯಗಳು ದೊರೆಯಬಲ್ಲವು, ಆದರೆ ಹೊಸ ಪರಿಕಲ್ಪನೆ ಮತ್ತು ಕೌಶಲ್ಯಗಳನ್ನು ಕಲಿಯಲು ಶಿಕ್ಷಕರ ನೆರವು ಅಗತ್ಯವಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಲ್ಲಿ ಮಾರ್ಗದರ್ಶಕರನ್ನು ಕಾಣುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳ ಧೈರ್ಯ ಮತ್ತು ವಿಶ್ವಾಸವನ್ನು ಹೆಚ್ಚಿಸುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನಕ್ಕೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಸ್ವಸ್ಥ ಸಮಾಜದ ಭಾವೀ ಪ್ರಜೆಗಳ ನಿರ್ಮಾತೃಗಳಾಗಿದ್ದಾರೆ. 

ಈ ಬಾರಿಯ ಶಿಕ್ಷಕರ ದಿನಾಚರಣೆಗೆ ನಾವೆಲ್ಲರೂ ಸಮಾಜಕ್ಕೆ ನೀವು ನೀಡಿದ ಅಮೂಲ್ಯವಾದ ಕೊಡುಗೆಯನ್ನು ಅರ್ಥೈಸಿಕೊಂಡು ಗೌರವಿಸುತ್ತೇವೆ. ಸಮಾಜಕ್ಕೆ ನೀವು ಕೊಡುತ್ತಿರುವ ನಿಸ್ವಾರ್ಥ ಸೇವೆಯನ್ನು ಉದಾರವಾಗಿ ಮುಂದುವರಿಸಿ. ಭಗವಂತನ ಕೃಪೆ ನಿಮ್ಮೆಲ್ಲರ ಮೇಲಿರಲಿ ಎಂದು ನುಡಿದು ಶುಭಹಾರೈಸಿದರು.
 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.